ಮೆನ್ನಬೆಟ್ಟು ಗ್ರಾ.ಪಂ.ಗೆ ರಾಷ್ಟ್ರೀಯ ಪುರಸ್ಕಾರ

ದೀನ ದಯಾಳ್‌ ಉಪಾಧ್ಯಾಯ ಪಂ. ಸಶಕ್ತೀಕರಣ ಪುರಸ್ಕಾರ

Team Udayavani, Oct 2, 2019, 3:39 AM IST

c-26

ಮೆನ್ನಬೆಟ್ಟು ಗ್ರಾಮ ಪಂಚಾಯತ್‌

ಕಿನ್ನಿಗೋಳಿ: ಮಂಗಳೂರು ತಾಲೂಕಿನ ಮೆನ್ನಬೆಟ್ಟು ಗ್ರಾಮ ಪಂಚಾಯತ್‌ 2019ನೇ ಸಾಲಿನ ರಾಷ್ಟ್ರೀಯ ಪುರಸ್ಕಾರವಾದ ದೀನ ದಯಾಳ್‌ ಉಪಾಧ್ಯಾಯ ಪಂಚಾಯತ್‌ ಸಶಕ್ತೀಕರಣ ಪುರಸ್ಕಾರ ಗೌರವಕ್ಕೆ ಪಾತ್ರವಾಗಿದೆ.

2017-18ನೇ ಸಾಲಿನ ಸಾಧನೆಗಳನ್ನು ಗುರುತಿಸಿ ಭಾರತ ಸರಕಾರದ ಗ್ರಾಮೀಣಾ ಭಿವೃದ್ಧಿ ಇಲಾ ಖೆಯೂ ಈ ಪುರಸ್ಕಾರಕ್ಕೆ ಮೆನ್ನಬೆಟ್ಟು ಗ್ರಾಮ ಪಂಚಾಯತ್‌ನ್ನು ಆಯ್ಕೆ ಮಾಡಿದೆ. ದ.ಕ. ಜಿಲ್ಲೆ ಯಲ್ಲಿಯೇ ಈ ಸಾಲಿನ ಪ್ರಶಸ್ತಿ ಪಡೆದ ಏಕೈಕ ಗ್ರಾ. ಪಂ.ಇದಾಗಿದೆ. ಸ್ವಚ್ಛತೆ, ಕುಡಿಯುವ ನೀರು, ಬೀದಿ-ದೀಪ ನಿರ್ವಹಣೆ ಮತ್ತು ಇತರ ಮೂಲ ಸೌಕರ್ಯಗಳನ್ನು ಪಂಚಾಯತ್‌ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಒದಗಿಸಿರುವುದಕ್ಕೆ ಈ ಗ್ರಾ.ಪಂ. ನ್ನು ಪುರಸ್ಕಾರಕ್ಕೆ ಪರಿಗಣಿಸಲಾಗಿದೆ. ಪ.ಜಾತಿ/ ಪ. ಪಂಗಡ, ಹಿರಿಯ ನಾಗರಿಕರು ಮತ್ತು ಮಹಿಳೆಯರ ಸೇವೆಗಳನ್ನು ಸಕಾಲದಲ್ಲಿ ನಿಜ ಫಲಾನುಭವಿಗಳಿಗೆ ತಲುಪಿಸಿರುವುದನ್ನು ಮೌಲ್ಯಮಾಪನ ಸಮಿತಿ ಕಂಡುಕೊಂಡಿದೆ. ಮೆನ್ನಬೆಟ್ಟು ಗ್ರಾಮ ಪಂಚಾಯತ್‌ ಪ್ರಕೃತಿ ವಿಕೋಪ ನಿರ್ವಹಣೆಗೆ ತೆಗೆದುಕೊಂಡ ಕ್ರಮಗಳು, ಸಂಪನ್ಮೂಲ ವೃದ್ಧಿಗಾಗಿ ಜಾರಿ ಮಾಡಿದ ನೂತನ ಆವಿಷ್ಕಾರಗಳು ಪುರಸ್ಕಾರ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿವೆ.

ಒರಿಸ್ಸಾದಿಂದ ಆಗಮಿಸಿದ ರಾಷ್ಟ್ರೀಯ ಮೌಲ್ಯಮಾಪನ ತಂಡ ಎರಡು ದಿನ ಮೊಕ್ಕಾಂ ಇದ್ದು ಪಂಚಾಯತ್‌ ಆಡಳಿತವನ್ನು ವಿಶ್ಲೇಷಿಸಿತ್ತು. ಸಮಾಜದ ಸಹಭಾಗಿತ್ವದಲ್ಲಿ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದನ್ನು ಮೌಲ್ಯ ಮಾಪಕರು ಗುರುತಿಸಿದ್ದರು. ಜಿಲ್ಲೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಐದು ತಾ| 14 ಗ್ರಾ. ಪಂ.ಗಳನ್ನು ತಂಡ ಮೌಲ್ಯಮಾಪನ ನಡೆಸಿತ್ತು. ಅದರಲ್ಲಿ ಮೆನ್ನಬೆಟ್ಟುr ಗ್ರಾಮ ಪಂಚಾಯತ್‌ ಆಯ್ಕೆಯಾಯಿತು.

