ನಗರದಲ್ಲಿ ತಲೆ ಎತ್ತಲಿದೆ ಮಿಯಾವಾಕಿ ಅರ್ಬನ್‌ ಫಾರೆಸ್ಟ್‌!


Team Udayavani, Oct 1, 2019, 5:10 AM IST

a-27

ಮಹಾನಗರ: ಎತ್ತ ನೋಡಿದರೂ ಕಾಂಕ್ರೀಟ್‌ ಕಟ್ಟಡ ಹಸುರು ಮರ ಗಿಡಗಳೇ ಮಾಯಾವಾಗುತ್ತಿದೆ. ಈ ನಡುವೆ ನಗರದಲ್ಲಿ ಗಿಡಗಳನ್ನು ನೆಟ್ಟು ಪುಟ್ಟ ಅರಣ್ಯ ಬೆಳೆಸುವ ಕೆಲಸಕ್ಕೆ ಪರಿಸರ ಪ್ರೇಮಿಗಳು ಮುಂದಾಗಿದ್ದಾರೆ.

ಹೌದು ಹಲವು ವೈವಿಧ್ಯ ಗಿಡಗಳನ್ನು ನಿರ್ದಿಷ್ಟ ಸ್ಥಳದಲ್ಲಿ ಬೆಳೆಸಿ ಪುಟ್ಟ ಅರಣ್ಯವನ್ನಾಗಿಸುವ ಈ ವಿಧಾನಕ್ಕೆ ಮಿಯಾವಾಕಿ ತಂತ್ರಜ್ಞಾನ ಎನ್ನಲಾಗುತ್ತದೆ. ಜಪಾನಿನಲ್ಲಿ ಹುಟ್ಟು ಪಡೆದ ಈ ತಂತ್ರಜ್ಞಾನ ಈಗಾಗಲೇ ಬೆಂಗಳೂರು, ಕೇರಳ, ದೇಶದ ಇನ್ನಿತರ ಪ್ರದೇಶಗಳಲ್ಲಿ ಹೆಸರು ಪಡೆದಿದೆ. ಇದೇ ಮೊದಲ ಬಾರಿಗೆ ನಗರದಲ್ಲಿ ಅಳವಡಿಸಲು ರಾಮಕೃಷ್ಣ ಆಶ್ರಮದ ಶ್ರೀ ಏಕಗಮ್ಯಾನಂದ ಸ್ವಾಮೀಜಿ, ಮಾಜಿ ಮೇಯರ್‌ ದಿವಾಕರ್‌ ಕೆ., ರೇಂಜ್‌ ಫಾರೆಸ್ಟ್‌ ಅಧಿಕಾರಿ ಪಿ. ಶ್ರೀಧರ್‌ ಹೆಜ್ಜೆ ಇಟ್ಟಿದ್ದಾರೆ.

ಉರ್ವಸ್ಟೋರ್‌ನ ಇನ್ಫೋಸಿಸ್‌ ಮತ್ತು ದ.ಕ. ಜಿ.ಪಂ. ಕಚೇರಿ ರಸ್ತೆ ನಡುವಿನ ತ್ರಿಕೋಣಾಕಾರದ ಸುಮಾರು 5-6 ಸೆಂಟ್ಸ್‌ ಜಾಗದಲ್ಲಿ ಆವರಣ ಗೋಡೆ ನಿರ್ಮಿಸಿ ಮಿಯಾವಾಕಿ ಅರ್ಬನ್‌ ಫಾರೆಸ್ಟ್‌ ರಚನೆಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ. ಇಲ್ಲಿ ಪಶ್ಚಿಮ ಘಟ್ಟದಲ್ಲಿ ಬೆಳೆಯುವ ಅಪರೂಪದ ಸುಮಾರು 200ಕ್ಕಿಂತ ಅಧಿಕ ತಳಿಯ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆ ರೂಪಿಸಲಾಗಿದೆ.

