ಮುಡಾ ‘ಮಹಾ ಯೋಜನೆ’ ಕರಡು ಅಂತಿಮ: ಶೀಘ್ರ ಅನುಷ್ಠಾನದ ನಿರೀಕ್ಷೆ

ಮಂಗಳೂರು ನಗರ-ಗ್ರಾಮಾಂತರಕ್ಕೆ ಅನ್ವಯ: ಶೇ.80ರಷ್ಟು ನಕ್ಷೆ ಪೂರ್ಣ

Team Udayavani, Aug 23, 2022, 11:01 AM IST

3

ಉರ್ವಸ್ಟೋರ್‌: ಬೆಳೆಯು ತ್ತಿರುವ ಮಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಮುಂದಿನ 10 ವರ್ಷಗಳ ಬೆಳವಣಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಸ್ತುತ ಚಾಲ್ತಿಯಲ್ಲಿರುವ ಮುಡಾ (ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ)ಮಹಾ ಯೋಜನೆ (ಮಾಸ್ಟರ್‌ ಪ್ಲ್ಯಾನ್‌) ಯನ್ನು ಪರಿಷ್ಕರಿಸಿ, ನೂತನ ಮಹಾಯೋಜ ನೆಯ ಕರಡು ರೂಪಿಸಲು ಕೊನೆಯ ಹಂತದ ಸಿದ್ಧತೆ ನಡೆಸಲಾಗುತ್ತಿದೆ.

ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಹಾಗೂ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಪರಿಧಿಯ ಮುಡಾ ವ್ಯಾಪ್ತಿಯಲ್ಲಿನ ಜಮೀನುಗಳ ಉಪಯೋಗವನ್ನು ನಿರ್ದಿಷ್ಟ ಪಡಿಸುವ ಮತ್ತು ಕಳೆದ 10 ವರ್ಷದ ಬೆಳವಣಿ ಗೆಗಳನ್ನು ಅಧಿಕೃತವಾಗಿ ದಾಖಲು ಮಾಡುವ ಮಹಾ ಯೋಜನೆ ಸಿದ್ಧಗೊಳ್ಳುತ್ತಿದೆ.

ಮಹಾಯೋಜನೆಗಾಗಿ “ಸ್ಟೆಮ್‌’ ಎಂಬ ಕನ್ಸಲ್ಟೆನ್ಸಿಗೆ ಮೂಲನಕ್ಷೆ ಸಿದ್ಧ ಪಡಿಸಲು ಮುಡಾ ಅನುಮತಿ ನೀಡಿತ್ತು. ಇದರಂತೆ ಶೇ.80ರಷ್ಟು ನಕ್ಷೆ ಪೂರ್ಣಗೊಳಿಸಲಾಗಿದೆ. ಮುಂದಿನ ಕೆಲವೇ ದಿನದಲ್ಲಿ ಕರಡು ಪ್ರತಿ ಯನ್ನು ಮುಡಾಕ್ಕೆ ನೀಡಲಿದ್ದಾರೆ. ಅದನ್ನು ಮುಡಾದಿಂದ ಸರಕಾರಕ್ಕೆ ಸಲ್ಲಿಸಲಾ ಗುತ್ತದೆ. ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಎಲ್ಲ ಆಸ್ತಿಗಳ ಸರ್ವೇ ಮಾಡಿ, ಹೊಸ ಬೆಳವಣಿಗೆಗಳನ್ನು ದಾಖಲು ಮಾಡಲಾಗುತ್ತಿದೆ. ರಸ್ತೆ, ಆಸ್ಪತ್ರೆ, ಶಾಲೆ ಮತ್ತಿತರ ಸಾರ್ವಜನಿಕ ಬಳಕೆಯ ಪ್ರದೇಶಗಳನ್ನೂ ಸರ್ವೇ ಮಾಡಿ ನಕ್ಷೆ ಯಲ್ಲಿ ಗುರುತಿಸಲಾಗುತ್ತಿದೆ. ಈ ಎಲ್ಲ ದಾಖಲೆಗಳನ್ನೂ ಡಿಜಿಟಲೀಕರಣ ಮಾಡಲಾಗುತ್ತಿದೆ. ಒಂದೆರಡು ತಿಂಗಳೊಳಗೆ ಇದು ಅಂತಿಮವಾಗುವ ನಿರೀಕ್ಷೆಯಿದೆ.

