ರಸ್ತೆಯಲ್ಲೇ ಗಲೀಜು ನೀರು; ತ್ವರಿತವಾಗಲಿ ಕಾಮಗಾರಿ
Team Udayavani, May 25, 2022, 11:07 AM IST
ಮಹಾನಗರ: ಒಳಚರಂಡಿ ಕಾಮಗಾರಿಗಾಗಿ ಬೆಂದೂರ್ವೆಲ್ನಲ್ಲಿ ಮ್ಯಾನ್ಹೋಲ್ ಅಗೆದು ಹಾಕಿರುವ ಕಾರಣದಿಂದ ಗಲೀಜು ನೀರು ರಸ್ತೆಯುದ್ದಕ್ಕೂ ಹರಿದು ವಾಹನ ಸವಾರರು, ಪಾದಾಚಾರಿಗಳಿಗೆ ಸಮಸ್ಯೆಯಾಗಿದೆ. ನೀರು ತುಂಬಿ ಕೊಂಡ ಪ್ರದೇಶ ಮಿನಿ ಈಜುಕೊಳದಂತಿದ್ದು, ಕಾಮಗಾರಿ ನಿಧಾನವಾಗಿ ಸಾಗುತ್ತಿದೆ.
ಬೆಂದೂರ್ವೆಲ್, ಕಂಕನಾಡಿ ಪ್ರದೇಶದಲ್ಲಿ ತುಂಬಾ ಹಳೆಯ ಒಳಚರಂಡಿ ಪೈಪ್ ಹಾದುಹೋಗುತ್ತಿದ್ದು, ಇದೇ ಕಾರಣಕ್ಕೆ ಪೈಪ್ ಬಿರುಕು ಬಿಟ್ಟಿತ್ತು. ಪರಿಣಾಮ ಕಳೆದ ಕೆಲವು ದಿನಗಳಿಂದ ಗಲೀಜು ನೀರು ರಸ್ತೆಯಲ್ಲೇ ಹರಿಯುತ್ತಿದೆ. ಈಗಾಗಲೇ ಕಾಮಗಾರಿ ಉದ್ದೇಶಕ್ಕೆ ರಸ್ತೆ ಅಗೆಯಲಾಗಿದ್ದು, ಅಗೆದ ಪ್ರದೇಶವಿಡೀ ಪೂರ್ತಿ ಗಲೀಜು ನೀರಿ ನಿಂದ ಆವೃತವಾಗಿದೆ. ಸದ್ಯ ಆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸವಾ ರರು ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿಗಾಗಿ ಅಗೆದ ಪ್ರದೇಶದಿಂದ ರಸ್ತೆ ಮಟ್ಟದವರೆಗೆ ಕೊಳಚೆ ನೀರು ಇದ್ದು, ವಾಹನಗಳು ಅಪಘಾತ ಉಂಟಾಗುವ ಸಾಧ್ಯತೆ ಎದುರಾಗಿದೆ.
ಕಾಮಗಾರಿ ಮತ್ತು ಅಪಾಯದ ಕಾರಣದಿಂದಾಗಿ ಈ ಪ್ರದೇಶದ ಸುತ್ತಲೂ ಬ್ಯಾರಿಕೇಡ್ ಅಳವಡಿಸಲಾಗಿದೆ. ಆದರೆ ಬ್ಯಾರಿಕೇಡ್ ಕೂಡ ಕಾಮಗಾರಿ ಪ್ರದೇಶದ ಗುಂಡಿಗೆ ಬಿದ್ದಿದ್ದು, ರಾತ್ರಿ ವೇಳೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ತತ್ಕ್ಷಣ ಗಮನಹರಿಸಿ ಕಾಮಗಾರಿಗೆ ವೇಗ ನೀಡಬೇಕು ಎನ್ನುತ್ತಾರೆ ಸಾರ್ವಜನಿಕರು.
ಸ್ಥಳೀಯ ಮನಪಾ ಸದಸ್ಯ ನವೀನ್ ಡಿಸೋಜಾ ಅವರು ಉದಯವಾಣಿ ಸುದಿನ ಕ್ಕೆ ಪ್ರತಿಕ್ರಿಯಿಸಿ, ಈ ಪ್ರದೇಶದಲ್ಲಿ ಒಳಚರಂಡಿ ಪೈಪ್ಲೈನ್ ಒಡೆದಿದ್ದು, ಸದ್ಯ ದುರಸ್ತಿ ಕಾಮಗಾರಿ ಸಾಗುತ್ತಿದೆ. ಪಕ್ಕದಲ್ಲಿಯೇ ನೀರಿನ ಮುಖ್ಯ ಪೈಲ್ಲೈನ್ ಕೂಡ ಹಾದುಹೋಗುವುದರಿಂದ ನಾಜೂಕಾಗಿ ಕೆಲಸ ನಡೆಸಬೇಕು. ನೀರಿನ ಪೈಪ್ಲೈನ್ಗೆ ಹಾನಿ ಉಂಟಾದರೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು. ಇದು ಸದಾ ಜನನಿಬಿಡ ಪ್ರದೇಶವಾದ ಕಾರಣ ದಿನದಿಡೀ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ಅಲ್ಲದೆ, ಇತ್ತೀಚೆಗೆ ಮಳೆ ಬಂದ ಕಾರಣ ಕಾಮಗಾರಿ ತುಸು ವಿಳಂಬವಾಗಿತ್ತು. ಸದ್ಯ ಕಾಮಗಾರಿ ವೇಗ ಪಡೆದುಕೊಂಡಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಕಾಮಗಾರಿಗೆ ವೇಗ
ಬೆಂದೂರ್ವೆಲ್ ಬಳಿ ಒಳಚರಂಡಿ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿ ಗಲೀಜು ನೀರು ರಸ್ತೆಯಲ್ಲಿ ಹರಿಯುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳ ಜತೆ ಈ ಕುರಿತು ಚರ್ಚೆ ನಡೆಸಿದ್ದು, ಕಾಮಗಾರಿಗೆ ವೇಗ ನೀಡುವಂತೆ ಸೂಚನೆ ನೀಡಿದ್ದೇನೆ. -ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