ಮಾದರಿಯಾದ ಹರೇಕಳ ಸ್ವಯಂ ಲಾಕ್ ಡೌನ್: ಶಾಸಕರಿಂದ ಶ್ಲಾಘನೆ


Team Udayavani, Jul 6, 2020, 6:44 PM IST

ಮಾದರಿಯಾದ ಹರೇಕಳ ಸ್ವಯಂ ಲಾಕ್ ಡೌನ್: ಶಾಸಕರಿಂದ ಶ್ಲಾಘನೆ

ಉಳ್ಳಾಲ: ಹರೇಕಳ ಗ್ರಾಮದಲ್ಲಿ ಐದು ಕೋವಿಡ್-19 ಸೋಂಕು ದೃಢವಾದ ಹಿನ್ನಲೆಯಲ್ಲಿ ಸೋಂಕು ಹರಡದಂತೆ ತಡೆಯುವ ಪ್ರಯತ್ನವಾಗಿ ಇಂದಿನಿಂದ ಹರೇಕಳ ಗ್ರಾಮದಲ್ಲಿ ಲಾಕ್‍ಡೌನ್ ಆರಂಭಗೊಂಡಿದ್ದು, ಪೊಲೀಸ್ ಸಹಕಾರವಿಲ್ಲದೆ ಗ್ರಾಮದ ಸರ್ವಧರ್ಮದ ಜನರು, ವಿವಿಧ ಪಕ್ಷಗಳ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ನಿರ್ಣಯದಂತೆ ಮೊದಲ ದಿನದ ಲಾಕ್‍ಡೌನ್ ಯಶಸ್ವಿಯಾಗಿದೆ.

ಗ್ರಾಮದ ಜನರು ಪಂಚಾಯತ್ ಅಧಿಕಾರಿಗಳು ವಿಶೇಷ ಸಭೆಯಲ್ಲಿ ತೀರ್ಮಾನಿಸಿದಂತೆ ಸೋಮವಾರ ಅಂಗಡಿಗಳು 12 ಗಂಟೆಯವರೆಗೆ ವ್ಯಾಪಾರ ನಡೆಸಿದ್ದು, ಬಸ್ ಸಂಚಾರ ಸೇರಿದಂತೆ ಹೊರಗಿನ ಖಾಸಗಿ ವಾಹನಗಳಿಗೆ ಗ್ರಾಮಕ್ಕೆ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ದ್ವಿಚಕ್ರ ವಾಹನ ಇರುವವರು ದೈನಂದಿನ ಕೆಲಸಗಳಿಗೆ ತೆರಳಲು ಆವಕಾಶ ನೀಡಿದ್ದು, ಉಳಿದಂತೆ ಗ್ರಾಮಚಾವಡಿ ನ್ಯೂಪಡ್ಪು ಮಾರ್ಗವಾಗಿ ಮಂಗಳೂರಿಗೆ ತೆರಳುವ ಕೋಟಿಪದವು, ಮಿಷನ್ ಕಂಪೌಂಡ್, ತಾಕಟೆ, ಸೇರಿದಂತೆ ಕೊಣಾಜೆ ಗ್ರಾಮದ ಜನರಿಗೆ ಸಂಚರಿಸಲು ಆವಕಾಶ ನೀಡಲಾಗಿದೆ.

ಚೆಕ್ ಪೋಸ್ಟ್ ಗಳಲ್ಲಿ ಗ್ರಾಮದ ವಾರಿಯರ್ಸ್ ತಂಡ : ಅಂಬ್ಲಮೊಗರು ಗ್ರಾಮದಿಂದ ಹರೇಕಳ ಗ್ರಾಮಕ್ಕೆ ಸಂಪರ್ಕಿಸುವ ಎಲಿಯಾರ್ ದೆಬ್ಬೇಲಿ ರಸ್ತೆ, ಕೊಣಾಜೆ ಮತ್ತು ಅಂಬ್ಲಮೊಗರು ಗ್ರಾಮದ ಗಡಿಭಾಗವಾದ ಒಡ್ಡೆದಗುಳಿ ಸಮೀಪದ ಎಸ್‍ಬಿಐ ಬ್ಯಾಂಕ್ ಬಳಿ ಮತ್ತು ಕೊಣಾಜೆ – ಹರೇಕಳ ಗ್ರಾಮ ಸಂಪರ್ಕಿಸುವ ಗ್ರಾಮಚಾವಡಿ ಕೋಟಿಪದವು ಬಳಿ ಮೂರು ಚೆಕ್‍ ಪೋಸ್ಟ್ ಗಳನ್ನು ರಚಿಸಿದ್ದು, ಇಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರತೀ ಚೆಕ್‍ ಪೋಸ್ಟ್ ನಲ್ಲಿ 10 ಜನರ ತಂಡ ಇಲ್ಲಿ ದಾಟುವ ಜನರ ಉಷ್ಣತಾ ತಪಾಸಣೆ ಮತ್ತು ಹೆಸರನ್ನು ನೋಂದಾಯಿಸುತ್ತಿದ್ದು, ಮಧ್ಯಾಹ್ನದಿಂದ ರಾತ್ರಿ 7 ಗಂಟೆವರೆಗೆ ಎರಡು ಪಾಳಿಯಲ್ಲಿ ಒಟ್ಟು 60 ಮಂದಿ ಗ್ರಾಮದ ಗಡಿ ಕಾಯುವ ಕೆಲಸ ಮಾಡಲಿದ್ದಾರೆ.

