ಕರಾವಳಿಯಲ್ಲಿ ಮುಂಗಾರು ಚುರುಕು: ಇನ್ನೂ ಮೂರು ದಿನ ಮಳೆ


Team Udayavani, Jul 10, 2019, 5:49 AM IST

mungaru

ಮಂಗಳೂರು/ಉಡುಪಿ: ಕೆಲವು ದಿನಗಳಿಂದ ದುರ್ಬಲ ವಾಗಿದ್ದ ಮುಂಗಾರು ಇದೀಗ ಚುರುಕು ಗೊಂಡಿದೆ. ಕರಾವಳಿಯ ನಾನಾ ಕಡೆಗಳಲ್ಲಿ ಮಂಗಳವಾರ ಬೆಳಗ್ಗಿನಿಂದ ಉತ್ತಮ ಮಳೆಯಾಗಿದೆ.

ಮಂಗಳೂರು – ಉಡುಪಿಯಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಜೋರಾದ ಗಾಳಿ-ಮಳೆ ಸುರಿಯಿತು. ಪುತ್ತೂರು, ಉಪ್ಪಿನಂಗಡಿ, ಮಾಣಿ, ನೇರಳಕಟ್ಟೆ, ಸುರತ್ಕಲ್, ಉಳ್ಳಾಲ, ಮುಡಿಪು, ತೆಕ್ಕಟ್ಟೆ, ಕಾಪು, ಮೂಲ್ಕಿ, ಪುಂಜಾಲಕಟ್ಟೆ, ಕಿನ್ನಿಗೋಳಿ, ವೇಣೂರು, ನಾರಾವಿ, ಕಟಪಾಡಿ, ಶಿರ್ವ, ತೆಕ್ಕಟ್ಟೆ, ಬಂಟ್ವಾಳ, ಸುಳ್ಯ, ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ಗುರುವಾ ಯನಕೆರೆ, ಧರ್ಮಸ್ಥಳ, ಉಡುಪಿ, ಮಣಿಪಾಲ, ಸಿದ್ಧಾಪುರ, ಹೆಬ್ರಿ, ಕೊಲ್ಲೂರು, ಕೋಟೇಶ್ವರ, ಕೋಟ, ಉಪ್ಪುಂದ, ಮರವಂತೆ, ಬ್ರಹ್ಮಾವರ ಮತ್ತಿತರ ಕಡೆ ಮಳೆಯಾಗಿದೆ.

ಕರಾವಳಿ ಭಾಗಕ್ಕೆ ಜೂ. 14ರಂದು ಮುಂಗಾರು ಪ್ರವೇಶಿಸಿದರೂ ಕ್ಷೀಣಿಸಿತ್ತು. ಹಾಗಾಗಿ ಪ್ರಸಕ್ತ ಸಾಲಿನಲ್ಲಿ ಶೇ. 27ರಷ್ಟು ಮಳೆ ಕೊರತೆ ಇದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಬೀಚ್‌ಗಳಲ್ಲಿ ಮುನ್ನೆಚ್ಚರಿಕೆ

ಪಣಂಬೂರು ಬೀಚ್ ಅಭಿವೃದ್ಧಿ ನಿಗಮದ ಸಿಇಒ ಯತೀಶ್‌ ಬೈಕಂಪಾಡಿ ಹಾಗೂ ಮಲ್ಪೆ ಬೀಚ್ ನಿರ್ವಹಣಾಧಿಕಾರಿ ಸುದೇಶ್‌ ಶೆಟ್ಟಿ ಅವರು, ‘ಮಂಗಳೂರು ಪಣಂಬೂರು, ತಣ್ಣೀರು ಬಾವಿ ಹಾಗೂ ಮಲ್ಪೆ ಬೀಚ್‌ನಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. 2 ತಿಂಗಳಿನಿಂದ ಪ್ರವಾಸಿ ಗರನ್ನು ಸಮುದ್ರದ ಬಳಿ ಬಿಡುತ್ತಿಲ್ಲ’ ಎಂದರು.