ಮುಂದೇನು?

ಮುಡಾ ಸಲ್ಲಿಸಿದ ಮಹಾಯೋಜ ನೆಯ ಕರಡು ಪ್ರತಿಗೆ ಸರಕಾರ ಅನುಮೋದನೆ ನೀಡಿದ ಅನಂತರ ಸಾರ್ವಜನಿಕರ ಸಲಹೆ-ಆಕ್ಷೇಪ ಕ್ಕಾಗಿ 60 ದಿನ ಅವಕಾಶ ನೀಡಲಾಗುತ್ತದೆ.

ಅದರಂತೆ ಆಕ್ಷೇಪ-ಸಲಹೆಗಳ ಪರಿಶೀಲನೆ ನಡೆಯಲಿದೆ. ಅದಾದ ಬಳಿಕ ಅಂತಿಮ ಒಪ್ಪಿಗೆಗಾಗಿ ಸರಕಾರಕ್ಕೆ ಕಳುಹಿಸಲಾಗುತ್ತದೆ. ಅಲ್ಲಿ ಅಂತಿಮ ವಾದ ಅನಂತರ ಹೊಸ ಮಹಾಯೋಜನೆ ಅನುಷ್ಠಾನಕ್ಕೆ ಬರಲಿದೆ.

ಮಂಗಳೂರು ನಗರ ಹಾಗೂ ಗ್ರಾಮಾಂತರ ಈಗ ಇರುವ ಮಹಾ ಯೋಜನೆಗಳಲ್ಲಿ ಕೆಲವು ಸ್ಥಳಗಳ ರಸ್ತೆಗಳನ್ನು ತಪ್ಪಾಗಿ ನಮೂದಿಸಲಾಗಿತ್ತು. ಇದನ್ನು ಹೊಸ ಮಹಾಯೋಜನೆಯಲ್ಲಿ ಸರಿಪಡಿಸುವ ಕಾರ್ಯ ನಡೆಸಲಾ ಗುತ್ತಿದೆ. ಮುಡಾ ವ್ಯಾಪ್ತಿಯಲ್ಲಿ ಕಳೆದ 10 ವರ್ಷದಲ್ಲಿ ಆಗಿರುವ ಅಭಿವೃದ್ಧಿ ಚಟುವಟಿಕೆ ಹಾಗೂ ಅದರ ಪರಿಣಾಮ ಮತ್ತು ರಸ್ತೆ ಸಹಿತ ಅಲ್ಲಿ ಆಗಬೇಕಾದ ಕಾರ್ಯಯೋಜನೆ ಬಗ್ಗೆ ಇದರಲ್ಲಿ ಬೊಟ್ಟು ಮಾಡಲಾಗುತ್ತದೆ.

ಮುಡಾ ನಿಕಟಪೂರ್ವ ಅಧ್ಯಕ್ಷ ರವಿಶಂಕರ ಮಿಜಾರ್‌ ಅವರು “ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಮಹಾ ಯೋಜನೆ 2021ರಲ್ಲಿಯೇ ಆಗ ಬೇಕಿತ್ತು. ಆದರೆ ಕೊರೊನಾ ಕಾರಣ ದಿಂದ ಸಾಧ್ಯವಾಗಿರಲಿಲ್ಲ. ಇದೀಗ ಕೊನೆಯ ಹಂತದಲ್ಲಿದೆ. ಕೃಷಿ, ಬಯಲು, ಹಸುರು ವಲಯ ಸೇರಿದಂತೆ ವಿವಿಧ ಪ್ರಕಾರಗಳನ್ನು ಇದರಲ್ಲಿ ಗೊತ್ತುಪಡಿಸಲಾಗುತ್ತದೆ. ಅಭಿವೃದ್ಧಿ ಕಾರ್ಯ ನಡೆಸುವಾಗ ಪರಿಸರಕ್ಕೆ ಹಾನಿ ಆಗದಂತೆ ಅದರ ಗುರುತು ಮಾಡುವ ಕಾರ್ಯ ಮಹಾಯೋಜನೆಯಿಂದ ಸಾಧ್ಯವಾಗಲಿದೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.