ಅಡಿಕೆಯ ಔಷಧೀಯ ಅಂಶ – ಮಧ್ಯಾಂತರ ವರದಿ ಕೇಂದ್ರಕ್ಕೆ: ಸತೀಶ್ಚಂದ್ರ


Team Udayavani, Apr 10, 2018, 7:00 AM IST

26.jpg

ಮಂಗಳೂರು: ಅಡಿಕೆಯಲ್ಲಿರುವ ಔಷಧೀಯ ಅಂಶಗಳ ಕುರಿತು ವಿಸ್ತೃತ ವರದಿ ಸಿದ್ಧಪಡಿಸಲು ತೀರ್ಮಾನಿಸಲಾಗಿದ್ದು, ಮಧ್ಯಾಂತರ ವರದಿಯನ್ನು ಈಗಾಗಲೇ ಕೇಂದ್ರ ಕೃಷಿ ಸಚಿವರು ಹಾಗೂ ಆರೋಗ್ಯ ಸಚಿವರಿಗೆ ಸಲ್ಲಿಸಲಾಗಿದೆ. ಈ ಮೂಲಕ ಕೇಂದ್ರ ಸರಕಾರ ಅಡಿಕೆಯ ಕುರಿತಾದ ಗೊಂದಲಗಳನ್ನು ನಿವಾರಿಸಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್‌. ಆರ್‌. ಸತೀಶ್ಚಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಕೃಷಿ ಸಚಿವರಲ್ಲಿ ಅಡಿಕೆಯ ಔಷಧೀಯ ಗುಣಗಳ ಸಂಶೋಧನೆಗೆ ಸಿಪಿಸಿಆರ್‌ಐಯನ್ನು ನೋಡಲ್‌ ಏಜೆನ್ಸಿಯಾಗಿ ನೇಮಕ ಮಾಡಿ ಅಡಿಕೆಯ ಕುರಿತು ರಾಸಾಯನಿಕ ಅನ್ವೇಷಣೆ, ಅಡಿಕೆ ಸೇವನೆ ಮಾಡುವವರ ಸರ್ವೇ, ಔಷಧೀಯ ಗುಣಗಳ ಕುರಿತು ಸಿಎಸ್‌ಐಆರ್‌, ಸಿಐಎಂಎಪಿ, ಸಿಎಫ್ಟಿಆರ್‌ಐ, ಸಿಸಿಎಬಿ ಮತ್ತು ಬೆಂಗಳೂರಿನ ಕಿದ್ವಾಯಿ ಮೆಮೋರಿಯಲ್‌ ಇನ್‌ಸ್ಟಿಟ್ಯೂಟ್‌ ಸಹಯೋಗದಲ್ಲಿ ವಿಸ್ತೃತ ವರದಿ ತಯಾರಿಸಲು ಕೋರಲಾಗಿತ್ತು.

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಬದಲಾಗಿ ಅದು ಕ್ಯಾನ್ಸರನ್ನು ಗುಣಪಡಿಸುತ್ತದೆ ಎಂಬುದು ಇತ್ತೀಚೆಗಿನ ಸಂಶೋಧನೆಯಿಂದ ದೃಢಪಟ್ಟಿದೆ. ಹೀಗಾಗಿ ಈ ಕುರಿತು ಮಧ್ಯಾಂತರ ವರದಿಯನ್ನು ಕೇಂದ್ರ ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌ ಹಾಗೂ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ನೇತೃತ್ವದಲ್ಲಿ ಕ್ಯಾಂಪ್ಕೋ ಮತ್ತು ರಾಜ್ಯ ಅಡಿಕೆ ಫೆಡರೇಶನ್‌ನ ಪ್ರತಿನಿಧಿಗಳು ಸಲ್ಲಿಸಿದ್ದಾರೆ. ಜತೆಗೆ ಈ ಸಂದರ್ಭ ಆರೋಗ್ಯ ಸಚಿವರಲ್ಲಿ ಇದರ ವಿಸ್ತೃತ ವರದಿ ಬರುವವರೆಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಇರುವ ದಾವೆಯನ್ನು ಮುಂದುವರಿಸದಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವಂತೆ ಒತ್ತಾಯಿಸಲಾಗಿದೆ. ಮುಂದಿನ 6 ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಕೆಯಾಗಲಿದೆ ಎಂದು ತಿಳಿಸಿದರು.

ರಾಜ್ಯ ಅಡಿಕೆ ಫೆಡರೇಶನ್‌ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಮಾತನಾಡಿ, ಅಡಿಕೆ ಬೆಳೆಗಾರರು ಯಾವುದೇ ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೊಳಗಾಗಬಾರದು. ಎಪ್ರಿಲ್‌ ಮೊದಲ ವಾರದಿಂದ ಅಡಿಕೆ ಧಾರಣೆಯೂ ಏರಿಕೆಯ ಹಾದಿಯಲ್ಲಿ ಸಾಗುತ್ತಿದೆ. ಅಡಿಕೆ ದಾಸ್ತಾನಿಗೆ ಆರೋಗ್ಯ ಇಲಾಖೆ ದೃಢಪಡಿಸಿದ ಕ್ರಮವನ್ನೇ ಬಳಸಲಾಗುತ್ತಿದೆ ಎಂದರು.

ಕಾಳುಮೆಣಸು ಧಾರಣೆ ಇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಸ್ತುತ ಕೆ.ಜಿ.ಗೆ 140 ರೂ.ಗೆ ವಿಯೆಟ್ನಾಂನಿಂದ ಕಾಳುಮೆಣಸು ಆಮದಾಗುತ್ತಿದೆ. ಆದರೆ ಇದರ ಆಮದಿನ ಕುರಿತು ಕೇಂದ್ರ ಸರಕಾರ ನಿಯಂತ್ರಣ ಹೇರಿರುವುದರಿಂದ ಪ್ರಸ್ತುತ ಧಾರಣೆ 370 ರೂ.ಗಳಲ್ಲಿ ನಿಂತಿದೆ. ಇಲ್ಲದೆ ಇದ್ದರೆ 200 ರೂ.ಗೆ ತಲುಪುತ್ತಿತ್ತು ಎಂದು ಕೊಂಕೋಡಿ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಎನ್‌. ಸುಬ್ರಹ್ಮಣ್ಯ ಭಟ್‌, ಡಾ| ಕೇಶವ ಭಟ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.