ಮೂರು ದಿನ ಉತ್ತಮ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾದ ಪರಿಣಾಮ, ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗುಂಬೆ: ರಸ್ತೆಗೆ ಮರ

ಸೋಮವಾರ ರಾತ್ರಿ ಆಗುಂಬೆ ಘಾಟಿಯ 4ನೇ ಸುತ್ತಿನಲ್ಲಿ ಬೃಹತ್‌ ಮರ ವೊಂದು ರಸ್ತೆಗೆ ಉರುಳಿ ರಸ್ತೆ ಸಂಚಾರ 2 ಗಂಟೆ ಬಾಧಿತವಾಯಿತು. ಕಳೆದ ಜುಲೈ ಯಲ್ಲಿ ಕುಸಿದ ಘಾಟಿಯ 7ನೇ ಸುತ್ತಿನಲ್ಲಿ ದುರಸ್ತಿ ಮಾಡದ ಕಾರಣ ಈ ಬಾರಿಯೂ ಭಾರೀ ಮಳೆ ಸುರಿದರೆ ವಾಹನ ಸಂಚಾರ ಬಾಧಿತವಾಗುವ ಭೀತಿ ಎದುರಾಗಿದೆ.
ಬೆಳ್ತಂಗಡಿ: ಮುಖ್ಯರಸ್ತೆ ಜಲಾವೃತ

ಬೆಳ್ತಂಗಡಿ: ನಿರಂತರ ಮಳೆ ಯಿಂದಾಗಿ ತಾಲೂಕಿನ ನದಿಗಳು ತುಂಬಲಾರಂಭಿಸಿವೆ. ಚರಂಡಿಗಳ ಹೂಳೆತ್ತದ ಪರಿಣಾಮ ಮುಖ್ಯ ರಸ್ತೆಗಳು ಅಲ್ಲಲ್ಲಿ ಜಲಾವೃತವಾಗಿವೆ. ಉಜಿರೆಮುಖ್ಯ ರಸ್ತೆಯ ಭಾರತ್‌ ಐರನ್‌ ವರ್ಕ್‌ ಸಮೀಪ , ಬೆಳಾಲು ಕ್ರಾಸ್‌ ಬಳಿ ಚರಂಡಿ ಸಮಸ್ಯೆಯಿಂದ ನೀರು ರಸ್ತೆ ಯಲ್ಲೇ ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಯಿತು.
ತೆಕ್ಕಟ್ಟೆ: ಛಾವಣಿ ಹಾರಿತು

ತೆಕ್ಕಟ್ಟೆ: ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಕುಂಭಾಸಿ ಗ್ರಾ.ಪಂ. ವ್ಯಾಪ್ತಿಯ ಕೊರವಡಿ ಮಲಸಾವರಿ ದೇವಸ್ಥಾನದ ಬಳಿ ಪುಟ್ಟು ಮೊಗೇರ್ತಿ ಅವರ ಮನೆ ಮತ್ತು ದನದ ಕೊಟ್ಟಿಗೆಯ ಮೇಲ್ಛಾ ವಣಿ ಹಾರಿ ಹೋಗಿದೆ. ಮನೆಯಲ್ಲಿ ಮಲಗಿದ್ದ ರಶ್ಮಿತಾ (6), ರಕ್ಷಿತ್‌ (1) ರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಕುಂಭಾಶಿ ಗ್ರಾ.ಪಂ. ಸದಸ್ಯ ರಾಘವೇಂದ್ರ ಮೊಗವೀರ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.
ಹೆಬ್ರಿ: ವಿದ್ಯುತ್‌ ಕಂಬಗಳಿಗೆ ಹಾನಿ

ಹೆಬ್ರಿ: ಪರಿಸರದಲ್ಲಿ ಉತ್ತಮ ಮಳೆಯಾಗಿದ್ದು ಜೋರಾಗಿ ಬೀಸಿದ ಗಾಳಿಯಿಂದ ಬೃಹತ್‌ ಮರಗಳು ಧರೆಗುರುಳಿ 15ಕ್ಕೂ ಮಿಕ್ಕಿ ವಿದ್ಯುತ್‌ ಕಂಬಗಳು ಹಾನಿಗೀಡಾಗಿವೆ. ಸೀತಾನದಿ ಉಕ್ಕಿ ಹರಿಯುತ್ತಿದೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.