ಕೋರ್ಟು ನೋಟಿಸನ್ನು ಜಾಮೀನು ಎಂದು ಭಾವಿಸಿ ಕೈದಿಗಳ ಬಿಡುಗಡೆ; ಮರು ಬಂಧನ !
ಜೈಲು ಅಧಿಕಾರಿಗಳಿಂದ ಎಡವಟ್ಟು
Team Udayavani, Jul 14, 2019, 10:14 AM IST
ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಇಬ್ಬರು ಕೊಲೆ ಆರೋಪಿಗಳಿಗೆ ಜಾಮೀನು ಸಿಗದಿದ್ದರೂ ಬಿಡುಗಡೆ ಮಾಡಿದ ಘಟನೆ ನಡೆದಿದೆ.
2016ರ ಮೇ 15ರಂದು ಬಿಜೈ ಕೆಎಸ್ಸಾರ್ಟಿಸಿ ಬಳಿ ನಡೆದ ಕದ್ರಿ ರೋಹಿತ್ ಕೋಟ್ಯಾನ್ ಕೊಲೆ ಪ್ರಕರಣದ ಆರೋಪಿಗಳಾಗಿರುವ ಕದ್ರಿ ಜಾರ್ಜ್ ಮಾರ್ಟಿಸ್ ರಸ್ತೆ ನಿವಾಸಿ ಶಿವಾಜಿ ಮತ್ತು ಬಿಕರ್ನಕಟ್ಟೆ ಕಂಡೆಟ್ಟು ನಿವಾಸಿ ಜಗದೀಶ್ ಬಿಡುಗಡೆಗೊಂಡವರು.
ಇವರಿಬ್ಬರಿಗೆ ಕೋರ್ಟ್ನಿಂದ ನೋಟಿಸ್ ಬಂದಿದ್ದು, ಇದನ್ನು ಜಾಮೀನು ಬಿಡುಗಡೆ ಆದೇಶ ಎಂದು ಭಾವಿಸಿದ ಜೈಲರ್ಗಳು ಜೈಲು ಅಧೀಕ್ಷಕರ ಅನುಮತಿ ಪಡೆದು ಜು. 9ರಂದು ಬಿಡುಗಡೆಗೊಳಿಸಿದ್ದರು. ಜೈಲಿನ ಎಲ್ಲ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಜಾಮೀನಿನ ನಿಯಮ ಪ್ರಕಾರವೇ ಬಿಡುಗಡೆ ಮಾಡಲಾಗಿತ್ತು.
ಬಿಡುಗಡೆಯಾದ ಆರೋಪಿಗಳು ಬಳಿಕ ತಮ್ಮ ವಕೀಲರ ಬಳಿ ಹೋಗಿದ್ದರು. ಈ ಸಂದರ್ಭ ಗೊಂದಲಕ್ಕೀಡಾದ ವಕೀಲರು ಜೈಲಿನಲ್ಲಿ ಆದ ಎಡವಟ್ಟು ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಜೈಲಧಿಕಾರಿಗಳು ಆರೋಪಿಗಳ ಮನೆಗೆ ತೆರಳಿ ಅವರನ್ನು ಪುನಃ ವಶಕ್ಕೆ ಪಡೆದು ಜೈಲಿಗೆ ಸೇರಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