600 ಗಿಡ ನಾಟಿ
ಮಿಯಾವಾಕಿ ಅರ್ಬನ್‌ ಫಾರೆಸ್ಟ್‌ ನಲ್ಲಿ ಒಂದು ಚದರ ಮೀ.ಗೆ ನಾಲ್ಕು ಗಿಡಗಳಂತೆ ಸುಮಾರು 600 ಗಿಡಗಳನ್ನು ನೆಡಲಾಗುತ್ತದೆ. ಇಲ್ಲಿಯ ಸಾಧಕ ಬಾಧಕಗಳನ್ನು ಗಮನಿಸಿ ಮುಂದಕ್ಕೆ ನಗರದ ಇತರ ಕಡೆಗಳಲ್ಲಿ ಅರ್ಬನ್‌ ಫಾರೆಸ್ಟ್‌ ನಡೆಸಲು ಚಿಂತನೆ ನಡೆಸಲಾಗಿದೆ. ರಸ್ತೆ ಬದಿ ನೆಡುವ ಗಿಡಗಳನ್ನು ರಸ್ತೆ ಅಗಲ, ವಿದ್ಯುತ್‌ ತಂತಿ, ಪೈಪ್‌ಲೈನ್‌, ಜಾಹೀರಾತು ಫಲಕ ಮತ್ತಿತರ ಕಾರಣಕ್ಕೆ ಕಡಿದು ಹಾಕಲಾಗುತ್ತಿದೆ. ಎತ್ತರಕ್ಕೆ ಬೆಳೆಯಲು ಬಿಡುತ್ತಿಲ್ಲ. ಒಂದು ವೇಳೆ ಗಿಡ ಬೆಳೆದರೂ ಜನ, ವಾಹನ ಸಂಚಾರದಿಂದ ಅಲ್ಲಿ ಹಕ್ಕಿಗಳು ಬಂದು ನೆಲೆಸೂವುದೂ ಇಲ್ಲ, ಗೂಡು ಕಟ್ಟುವುದೂ ಇಲ. ಕೆಲವು ಗಿಡಗಳು ಮಾತ್ರ ಬೆಳೆಯುತ್ತವೆ. ಆಗಾಗ ಗೆಲ್ಲುಗಳನ್ನು ಕಡಿಯುವುದರಿಂದ ಹಣ್ಣು, ಹೂವು ಕೂಡ ಬಿಡುವುದಿಲ್ಲ.ಅದಕ್ಕಾಗಿ ರಸ್ತೆಯಿಂದ ಸ್ವಲ್ಪ ದೂರ ಇಂತಹ ಪುಟ್ಟ ಅರಣ್ಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಅ. 2ರಂದು ಉದ್ಘಾಟನೆ
ಮೀಯಾವಾಕಿ – ಅರ್ಬನ್‌ ಫಾರೆಸ್ಟ್‌ ನ ಕಾಮಗಾರಿ ಮುಗಿದಿದ್ದು, ಗಿಡಗಳನ್ನು ತಂದು ನೆಡುವ ಕೆಲಸವಾಗಿದೆ. ಅ. 2ರಂದು ಬೆಳಗ್ಗೆ 9.30ಕ್ಕೆ ಇದರ ಉದ್ಘಾಟನೆ ಕೆಲಸವಾಗಲಿದೆ.

ಮಿಯಾವಾಕಿ ಎಂದರೇನು?
ಜಪಾನಿನ ಜೈವಿಕ ತಜ್ಞ ಡಾ| ಅಕಿರಾ ಮಿಯಾವಾಕಿ ಅವರು ಕಡಿಮೆ ಜಾಗದಲ್ಲಿ ದಟ್ಟ ಅರಣ್ಯ ಬೆಳೆಸುವ ವಿಶಿಷ್ಟ ಮಿಯಾವಾಕಿ ತಂತ್ರಜ್ಞಾನವನ್ನು ಜಗತ್ತಿಗೆ ಪರಿಚಯಿಸಿದ್ದಾರೆ.

ಸಾಮಾನ್ಯ ಅರಣ್ಯ ಬೆಳೆಸುವುದಕ್ಕಿಂತ 10 ಪಟ್ಟು ಹೆಚ್ಚು ಬೆಳೆಯುವ ಈ ತಂತ್ರಜ್ಞಾನವು ಸಾಮಾನ್ಯಕ್ಕಿಂತ 30 ಪಟ್ಟು ಹೆಚ್ಚು ದಟ್ಟವಾಗಿ ಬೆಳೆಯುತ್ತದೆ. ಒಂದೇ ಸ್ಥಳದಲ್ಲಿ ಡಜನುಗಟ್ಟಲೆ ತಳಿಯ ಗಿಡಗಳನ್ನು ಬೆಳೆಸಬಹುದು ಮತ್ತು ಮೂರು ವರ್ಷದ ಬಳಿಕ ಯಾವುದೇ ನಿರ್ವಹಣೆ ಇಲ್ಲದೆ ಗಿಡಗಳು ಬೆಳೆಯುತ್ತಾ ಹೋಗುತ್ತವೆ.

ಸಿದ್ಧತೆ
ಮಾಜಿ ಮೇಯರ್‌ ಕೆ. ದಿವಾಕರ್‌ ಮೂರು ಸೆಂಟ್ಸ್‌ ಜಾಗದಲ್ಲಿ ದಟ್ಟ ಅರಣ್ಯ ಬೆಳೆಸಿದ್ದಾರೆ. ಗಿಡಗಳು ಮೂರು ವರ್ಷಗಳಲ್ಲಿ 25 ಅಡಿ ಬೆಳೆದಿವೆ. ಅವರ ಪ್ರೇರಣೆಯಂತೆ ಮಂಗಳೂರಿನಲ್ಲಿ ಅರ್ಬನ್‌ ಫಾರೆಸ್ಟ್‌ ನಿರ್ಮಿಸಲು ಸಿದ್ಧತೆ ಮಾಡಿದ್ದೇವೆ.
-ಸ್ವಾಮಿ ಏಕಗಮ್ಯಾನಂದಜಿ, ರಾಮಕೃಷ್ಣ ಆಶ್ರಮ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.