ವಿದ್ಯುತ್‌ “ಶಾಕಿಂಗ್‌ ಸ್ಪಾಟ್‌’ ಗುರುತಿಸುವ ಕೆಲಸಕ್ಕೆ ಮುಂದಾದ ಮೆಸ್ಕಾಂ

ಎರಡನೇ ಹಂತದಲ್ಲಿ ಕಾರ್ಯಪ್ರವೃತ್ತವಾದ ಇಲಾಖೆ, ಮಹಾನಗರ ಪಾಲಿಕೆ

Team Udayavani, Dec 20, 2019, 10:52 PM IST

dc-31

ನಗರದ ಮೆಸ್ಕಾಂ ಮುಂಭಾಗ ಡಿವೈಡರ್‌ನಲ್ಲಿ ಅಳವಡಿಸಿದ ಬೀದಿ ದೀಪದ ಎಲ್‌ಟಿಡಿ ಬಾಕ್ಸ್‌ ಮುಚ್ಚಿರುವುದು.

ಮಹಾನಗರ: ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯ ಆಹ್ವಾನಿಸುವ ರೀತಿ ಅಳವಡಿಸಲಾಗಿರುವ ವಿದ್ಯುತ್‌ ಸಂಪರ್ಕ-ಸರಬರಾಜಿನ ಟ್ರಾನ್ಸ್‌ಫಾರ್ಮ ರ್‌ಗಳು, ತುಂಡಾಗಿ ಹೋಗಿರುವ ವಯರ್‌ಗಳು, ಎಲ್‌ಟಿಡಿ ಬಾಕ್ಸ್‌ಗಳು, ಸ್ವಿಚ್‌ ಬೋರ್ಡ್‌ಗಳನ್ನು ರಿಪೇರಿ ಮಾಡುವ ದಿಕ್ಕಿನಲ್ಲಿ ಮೆಸ್ಕಾಂ (ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ) ಮತ್ತು ಮಹಾನಗರ ಪಾಲಿಕೆ ಎರಡನೇ ಹಂತದಲ್ಲಿ ಕಾರ್ಯಪ್ರವೃತ್ತವಾಗಿವೆ.

ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್‌ ಸಂಪರ್ಕ ಹಾಗೂ ಸರಬರಾಜು ವ್ಯವಸ್ಥೆ ಸಮರ್ಪಕವಾಗಿ ನಿರ್ವಹಣೆ ಆಗದಿರುವ ಕಾರಣ ಸಾರ್ವಜನಿಕರಿಗೆ ಎದುರಾಗಿರುವ ಅಪಾಯದ ಕುರಿತಂತೆ “ಸುದಿನ’ವು ಕಳೆದ ಕೆಲ ದಿನಗಳ ಹಿಂದೆ “ವಿದ್ಯುತ್‌-ಆಪತ್ತು ಇರಲಿ ಎಚ್ಚರ’ ಎಂಬ ಶೀರ್ಷಿಕೆಯಡಿಯಲ್ಲಿ ಫೋಟೋಗಳನ್ನು ಪ್ರಕಟಿಸಿತ್ತು. ಎಚ್ಚೆತ್ತುಕೊಂಡ ಸಂಬಂಧಪಟ್ಟ ಇಲಾಖೆ ಕೆಲವು ಕಡೆಗಳಲ್ಲಿ ತತ್‌ಕ್ಷಣದ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ನಗರದ ಮೆಸ್ಕಾಂ ಕಚೇರಿ ಮುಂಭಾಗದ ಡಿವೈಡರ್‌ನಲ್ಲಿ ಬೀದಿದೀಪದ ಎಲ್‌ಟಿಡಿ ಬಾಕ್ಸ್‌ ತೆರೆದಿಟ್ಟು ಸಾರ್ವಜನಿಕರಿಗೆ ಅಪಾಯ ಸೂಚಿಸುತ್ತಿತ್ತು. ಈ ಬಗ್ಗೆ “ಸುದಿನ’ ದಲ್ಲಿ ಫೋಟೋ ಪ್ರಕಟಿಸಲಾಗಿದ್ದು, ಈಗ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ತತ್‌ಕ್ಷಣಕ್ಕೆ ಬಾಕ್ಸ್‌ ಮುಚ್ಚುವ ಕೆಲಸಕ್ಕೆ ಮುಂದಾಗಿದೆ. ಅದೇ ರೀತಿ ಹಂಪನಕಟ್ಟೆಯ ಫುಟ್‌ಪಾತ್‌ನಲ್ಲಿಯೂ ವಿದ್ಯುತ್‌ ಬಾಕ್ಸ್‌ ಬಾಯ್ದೆರೆದಿತ್ತು. ಇದಕ್ಕೂ ಸಂಬಂಧಪಟ್ಟ ಇಲಾಖೆ ಸ್ಪಂದಿಸಿ ಮುಚ್ಚಳ ಹಾಕಲಾಗಿದೆ. ಆದರೂ, ಇನ್ನೂ ಕೆಲವು ಕಡೆಗಳಲ್ಲಿ, ಒಳರಸ್ತೆಗಳಲ್ಲಿ ವಿದ್ಯುತ್‌ ಬಾಕ್ಸ್‌ ಬಾಯ್ದೆರೆದಿದ್ದು, ಆ ಬಗ್ಗೆಯೂ ಗಮನ ನೀಡಬೇಕಿದೆ.