ಚೆಕ್ ಪೋಸ್ಟ್ ಗಳಲ್ಲಿ ಗ್ರಾಮದ ವಾರಿಯರ್ಸ್ ತಂಡ :

ಗ್ರಾಮದ ಜನರೇ ಸೋಂಕು ತಡೆಯವ ನಿಟ್ಟಿನಲ್ಲಿ ಗ್ರಾಮದ ರಕ್ಷಣೆಗೆ ನಿಂತಿರುವುದು ಜಿಲ್ಲೆಯಲ್ಲಿ ಪ್ರಥಮವಾಗಿದೆ. ಅಧ್ಯಕ್ಷೆ ಆನಿತಾ ಡಿ.ಸೋಜಾ, ಉಪಾಧ್ಯಕ್ಷ ಮಹಾಬಲ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಾತ್ಯಾತೀತ ಜನತಾ ದಳದ ಕ್ಷೇತ್ರಾಧ್ಯಕ್ಷ  ಮೋಹನ್‍ದಾಸ್ ಶೆಟ್ಟಿ ಉಳಿದೊಟ್ಟು, ತಾ, ಪಂ. ಮಾಜಿ ಸದಸ್ಯ ಮುಸ್ತಾಫ ಹರೇಕಳ, ಪಂಚಾಯತ್ ಸದಸ್ಯರಾದ ಬಶೀರ್‍ಉಂಬುದ, ಅಬ್ದುಲ್ ಸತ್ತಾರ್, ಅಬ್ದುಲ್ ಮಜೀದ್, ಮಹಮ್ಮದ್ ಅಶ್ರಫ್ ಆಲಡ್ಕ, ಬದ್ರುದ್ದೀನ್, ಬಶೀರ್ ಎಸ್.ಎಂ. ವಾಮನ್‍ರಾಜ್, ಜಯಂತ್, ಅಬೂಬಕ್ಕಾರ್ ಸಿದ್ಧಿಕ್ ಉಲ್ಲಾಸ್ ನಗರ, ಪಂಚಾಯತ್ ಆಭಿವೃದ್ಧಿ ಅಧಿಕಾರಿ ರೋಹಿತಾಶ್ವ, ಗ್ರಾಮ ಲೆಕ್ಕಿಗ ಗಾಯತ್ರಿ ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು. ಶಾಸಕ ಯು.ಟಿ.ಖಾದರ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ ಹರೇಕಳ ಗ್ರಾಮಕ್ಕೆ ಭೇಟಿ ನೀಡಿ ಲಾಕ್‍ಡೌನ್ ವ್ಯವಸ್ಥೆಯನ್ನು ಶ್ಲಾಘಿಸಿದರು.

ಶಾಸಕ ಯು.ಟಿ.ಖಾದರ್

ಮುನ್ನೂರು ಗ್ರಾಮದಲ್ಲಿ ವ್ಯಾಪಾರ ಲಾಕ್‍ಡೌನ್ : ಮುನ್ನೂರು ಗ್ರಾಮ ಪಂಚಾಯತ್‍ನಲ್ಲೂ ಇಂದಿನಿಂದ  ಲಾಕ್‍ಡೌನ್ ಆರಂಭಗೊಂಡಿದ್ದು, ಮಧ್ಯಾಹ್ನ ಒಂದು ಗಂಟೆಯಿಂದ ವ್ಯಾಪಾರಸ್ಥರು ಬಂದ್ ಮಾಡಿ ಲಾಕ್‍ಡೌನ್‍ಗೆ ಸಹಕರಿಸಿದರು. ಕುತ್ತಾರು ಜಂಕ್ಷನ್‍ನಲ್ಲಿ ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳನ್ನು ಬಂದ್ ಮಾಡಿಲಾಯಿತು. ಕುಂಪಲದಲ್ಲಿ 6 ಗಂಟೆಯ ಬಳಿಕ ವ್ಯಾಪಾರ ಸ್ಥಗಿತವಾಗುತ್ತಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.