“ಮಿಯಾವಾಕಿ’ ಸೃಷ್ಟಿಸುತ್ತಿದೆ ಗ್ರೀನ್‌ ಮಂಗಳೂರು!

ನಗರದ ಹಸುರೀಕರಣದಲ್ಲಿ ಮಹತ್ವದ ಪಾತ್ರ

Team Udayavani, Jan 16, 2022, 5:08 PM IST

“ಮಿಯಾವಾಕಿ’ ಸೃಷ್ಟಿಸುತ್ತಿದೆ ಗ್ರೀನ್‌ ಮಂಗಳೂರು!

ಮಹಾನಗರ: ನಗರ ಬೆಳೆಯುತ್ತಿರುವಂತೆಯೇ ಹಸುರು ಮಾಯವಾಗುತ್ತದೆ ಎಂಬ ಆಕ್ಷೇಪ ಸಾಮಾನ್ಯ. ಇಂತಹ ಅಪವಾದ ದೂರ ಮಾಡುವ ನಿಟ್ಟಿನಲ್ಲಿ ಮಿಯಾವಾಕಿ ಮುಖೇನ “ಗ್ರೀನ್‌ ಮಂಗಳೂರು’ ಪರಿಕಲ್ಪನೆ ನಗರದಲ್ಲಿ ಸದ್ದಿಲ್ಲದೆ ಅನುಷ್ಠಾನ ಪಡೆಯುತ್ತಿರುವುದು ನಗರದ ಹಸುರೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದೆ.

ಕಡಿಮೆ ಜಾಗ ದಲ್ಲಿ ದಟ್ಟವಾಗಿ ಕಾಡು ಬೆಳೆಸುವ ಜಪಾನ್‌ನ “ಮಿಯಾವಾಕಿ’ ಮಾದರಿ ಸದ್ಯ ಮಂಗಳೂರಿನ ವಿವಿಧ ಭಾಗಗಳಲ್ಲಿ ಅನುಷ್ಠಾನ ಪಡೆಯುತ್ತಿದೆ. ಈ ಮೂಲಕ ನಗರದಲ್ಲಿ ಹಸುರಿನ ಜಾಗೃತಿ ಅಲ್ಲಲ್ಲಿ ಕೇಳಿಬರುತ್ತಿದೆ.

ದೇಶವೇ ಕೊಂಡಾಡುವ ಸ್ವರೂಪದಲ್ಲಿ ನಗರ ಸ್ವತ್ಛತೆಯ ಕಾರ್ಯ ನಡೆಸಿದ ಮಂಗಳೂರಿನ ಶ್ರೀ ರಾಮಕೃಷ್ಣ ಮಠ ಈಗಾಗಲೇ ಮೂರು ಇಂತಹ ಮಿಯಾವಾಕಿ ಪರಿಕಲ್ಪನೆಯನ್ನು ಮಂಗಳೂರಿನಲ್ಲಿ ಜಾರಿಗೆ ತಂದಿದೆ. 2019ರ ಅಕ್ಟೋಬರ್‌ 2ರಂದು ಕೊಟ್ಟಾರದ ಜಿಲ್ಲಾ ಪಂಚಾಯತ್‌ ಮುಂಭಾಗದಲ್ಲಿ ಮಿಯಾವಾಕಿ ಆರಂಭವಾಯಿತು. ಇಲ್ಲಿ 4 ಸೆಂಟ್ಸ್‌ ಜಾಗದಲ್ಲಿ 103 ಜಾತಿಯ 238 ಗಿಡಗಳನ್ನು ನೆಡಲಾಗಿದ್ದು ಈಗ ಅವು ಸೊಂಪಾಗಿ ಬೆಳೆಯುತ್ತಿವೆ. ಸಾಮಾನ್ಯವಾಗಿ ಇಷ್ಟು ಜಾಗದಲ್ಲಿ 10-12 ಗಿಡಗಳನ್ನು ನೆಡಲಾಗುತ್ತದೆ. ಆದರೆ ಮಿಯಾವಾಕಿ ಮಾದರಿಯಲ್ಲಿ 600 ಗಿಡಗಳನ್ನು ಬೆಳೆಸಬಹುದಾಗಿದೆ. ಸದ್ಯ ಇಲ್ಲಿ 238 ಗಿಡಗಳನ್ನು ಬೆಳೆಸಲಾಗಿದೆ. ಇಲ್ಲಿ ಅರ್ತಿ, ಶ್ರೀಗಂಧ, ರಕ್ತಚಂದನ, ಪೇರಳೆ, ಮಾವು, ಹಲಸು, ಪುನರ್ಪುಳಿ, ನೇರಳೆ ಸೇರಿದಂತೆ ಹಣ್ಣು ಹಾಗೂ ಇತರ ಜಾತಿಯ ಮರಗಳಿವೆ. ಸಹಜವಾದ ಕಾಡಿನಲ್ಲಿ ಇರಬೇಕಾದ ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗಿದೆ. ಬಳಿಕ ರಾಮಕೃಷ್ಣ ಮಠದಲ್ಲಿ 2020ರ ಅ.2ರಂದು ಹಾಗೂ 2022ರ ಜ.1ರಂದು ಮಿಯಾವಾಕಿಯ ಎರಡು ಅವತರಣಿಕೆ ಆರಂಭವಾಯಿತು. ಈ ಮೂಲಕ ನಗರದಲ್ಲಿ ಮಿಯಾವಾಕಿ ಪರಿಕಲ್ಪನೆ ಬಹು ಆಯಾಮದಿಂದ ಸುದ್ದಿಯಾಗುವಲ್ಲಿ ಕಾರಣವಾಯಿತು.