ಮೆಸ್ಕಾಂ, ಮಹಾನಗರ ಪಾಲಿಕೆ ಅಧಿಕಾರಿಗಳು ಈಗಾಗಲೇ ಸಭೆ ನಡೆಸಿ, ನಗರದಲ್ಲಿ ವಿದ್ಯುತ್‌ನಿಂದ ಶಾಕ್‌ ಹೊಡೆಯಬಹುದಾದ ಅಪಾಯಕಾರಿ ಸ್ಥಳಗಳಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವ ಮೂಲಕ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ. “ಸುದಿನ’ವು ಕಳೆದ ವರ್ಷ “ವಿದ್ಯುತ್‌-ಆಪತ್ತು ಇರಲಿ ಎಚ್ಚರ’ ಎಂಬ ಅಭಿಯಾನವನ್ನು ಕೈಗೊಂಡಿದ್ದು, ಆ ವೇಳೆ ಸಂಬಂಧಪಟ್ಟ ಇಲಾಖೆಯು ನಗರದಲ್ಲಿರುವ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಬಾಯ್ದೆರೆದುಕೊಂಡಿರುವ ಎಲ್‌ಟಿಡಿ ಬಾಕ್ಸ್‌ಗಳನ್ನು ಗುರುತಿಸಿ, ಮಂಗಳೂರು ನಗರ ಮತ್ತು ಉಳ್ಳಾಲ ಪ್ರದೇಶಗಳಲ್ಲಿ ಒಟ್ಟಾರೆ 270 ಹೊಸ ಎಲ್‌ಟಿಡಿ ಬಾಕ್ಸ್‌ ಗಳನ್ನು ಅಳವಡಿಸಿತ್ತು. ನಗರದ ಇನ್ನೂ ಎಲ್ಲೆಲ್ಲಿ ಕೆಟ್ಟು ಹೋಗಿರುವ ಬಾಕ್ಸ್‌ಗಳಿವೆ ಸೇರಿದಂತೆ ವಿದ್ಯುತ್‌ ಶಾಕಿಂಗ್‌ ಸ್ಪಾಟ್‌ಗಳ ಬಗ್ಗೆ ಇಲಾಖೆ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದೆ.

ಕ್ರಮ ಕೈಗೊಳ್ಳುತ್ತೇವೆ
ನಗರದಲ್ಲಿ ಬಾಯ್ದೆರೆದ ವಿದ್ಯುತ್‌ ಬಾಕ್ಸ್‌ಗೆ ಈಗಾಗಲೇ ಹೊಸ ಬಾಕ್ಸ್‌ಗಳನ್ನು ಅಳವಡಿಸಲಾಗಿದೆ. ನಗರಗಳಲ್ಲಿನ ಮತ್ತು ಕೆಲವೆಡೆ ಬಾಯ್ದೆರೆದಿರುವ ಬಾಕ್ಸ್‌ಗಳಿದ್ದರೆ ಆ ಬಗ್ಗೆ ಲೈನ್‌ಮ್ಯಾನ್‌ಗಳು ಸೆಕ್ಷನ್‌ ಆಫೀಸರ್‌, ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಲು ಸೂಚಿಸಲಾಗಿದೆ. ಕೂಡಲೇ ಕ್ರಮ ಕೈಗೊಳ್ಳುತ್ತೇವೆ.
 - ಕೃಷ್ಣರಾಜ್‌, ಮೆಸ್ಕಾಂ ಕಾರ್ಯಕಾರಿ ಅಭಿಯಂತರ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.