ಬಡವರಿಗೆ ಅನ್ಯಾಯವಾದರೆ ಸೂಕ್ತ ಕ್ರಮ: ಶಾಸಕ ಕೋಟ್ಯಾನ್
Team Udayavani, Aug 5, 2018, 12:26 PM IST
ಮೂಡಬಿದಿರೆ: ಬಡ ಜನರು ಜೀವನ ನಡೆಸುವುದೇ ಕಷ್ಟ. ಹಾಗಿರುವಾಗ ಸರಕಾರಿ ಕೆಲಸಗಳಿಗಾಗಿ ಅವರು ಬಂದಾಗ ನಾವು ಸಾಧ್ಯವಾದಷ್ಟೂ ಸೇವೆ ನೀಡಬೇಕು. ಬಡವರಿಗೆ ಅನ್ಯಾಯವಾದಲ್ಲಿ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಇಲ್ಲಿನ ಸಮಾಜ ಮಂದಿರದಲ್ಲಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿ, ಆರ್ಟಿಸಿಗಳಲ್ಲಿ ಹೆಸರು ಹಾಗೂ ಮಾಹಿತಿಯನ್ನು ತಪ್ಪಾಗಿ ಉಲ್ಲೇಖಿಸಲಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಇದು ಮರುಕಳಿಸಬಾರದು. ನಿವೇಶನ ಮತ್ತು ಮನೆ ಇಲ್ಲದವರ ಬಗ್ಗೆ ಸಂಪೂರ್ಣ ಮಾಹಿತಿ ಸಿದ್ಧಪಡಿಸಬೇಕು. ಗ್ರಾಹಕರು ಸಲ್ಲಿಸುವ ಯಾವುದೇ ಅರ್ಜಿಯನ್ನು ತಿರಸ್ಕರಿಸಬಾರದು. ವಿವಿಧ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ನಿಜವಾದ ಫಲಾನುಭವಿಗಳಿಗೆ ಪ್ರಯೋಜನ ತಲುಪಬೇಕು. ರಾಷ್ಟ್ರೀಯ ಕುಟುಂಬ ಪರಿಹಾರದ ಮೊತ್ತ 6 ತಿಂಗಳ ಒಳಗೆ ಸಂಬಂಧಪಟ್ಟವರ ಕೈ ತಲುಪುವಂತೆ ಮಾಡಬೇಕು ಎಂದು ಹೇಳಿದರು.
ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಕರಣಿಕರು ಹಾಗೂ ಪಿಡಿ ಒಗಳು ಉಪಸ್ಥಿತರಿದ್ದು, ಅಭಿವೃದ್ಧಿಗೆ ಸಂಬಂಧಿಸಿದ ಕೆಲವೊಂದು ಕಾನೂನಾತ್ಮಕ ತೊಡಕುಗಳ ಬಗ್ಗೆ ಚರ್ಚಿಸಿದರು. ಜಿ.ಪಂ. ಸದಸ್ಯರಾದ ಸುಚರಿತ ಶೆಟ್ಟಿ, ವಿನೋದ್ ಬೆಳ್ಳೂರು, ಪುರಸಭಾ ಸದಸ್ಯರಾದ ಬಾಹುಬಲಿ ಪ್ರಸಾದ್, ನಾಗ ರಾಜ್ ಪೂಜಾರಿ, ದಿನೇಶ್ ಪೂಜಾರಿ, ಪ್ರಸಾದ್ ಕುಮಾರ್, ಮುಖಂಡರಾದ ಮೇಘನಾದ್ ಶೆಟ್ಟಿ, ಹರೀಶ್ ಎಂ.ಕೆ. ಮೊದಲಾದವರಿದ್ದರು. ಕಂದಾಯ ಅಧಿಕಾರಿ ದಿಲೀಪ್ ಸ್ವಾಗತಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