‘4 ವರ್ಷಗಳ ಬಳಿಕ ಮನೆ ನಿರ್ಮಾಣ ಪರವಾನಿಗೆ ಸಮಸ್ಯೆ ಪರಿಹಾರ’


Team Udayavani, Sep 26, 2018, 12:39 PM IST

26-sepctember-7.gif

ಮೂಡಬಿದಿರೆ: ನಗರ ಯೋಜನಾ ಪ್ರಾಧಿಕಾರದ ಬಿಗಿ ನಿಯಮಾವಳಿಗಳಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಮನೆ ಕಟ್ಟಲು ಪರವಾನಿಗೆ ದೊರೆಯದೆ ಬಹಳ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಈಗ ಸತತ ಎರಡು ತಿಂಗಳ ಹೋರಾಟದ ಫಲವಾಗಿ ಮೂಡಬಿದಿರೆಗೆ ಮಂಗಳೂರು ಮುಡಾ ಝೋನಲ್‌ ರೆಗ್ಯುಲೇಶನ್‌ ಅನ್ವಯಿಸಲು ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕರು ಅವಕಾಶ ಕಲ್ಪಿಸಿದ್ದು, ಇನ್ನು ಮುಂದೆ ಮೂಡಬಿದಿರೆಯಲ್ಲಿ ಮನೆ ನಿರ್ಮಾಣಕ್ಕೆ ಪರವಾನಿಗೆ ಪಡೆಯಲು ನಿಯಮಗಳನ್ನು ಸರಳಗೊಳಿಸಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೂಡಬಿದಿರೆ ವ್ಯಾಪ್ತಿಯಲ್ಲಿದ್ದ ಸಮಸ್ಯೆಗಳ ಬಗ್ಗೆ ನುರಿತ ವಕೀಲರೊಂದಿಗೆ ಚರ್ಚಿಸಿದಾಗ ‘ಮುಡಾ’ ನಿಯಮಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ತೊಂದರೆಯಾಗಿರುವುದು ತಿಳಿದುಬಂದಿತು. ಈ ಬಗ್ಗೆ ತಾನು ಸೆ. 19ರಂದು ಬೆಂಗಳೂರಿನಲ್ಲಿ ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕರು, ದ.ಕ. ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಇರುವ ಅಧಿಕಾರಿ ಪೊನ್ನುರಾಜ್‌ ಅವರಿಗೆ ಮನವರಿಕೆ ಮಾಡಿದಾಗ ಅವರು ಸಮಸ್ಯೆಯ ಮೂಲವನ್ನು ತಿಳಿದು ಕೊಂಡರು ಹಾಗೂ ಕೂಡಲೇ ದ.ಕ. ಜಿಲ್ಲಾಧಿಕಾರಿ ಮತ್ತು ಮೂಡಬಿದಿರೆ ನಗರ ಯೋಜನಾ ಪ್ರಾಧಿಕಾರದ ಮುಖ್ಯಸ್ಥರಿಗೆ ಇದುವರೆಗೆ ಮೂಡಬಿದಿರೆಯಲ್ಲಿ ಅನುಸರಿಸಲಾಗುತ್ತಿರುವ ನಿಯಮಾವಳಿಗಳ ಬದಲಾಗಿ ಮಂಗಳೂರು ಮುಡಾ ಅಳವಡಿಸಿರುವ ಝೋನಲ್‌ ರೆಗ್ಯುಲೇಶನ್‌ ಜಾರಿಗೊಳಿಸಿ, ಮನೆ ಕಟ್ಟಬಯಸುವವರಿಗೆ ಪರವಾನಿಗೆ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು ಎಂದರು.

ಇದಕ್ಕೆ ಎಲ್ಲ ಅಧಿಕಾರಿಗಳಿಗೆ ಶಾಸಕರು ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು. ಪುರಸಭಾ ಸದಸ್ಯರಾದ ಪ್ರಸಾದ್‌ ಕುಮಾರ್‌, ನಾಗರಾಜ ಪೂಜಾರಿ, ಲಕ್ಷ್ಮಣ ಪೂಜಾರಿ, ದಿನೇಶ್‌ ಪೂಜಾರಿ, ಬಿಜೆಪಿ ಮುಖಂಡರಾದ ಮೇಘನಾಥ್‌ ಶೆಟ್ಟಿ, ಗೋಪಾಲ್‌ ಶೆಟ್ಟಿಗಾರ್‌, ರಾಜೇಶ್‌ ಮಲ್ಯ, ಅಶೋಕ ಮಲ್ಯ, ಜಾಯ್‌ ಲೊಸ್‌ ತಾಕೋಡೆ ಉಪಸ್ಥಿತರಿದ್ದರು. 

ಪುರಸಭೆಗೆ ನಷ್ಟ
ಮೂಡಬಿದಿರೆ ಪುರಸಭೆಯಲ್ಲಿ ಯಾವುದೇ ಕನ್ವರ್ಷನ್‌ ಸೈಟ್‌ಗಳಿಗೆ ಖಾತೆ ನೀಡದೆ ಜನರಿಗೆ ಬಹಳ ತೊಂದರೆಯಾಗಿತ್ತು. ಪುರಸಭೆಗೆ ಒಂದು ಕೋಟಿ ರೂ. ಗೂ ಅಧಿಕ ನಷ್ಟವುಂಟಾಗಿತ್ತು. ನೋಂದಣಿ ಕಚೇರಿಯಲ್ಲಿ ವಹಿವಾಟು ನಡೆಯದೆ, ಸರಕಾರದ ಖಜಾನೆಗೂ ಲಕ್ಷಾಂತರ ರೂ. ನಷ್ಟವಾಗಿತ್ತು.
 - ಉಮಾನಾಥ ಕೋಟ್ಯಾನ್‌,
    ಶಾಸಕ, ಮೂಲ್ಕಿ-ಮೂಡಬಿದಿರೆ

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.