ಗ್ರೀನ್‌ ಮಂಗಳೂರು ಪರಿಕಲ್ಪನೆಯಡಿ ಮಿಯಾವಾಕಿ ಅರಣ್ಯ: ವೇದವ್ಯಾಸ ಕಾಮತ್‌

ಅರಣ್ಯ ಇಲಾಖಾ ಅಧಿಕಾರಿ, ಸಿಬಂದಿ ವಸತಿ ಸಂಕೀರ್ಣಕ್ಕೆ ಶಿಲಾನ್ಯಾಸ

Team Udayavani, May 24, 2022, 12:22 PM IST

miyawaki

ಪಡೀಲ್‌: ಮಂಗಳೂರು ನಗರದಲ್ಲಿ ಹಸುರೀಕರಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಗ್ರೀನ್‌ ಮಂಗಳೂರು ಪರಿಕಲ್ಪನೆಯಡಿ ಮಿಯಾವಾಕಿ ಮಾದರಿಯಲ್ಲಿ ಅರಣ್ಯ ಬೆಳೆಸಲು ನಿರ್ಧರಿಸಲಾಗಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ಹೇಳಿದರು.

ಅರಣ್ಯ ಇಲಾಖೆಯ ವತಿಯಿಂದ ಪಡೀಲ್‌ನ ಅರಣ್ಯ ಸಸ್ಯಪಾಲನಾಲಯ ದಲ್ಲಿ ನಿರ್ಮಾಣವಾಗಲಿರುವ ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬಂದಿ ವಸತಿ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಅವರು, ನಗರದಲ್ಲಿ ಹಸುರು ಮಾಯವಾಗುತ್ತಿದೆ. ಸದ್ಯ ನಗರ ಪ್ರದೇಶದಲ್ಲಿ ಶೇ.1ರಿಂದ ಶೇ.2ರಷ್ಟು ಮಾತ್ರ ಅರಣ್ಯ ಇದ್ದು, ಕುದ್ರೋಳಿ, ಬಂದರು ವಾರ್ಡ್‌ನಲ್ಲಿ ಶೇ.1ಕ್ಕಿಂತಲೂ ಕಡಿಮೆ ಹಸುರು ಇದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ಪಾಲಿಕೆ ಮತ್ತು ರಾಮಕೃಷ್ಣ ಆಶ್ರಮದ ಸಹಯೋಗದಲ್ಲಿ ನಗರದ ಪ್ರಮುಖ ಪ್ರದೇಶಗಳಲ್ಲಿ ಮಿಯಾವಾಕಿ ಅರಣ್ಯ ಬೆಳೆಸಲು ನಿರ್ಧರಿಸಲಾಗಿದೆ. ಕೆಲವೇ ದಿನಗಳಲ್ಲಿ ಈ ಕೆಲಸ ಆರಂಭಗೊಳ್ಳಲಿದೆ ಎಂದರು.

ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬಂದಿಗೆ ವಸತಿ ಸಂಕೀರ್ಣ ನಿರ್ಮಾಣ ಮಾಡುವ ಯೋಜನೆ ಈ ಹಿಂದೆ ಇರಲಿಲ್ಲ. ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿದೆ. ಇಲ್ಲಿನ ಅರಣ್ಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳ ಸಿಬಂದಿ ಕಾರ್ಯನಿರ್ವಹಿಸುತ್ತಾರೆ. ಆದರೆ ಅವರಿಗೆ ಸ್ವಂತ ಸೂರು ಇರುವುದಿಲ್ಲ. ಇದನ್ನು ಮನಗಂಡು ಸರಕಾರ ಕ್ಲಸ್ಟರ್‌ ಮಾದರಿಯಲ್ಲಿ ಫ್ಲಾಟ್‌ ನಿರ್ಮಾಣ ಮಾಡುತ್ತಿದೆ. ಸದ್ಯ ಒಂದು ಕೋ.ರೂ. ಬಿಡುಗಡೆಗೊಂಡಿದ್ದು, ಹಂತ ಹಂತವಾಗಿ ಅನುದಾನ ಹೊಂದಿಸಲಾಗುವುದು ಎಂದರು.

ಪಾಲಿಕೆ ಮೇಯರ್‌ ಪ್ರೇಮಾನಂದ ಶೆಟ್ಟಿ ಮಾತನಾಡಿ, ರಾಜ್ಯದಲ್ಲೇ ಮೊದಲ ಬಾರಿ ಮಂಗಳೂರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಸತಿ ಸಂಕೀರ್ಣ ನಿರ್ಮಾಣವಾಗುತ್ತಿದೆ. ಪಾಲಿಕೆಗೂ ಅರಣ್ಯ ಇಲಾಖೆಗೂ ಉತ್ತಮ ಸಂಬಂಧ ಇದ್ದು, ನಗರದ ಹಸುರೀಕರಣಕ್ಕೆ ಪಾಲಿಕೆ ಜತೆ ಅರಣ್ಯ ಇಲಾಖೆಯೂ ಕೈಜೋಡಿಸುತ್ತಿದೆ ಎಂದರು.

ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಾಧಿಕಾರಿ ಡಾ| ದಿನೇಶ ಕುಮಾರ್‌ ಪ್ರಸ್ತಾವಿಸಿ, ಅರಣ್ಯ ಇಲಾಖೆಯ ಅಧಿಕಾರಿ, ಸಿಬಂದಿಗೆ ಮೊದಲ ಬಾರಿ ಕ್ಲಸ್ಟರ್‌ ಮಾದರಿಯಲ್ಲಿ ವಸತಿ ಸಂಕೀರ್ಣ ನಿರ್ಮಾಣವಾಗುತ್ತಿದೆ. ಸುಮಾರು 40ರಿಂದ 45 ಫ್ಲ್ಯಾಟ್‌ಗಳು ನಿರ್ಮಾಣ ಗೊಳ್ಳಲಿದೆ ಎಂದರು.

ಮಾಜಿ ಮೇಯರ್‌ ದಿವಾಕರ್‌ ಪಾಂಡೇಶ್ವರ, ಪಾಲಿಕೆ ಸದಸ್ಯೆ ಶೋಭಾ ಪೂಜಾರಿ, ನಾಮನಿರ್ದೇಶಿತ ಸದಸ್ಯ ಭಾಸ್ಕರ ಚಂದ್ರ ಶೆಟ್ಟಿ, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‌ ಎಸ್‌. ನಟಲ್‌ಕರ್‌, ಮಂಗಳೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್‌. ಸುಬ್ರಹ್ಮಣ್ಯ ರಾವ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಪ್ರಮುಖರಾದ ವಿಜಯಕುಮಾರ್‌ ಶೆಟ್ಟಿ, ರಣದೀಪ್‌ ಕಾಂಚನ್‌, ಪರಿಸರ ಪ್ರೇಮಿ ಮಾಧವ ಉಳ್ಳಾಲ ಮೊದಲಾ ದವರಿದ್ದರು. ಮಂಗಳೂರು ವಲಯ ಅರಣ್ಯಾಧಿಕಾರಿ ಪ್ರಶಾಂತ್‌ ಕುಮಾರ್‌ ಪೈ ಸ್ವಾಗತಿಸಿ, ನಿರೂಪಿಸಿದರು.

ವರ್ಷಾಂತ್ಯಕ್ಕೆ ಶಕ್ತಿನಗರದಲ್ಲಿ ವಸತಿ ಗೃಹ

ಆರ್ಥಿಕವಾಗಿ ಹಿಂದುಳಿದವ ರಿಗೆ ಶಕ್ತಿನಗರದಲ್ಲಿ ನಿರ್ಮಾಣವಾಗ ಬೇಕಿದ್ದ ವಸತಿ ಗೃಹ ಯೋಜನೆ ಕಾಮಗಾರಿಗೆ ಹಲವಾರು ತೊಡಕು ಉಂಟಾಗಿತ್ತು. ಕಾನೂನು ಸಮಸ್ಯೆ, ಡೀಮ್ಡ್ ಫಾರೆಸ್ಟ್‌ ಪ್ರದೇಶ ಸಹಿತ ಅನೇಕ ಅಡೆ ತಡೆ ಇತ್ತು. ಈಗಾಗಲೇ ಕೇಂದ್ರ, ರಾಜ್ಯ ಸರಕಾರದ ಉನ್ನತ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದೇನೆ. ವಸತಿ ಗೃಹ ನಿರ್ಮಾಣಕ್ಕೆ ಇರುವ ತೊಡಕುಗಳು ನಿವಾರಣೆಗೊಳ್ಳುವ ಲಕ್ಷಣ ಕಾಣುತ್ತಿದೆ. ಕೇಂದ್ರದಿಂದ ಸದ್ಯದಲ್ಲೇ ಗ್ರೀನ್‌ ಸಿಗ್ನಲ್‌ ದೊರಕುವ ನಿರೀಕ್ಷೆ ಇದ್ದು, ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಅನುಮತಿ ಪಡೆದು ಈ ವರ್ಷಾಂತ್ಯದೊಳಗೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸುತ್ತೇನೆ ಎಂದು ಶಾಸಕ ಕಾಮತ್‌ ಹೇಳಿದರು.

ಟಾಪ್ ನ್ಯೂಸ್

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.