ದೀನ ದಯಾಳ್‌ ಉಪಾಧ್ಯಾಯ ಪಂಚಾಯತ್‌ ಸಶಕ್ತೀಕರಣ ಪುರಸ್ಕಾರ 2010ರಿಂದ ಜಾರಿಯಲ್ಲಿದೆ.  ಪಂಚಾ ಯತ್‌ರಾಜ್‌ ಸಂಸ್ಥೆಗಳ ಉತ್ತಮ ಆಡಳಿತ ವನ್ನು ಪ್ರೋತ್ಸಾಹಿಸುವುದಕ್ಕಾಗಿ ಪುರಸ್ಕಾರ ನೀಡಲಾಗುತ್ತಿದೆ. ಪುರಸ್ಕಾರವು ನಗದು ಬಹುಮಾನವನ್ನು ಒಳಗೊಂಡಿದೆ.

ಸ್ವಚ್ಛತೆ ಆದ್ಯತೆ
ಕಸ ತ್ಯಾಜ್ಯ ನಿರ್ವವಹಣೆಗೆ ಚೆನ್ನಾಗಿ ನಡೆಯುತ್ತಿದೆ. ತೆರಿಗೆ ಸಂಗ್ರಹ ಶೇ. 85ರಿಂದ ಹೆಚ್ಚಿದೆ. ನೀರಿನ ಬಿಲ್‌ ಸಮರ್ಪಕವಾಗಿ ಸಂಗ್ರಹಿಸಲಾಗುತ್ತದೆ. ಪರಿಶಿಷ್ಟ ಜಾತಿ ಕಾಲನಿಯಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ 9 ಬಾವಿಗಳನ್ನು ಮಾಡಲಾಗಿದೆ, ಪ್ಲಾಸ್ಟಿಕ್‌ ಬ್ಯಾನರ್‌, ಬಂಟಿಂಗ್‌, ಫ್ಲೆಕ್ಸ್‌ಗಳಿಗೆ ಅವಕಾಶ ಇಲ್ಲ. ಗ್ರಾ.ಪಂ. ವ್ಯಾಪ್ತಿ ಯಲ್ಲಿ ಸ್ವತ್ಛತೆ, ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
– ಸರೋಜಿನಿ ಗುಜರನ್‌, ಅಧ್ಯಕ್ಷರು, ಮೆನ್ನಬೆಟ್ಟು ಗ್ರಾ. ಪಂ.

ಸಹಕಾರದಿಂದ ಉತ್ತಮ ಕಾರ್ಯ
ಸಾರ್ವಜನಿಕರಿಗೆ ಉತ್ತಮ ಕೆಲಸ ಮಾಡಿ ಕೊಡುವ ಸಿಬಂದಿ ಇದ್ದಾರೆ. ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಬೆಂಬ ಲಿಸುವ ಜನತೆ ಇದ್ದಾರೆ. ಈ ನಿಟ್ಟಿನಲ್ಲಿ ಮೆನ್ನಬೆಟ್ಟು ಗ್ರಾ.ಪಂ. ಒಂದಿಷ್ಟು ಒಳ್ಳೆಯ ಕೆಲಸಗಳನ್ನು ಮಾಡುವುದು ಸಾಧ್ಯ ಆಗುತ್ತಿದೆ.
 - ಡಾ| ರಮ್ಯಾ ಕೆ.ಎಸ್‌. , ಗ್ರಾ.ಪಂ. ಅಭಿವೃದ್ದಿ ಅಧಿಕಾರಿ

ಇ-ಆಡಳಿತ ಜಾರಿ
ಮತದಾರರ ಪಾಲ್ಗೊಳ್ಳುವಿಕೆ, ಪಂಚಾಯತ್‌ ಕೈಗೆತ್ತಿಕೊಂಡ ಭಿನ್ನ ಕಾರ್ಯಕ್ರಮಗಳು ಮತ್ತು ಪರಿಣಾಮಕಾರಿ ಇ-ಆಡಳಿತವನ್ನು ಮೌಲ್ಯಮಾಪ ನಕ್ಕಾಗಿ ಆಗಮಿಸಿದ ರಾಜ್ಯದ ಮತ್ತು ಒರಿಸ್ಸಾದ ರಾಷ್ಟ್ರೀಯ ಪರಿಣಿತರ ತಂಡ ಮನಗಂಡಿದೆ. ದಾಖಲೆಗಳನ್ನು ನಿರ್ವಹಿಸುವಲ್ಲಿ ಮೆನ್ನಬೆಟ್ಟು ಗ್ರಾ.ಪಂ. ರಾಜ್ಯಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕದ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಗಮನಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.