ಮೇ 12: ದುಬಾೖಯಿಂದ ಮಂಗಳೂರಿಗೆ ವಿಮಾನ
Team Udayavani, May 8, 2020, 1:23 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕೋವಿಡ್ ದಿಂದ ದುಬಾೖಯಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಕರಾವಳಿ ಭಾಗದ ಜನರನ್ನು ಹೊತ್ತ ಮೊದಲ ವಿಮಾನವು ಮೇ 12ರಂದು ಮಂಗಳೂರಿಗೆ ಆಗಮಿಸಲಿದೆ. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಈ ವಿಷಯವನ್ನು “ಉದಯವಾಣಿ’ಗೆ ಖಚಿತಪಡಿಸಿದ್ದಾರೆ. ಕೇರಳ ಮತ್ತಿತರ ಭಾಗಗಳ ಜನರನ್ನು ಕರೆ ತರಲು ವಿಮಾನ ವ್ಯವಸ್ಥೆ ಮಾಡಿರುವಾಗ ಕರ್ನಾಟಕ ಕರಾವಳಿಯ ಜನರನ್ನು ಕರೆತರಲು ವ್ಯವಸ್ಥೆ ಮಾಡಿಲ್ಲ ವೇಕೆ ಎಂದು ಹಲವಾರು ಮಂದಿ ಪ್ರಶ್ನಿಸಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ಸಚಿವರ ಜತೆ ಮಾತನಾಡಿ ದುಬಾೖಯಿಂದ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ವಿಮಾನದಲ್ಲಿ ಹಿರಿಯ ನಾಗರಿಕರು, ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು, ಗರ್ಭಿಣಿಯರು ಸೇರಿದಂತೆ ತುರ್ತಾಗಿ ತಾಯ್ನಾಡಿಗೆ ಆಗಮಿಸಬೇಕಾಗಿ ರುವ 177 ಮಂದಿ ಮಂಗಳೂರಿಗೆ ಬರಲಿದ್ದಾರೆ. ಮೇ 13ರಂದು ದುಬಾೖಯಿಂದ ಮೊದಲ ವಿಮಾನ ಆಗಮಿಸುವ ಕುರಿತು ವೇಳಾಪಟ್ಟಿ ತಯಾರಿಸಲಾಗಿತ್ತು. ಆದರೆ ಈಗ ಒಂದು ದಿನ ಮೊದಲೇ ಮಂಗಳೂರಿಗೆ ಕೊಲ್ಲಿ ರಾಷ್ಟ್ರದಿಂದ ವಿಮಾನ ಆಗಮಿಸುತ್ತಿದೆ. ದುಬಾೖಯಿಂದ ಎರಡನೇ ವಿಮಾನವು ಮೇ 15ರಂದು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ.
ದಿಲ್ಲಿ-ಬೆಂಗಳೂರು ರೈಲು
ಉತ್ತರ ಭಾರತದ ದಿಲ್ಲಿ, ಹರ್ಯಾಣ, ಪಂಜಾಬ್ ರಾಜ್ಯಗಳಲ್ಲಿ ಇರುವ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆ ತರಲು ಮೇ 9ರಂದು ದಿಲ್ಲಿಯಿಂದ ಬೆಂಗಳೂರಿಗೆ ರೈಲು ವ್ಯವಸ್ಥೆ ಮಾಡಲಾಗಿದೆ. ದಿಲ್ಲಿಯ 620 ಮಂದಿ ಸೇರಿದಂತೆ ಒಟ್ಟು 920 ಮಂದಿ ಈ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ ಎಂದು ಸಚಿವ ಡಿವಿಎಸ್ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ಲಂಡನ್ನಿಂದ ಬೆಂಗಳೂರಿಗೆ ವಿಮಾನ
ವಿದೇಶಗಳಲ್ಲಿರುವ 6,500 ಕನ್ನಡಿಗರು ಭಾರತಕ್ಕೆ ಬರಲು ನೋಂದಾಯಿಸಿದ್ದಾರೆ. ಲಂಡನ್ನಿಂದ ಮೊದಲ ವಿಮಾನ ಮೇ 11ರಂದು ಬೆಂಗಳೂರಿಗೆ ಬರಲಿದ್ದು, 250 ಮಂದಿ ಕನ್ನಡಿಗರು ಆಗಮಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