ಸದ್ಯ ರಾಮಕೃಷ್ಣ ಮಠ ಕೈಗೊಂಡ ಮಿಯಾವಾಕಿಯನ್ನು ಬಹುಮಂದಿ ಕಂಡು ಇಂತಹುದೇ ಪರಿಕಲ್ಪನೆ ಜಾರಿಗೊಳಿಸುವಂತೆ ಕೇಳಿಕೊಂಡಿದ್ದಾರೆ. 20 ಮಂದಿ ಇದರ ಬಗ್ಗೆ ವಿಚಾರಿಸಿದ್ದು ತಮ್ಮ ವ್ಯಾಪ್ತಿಯ ಸ್ಥಳದಲ್ಲಿ ಗಿಡ ನೆಡಲು ಕೋರಿದ್ದಾರೆ. ಜತೆಗೆ ರಾಮಕೃಷ್ಣ ಮಠವು ನಗರದ 100 ಕಡೆಗಳಲ್ಲಿ ಮಿಯಾವಾಕಿ ಅನುಷ್ಠಾನಕ್ಕೆ ಇಚ್ಚಾಶಕ್ತಿ ಪ್ರದರ್ಶಿಸಿದೆ.

ಈ ಮಧ್ಯೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಮಿಯಾವಾಕಿ ಆರಂಭದ ಬಗ್ಗೆ ಒಲವು ಹೊಂದಿದ್ದು, ಸ್ಥಳ ಸಮೀಕ್ಷೆಗೆ ಮುಂದಾಗಿದೆ. ಶಾಸಕ ವೇದವ್ಯಾಸ್‌ ಕಾಮತ್‌ ಅವರು ಕೂಡ ಮಿಯಾವಾಕಿ ಬಗ್ಗೆ ಪೂರಕವಾಗಿ ಸ್ಪಂದಿಸಿದ್ದು, ಮಂಗಳೂರು ಪಾಲಿಕೆ ವತಿಯಿಂದ ಇಂತಹ ಪರಿಕಲ್ಪನೆ ಜಾರಿಗೆ ಮುಂದಡಿ ಇಟ್ಟಿದ್ದಾರೆ.

ಪರಿಸರ ಕಾರ್ಯಕರ್ತ ಜೀತ್‌ ಮಿಲನ್‌ ರೋಚ್‌ ಅವರ ಮೂಲಕ ಪಡೀಲ್‌ ರೈಲ್ವೆ ಸೇತುವೆಯ ಇಕ್ಕೆಲಗಳಲ್ಲಿ ಮಿಯಾವಾಕಿ ಶುರುವಾಗಿದೆ.ಇನ್ನು ಅರಣ್ಯ ಇಲಾಖೆ ಮೂಲಕವೂ ಈ ಪ್ರಯತ್ನ ನಡೆದಿದೆ.

ಮಿಯಾವಾಕಿ ಪರಿಹಾರ
ವಿವಿಧ ಕಾರಣಗಳಿಂದ ಹಸುರು ಮಾಯವಾಗುತ್ತಿದೆ. ಮಂಗಳೂರು ನಗರದಲ್ಲಿಯೂ ಶುದ್ಧ ಗಾಳಿಯ ಕೊರತೆ ಉದ್ಭವಿಸದಿರಲು ಹಸುರು ಅನಿವಾರ್ಯ ವಾಗಿದೆ. ಇದೆಲ್ಲದಕ್ಕೆ ಸದ್ಯದ ಸ್ಥಿತಿಯಲ್ಲಿ ಮಿಯಾವಾಕಿ ಕಾಡುಗಳೇ ಪರಿಹಾರ. ಕೊಟ್ಟಾರಚೌಕಿಯಲ್ಲಿ ಆರಂಭಿಸಿದ ಮಿಯಾವಾಕಿ ಕಾಡು ನಿರೀಕ್ಷಿತ ರೀತಿಯಲ್ಲಿ ಬೆಳೆಯುತ್ತಿದೆ. ಇದೇ ಮಾದರಿಯಲ್ಲಿ ನಗರದ 100 ಕಡೆ ಬೆಳೆಸುವ ಚಿಂತನೆಯಿದೆ. ಸ್ವತ್ಛತೆಯಂತೆ ಹಸುರಿಗೂ ಆದ್ಯತೆ ಈ ಸಮಯದ ಅಗತ್ಯ.
– ಶ್ರೀ ಏಕಗಮ್ಯಾನಂದ ಸ್ವಾಮೀಜಿ, ಶ್ರೀ ರಾಮಕೃಷ್ಣ ಮಠ, ಮಂಗಳೂರು

-ದಿನೇಶ್‌ ಇರಾ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.