ಮೂಲರಪಟ್ಣ ತಾತ್ಕಾಲಿಕ ರಸ್ತೆ ಬಂದ್‌ ; ಮನವೊಲಿಕೆ ಬಳಿಕ ತೆರವು


Team Udayavani, Feb 21, 2019, 6:27 AM IST

21-february-7.jpg

ಎಡಪದವು : ಮೂಲರಪಟ್ಣ ಫಲ್ಗುಣಿ ನದಿಗೆ ಅಡ್ಡಲಾಗಿ ಸಾರ್ವಜನಿಕರು ನಿರ್ಮಿಸಿರುವ ಮಣ್ಣಿನ ರಸ್ತೆಯಲ್ಲಿ ಲಾರಿಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ರಸ್ತೆ ಹಾದುಹೋಗಿರುವ ಖಾಸಗಿ ಜಾಗದ ಮಾಲಕರಿಗೆ ಬಜಪೆ ಪೊಲೀಸರು ನೋಟಿಸ್‌ ನೀಡಿದ ಕಾರಣ ಜಾಗದ ಮಾಲಕರು ರಸ್ತೆಯನ್ನು ಬಂದ್‌ ಮಾಡಿದ ಘಟನೆ ಬುಧವಾರ ಬೆಳಗ್ಗೆ ಮುತ್ತೂರು ಭಾಗದಲ್ಲಿ ನಡೆದಿದೆ.

ಕಳೆದ ವರ್ಷ ಮೂಲರಪಟ್ಣ ಸೇತುವೆ ಮುರಿದು ಬಿದ್ದ ಅನಂತರ ಮುತ್ತೂರು- ಬಂಟ್ವಾಳ ಸಂಚಾರ ಮೊಟಕುಗೊಂಡಿದ್ದು, ಸಂಚಾರಕ್ಕಾಗಿ ಸಾರ್ವಜನಿಕರು ತೂಗು ಸೇತುವೆಯನ್ನು ಅವಲಂಬಿಸಿಕೊಂಡಿದ್ದರು. ಆದರೆ ಹೊಸ ಸೇತುವೆ ವಿಳಂಬವಾಗಿರುವುದನ್ನು ಗಮನಿಸಿದ ಸಾರ್ವಜನಿಕರು ಫಲ್ಗುಣಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗುತ್ತಿದ್ದಂತೆ ಮೂಲರಪಟ್ಣ ಮಸೀದಿ ಸಮೀಪದಿಂದ ಮುತ್ತೂರಿನ ಖಾಸಗಿ ಜಾಗದವರೆಗೆ ನದಿಗೆ ಅಡ್ಡಲಾಗಿ ಮೋರಿ ಅಳವಡಿಸಿ, ಲೋಡ್‌ಗಟ್ಟಲೆ ಮಣ್ಣು ತುಂಬಿಸಿ ತಾತ್ಕಾಲಿಕ ಮಣ್ಣಿನ ರಸ್ತೆ ಯನ್ನು ನಿರ್ಮಿಸಿದ್ದರು. ಬಸ್‌ಗಳನ್ನು ಹೊರತುಪಡಿಸಿ ಇನ್ನಿತರ ಎಲ್ಲ ವಾಹನಗಳು ಸಂಚರಿಸುತ್ತಿರುವುದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಿತ್ತು. ಈ ನಡುವೆ ನಿನ್ನೆ ವ್ಯಕ್ತಿ ಯೋರ್ವರು ಬಜಪೆ ಠಾಣೆಗೆ ದೂರವಾಣಿ ಕರೆ ಮಾಡಿ ತಾತ್ಕಾಲಿಕ ಮಣ್ಣಿನ ರಸ್ತೆಯಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡಲಾಗುತ್ತಿದೆ ಎಂದು ದೂರು ನೀಡಿದ್ದರು.

ನದಿಯ ದಡದಿಂದ ಮುತ್ತೂರಿನ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಒಳ ರಸ್ತೆಯು ಖಾಸಗಿಯವರ ಜಮೀನಿ ನಲ್ಲಿ ಹಾದುಹೋಗಿತ್ತು. ಬಜಪೆ ಪೊಲೀಸರು ಖಾಸಗಿಯವರಿಗೆ ಇರುವ ಜಮೀನ ಲ್ಲಿರುವ ರಸ್ತೆಯ ಮೂಲಕ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂದು ನೋಟಿಸ್‌ ಜಾರಿ ಮಾಡಿದ್ದರು.

ಇದರಿಂದ ಬೇಸರಗೊಂಡ ಖಾಸಗಿ ವ್ಯಕ್ತಿ ಸಾರ್ವಜನಿಕರಿಗೆ ಅನುಕೂಲವಾಗಲೆಂದು ತನ್ನ ಜಮೀನಿನಲ್ಲಿ ರಸ್ತೆ ನಿರ್ಮಿಸಿಕೊಟ್ಟರೆ ನನಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ ಎಂದು ಆಕ್ರೋಶಗೊಂಡು ಈ ಜಾಗದಲ್ಲಿ ಗೇಟ್‌ ಹಾಕಿ ಮುಚ್ಚಿದ್ದರಿಂದ ಸಾರ್ವ ಜನಿಕರಿಗೆ ಸಂಚಾರಕ್ಕೆ ಅನಾನುಕೂಲ ಉಂಟಾಗಿತ್ತು.

ವಿಷಯ ತಿಳಿದ ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿ ಸ್ಥಳಕ್ಕಾಗಮಿಸಿದ ಪೊಲೀಸರ ಜತೆ ನೋಟಿಸ್‌ ನೀಡಿರುವಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದ ವ್ಯಕ್ತಿ ಯಾರೆಂದು ಕೇಳಿದರು. ಲಿಖೀತ ದೂರು ನೀಡದೆ ಕೇವಲ ಫೋನಿನ ಮೂಲಕ ನೀಡಿದ ದೂರಿನ ಆಧಾರದಲ್ಲಿ ನೋಟಿಸ್‌ ನೀಡಿದ್ದು ಯಾಕೆ? ಈಗ ರಸ್ತೆ ಮುಚ್ಚಿರುವುದರಿಂದ ಸಾರ್ವ ಜನಿಕರಿಗೆ ಅನಾನುಕೂಲವಾಗಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು.

ಕೊನೆಗೆ ಪೊಲೀಸರು, ಜಮೀನು ಮಾಲಕರು ಹಾಗೂ ಸಾರ್ವಜನಿಕರ ಜತೆ ಪರಸ್ಪರ ಮಾತುಕತೆ ನಡೆಸಿ, ಮನವೊಲಿಸಿ ಮುಚ್ಚಿದ ಗೇಟನ್ನು ತೆರವುಗೊಳಿಸಿದರು. ಈಗ ತಾತ್ಕಾಲಿಕ ಮಣ್ಣಿನ ರಸ್ತೆಯಲ್ಲಿ ಮತ್ತೆ ಸಂಚಾರ ಆರಂಭಗೊಂಡಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.