ಪ್ರಾಕೃತಿಕ ವಿಕೋಪ; ಇದು ಪ್ರತಿ ವರ್ಷದ ಆತಂಕ ; ಮತ್ತೆ ಕಾಡುತಿದೆ ಕಡಲ್ಕೊರೆತದ ಭೀತಿ


Team Udayavani, Jun 6, 2020, 9:06 AM IST

ಪ್ರಾಕೃತಿಕ ವಿಕೋಪ; ಇದು ಪ್ರತಿ ವರ್ಷದ ಆತಂಕ ; ಮತ್ತೆ ಕಾಡುತಿದೆ ಕಡಲ್ಕೊರೆತದ ಭೀತಿ

ಕಡಲ್ಕೊರೆತಕ್ಕೆ ಮನೆ ಹಾನಿಗೊಂಡಿರುವುದು.

ಮಂಗಳೂರು: ಮುಂಗಾರು ಶುರುವಾದಂತೆ ಕರಾವಳಿಯಲ್ಲಿ ಕಡಲ್ಕೊರೆತದ ಭೀತಿಯು ಸಮುದ್ರ ತೀರದ ಜನರ ನಿದ್ದೆಗೆಡಿಸತೊಡಗಿದೆ. ಮಳೆಗಾಲ ಶುರುವಾಗುತ್ತಿದ್ದಂತೆ ಆಗಮಿಸುವ ಜನಪ್ರತಿನಿಧಿಗಳು, ತಾತ್ಕಾಲಿಕ ಪರಿಹಾರ ಎನ್ನುವಂತೆ ನಾಲ್ಕೈದು ಲೋಡು ಕಲ್ಲುಗಳನ್ನು ಕಡಲಿನ ಬದಿಗೆ ಹಾಕಿಸುತ್ತಾರೆ. ಅವು ಕೆಲವೇ ದಿನಗಳಲ್ಲಿ ಅಲೆಗಳಿಗೆ ಸಿಲುಕಿ ಕಡಲಿನ ಪಾಲಾಗುತ್ತದೆ. ಮತ್ತೆ ರಾಜ ಕಾರಣಿಗಳು/ಅಧಿಕಾರಿಗಳ ತಂಡ ಆಗಮಿಸಿ ಒಂದಿಷ್ಟು ಪರಿಹಾರ ನೀಡುತ್ತಾರೆ.

ಇದು ಪ್ರತಿವರ್ಷದ ಕಥೆಯೇ ಹೊರತು ಶಾಶ್ವತ ಪರಿಹಾರ ಇದುವರೆಗೂ ಸಾಧ್ಯವಾಗಿಲ್ಲ. ತಲಪಾಡಿಯಿಂದ ಉಡುಪಿ ಜಿಲ್ಲೆಯ ಶಿರೂರು ತನಕ ಸುಮಾರು 168 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಇರುತ್ತದೆ. ದ.ಕ. ಜಿಲ್ಲಾ ವ್ಯಾಪ್ತಿಯ ಉಳ್ಳಾಲ – ಸಸಿಹಿತ್ಲು – ಮುಕ್ಕ ಸಹಿತ ಮಂಗಳೂರಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಡಲ್ಕೊರೆತ ಉಂಟಾಗುತ್ತಿದೆ. ಇದರಲ್ಲೂ ಉಳ್ಳಾಲ – ಸೋಮೇಶ್ವರ ಭಾಗದಲ್ಲಿ ಅತ್ಯಧಿಕವಾಗಿದೆ.

ಉಳ್ಳಾಲ, ಸುಭಾಷ್‌ನಗರ, ಕೈಕೋ ಹಿಲೇರಿಯಾ ವ್ಯಾಪ್ತಿಯಲ್ಲಿ ಹಲವು ಮನೆಗಳು ಸಮುದ್ರಪಾಲಾಗಿರುವ ಉದಾಹರಣೆ ಇದೆ. ಇದರಿಂದ ಹಲವು ಜನರು ಬೀದಿಗೆ ಬಿದ್ದಿದ್ದರು. ಈಗ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರಪಟ್ಣ, ಕೈಕೋ, ಹಿಲರಿ ನಗರ ವ್ಯಾಪ್ತಿಯಲ್ಲಿ ಕಡಲಿನ ಅಬ್ಬರ ಈಗಾಗಲೇ ಜಾಸ್ತಿ ಆಗಿದೆ. ಈ ಕಾರಣಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯು.ಟಿ. ಖಾದರ್‌ ಅವರು ಪ್ರತ್ಯೇಕವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲವು ರೀತಿಯಲ್ಲಿ ಪ್ರಯೋಗಗಳು, ಸಮೀಕ್ಷೆಗಳು, ವರದಿಗಳು, ತಂತ್ರಜ್ಞಾನಗಳು ನಡೆದಿವೆ. ಕಾಂಕ್ರೀಟ್‌ ತಡೆಗೋಡೆ, ಕಡಲಿಗೆ ಕಲ್ಲು, ಮರಳು ಚೀಲ ಇಡುವುದು ಸಹಿತ ಹಲವು ರೀತಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಪ್ರತಿ ವರ್ಷ ಪ್ರಯತ್ನ ನಡೆಯುತ್ತಲೇ ಇದೆ. ಆದರೆ, ಕಡಲ್ಕೊರೆತ ಮಾತ್ರ ಯಥಾಸ್ಥಿತಿಯಲ್ಲೇ ಇದೆ.

ಮೂಲೆಗೆ ಸರಿದ ಸ್ಥಳಾಂತರ ಯೋಜನೆ!
ಉಳ್ಳಾಲ ಪ್ರದೇಶದಲ್ಲಿ ಕಡಲ್ಕೊರೆತ ಪ್ರತಿ ವರ್ಷದ ಸಮಸ್ಯೆ ಆಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಸಂತ್ರಸ್ತರಿಗೆ ಪರ್ಯಾಯ ಸ್ಥಳದಲ್ಲಿ ಶಾಶ್ವತ ಪುನರ್ವಸತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ವಹಿಸುವಂತೆ ಸಚಿವರಾಗಿದ್ದ ಯು. ಟಿ. ಖಾದರ್‌ ಸೂಚಿಸಿ ದ್ದರು. ಇದರಂತೆ ಅಂದಿನ ಜಿಲ್ಲಾಧಿಕಾರಿ ಡಾ| ಜಗದೀಶ್‌, ಆ ಬಳಿಕ ಶಶಿಕಾಂತ್‌ ಸೆಂಥಿಲ್‌ ಅವರು ಸ್ಥಳಾಂತರದ ಬಗ್ಗೆ ಆಸಕ್ತಿ ಹೊಂದಿದ್ದರು. ತೀರ ಪ್ರದೇಶದಲ್ಲಿ ಅಪಾಯದಲ್ಲಿರುವವರಿಗೆ ವವರಿಗೆ ಶಾಶ್ವತವಾಗಿ ಬೇರೆ ಕಡೆ ಪುನರ್ವಸತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸೂಕ್ತ ಸ್ಥಳ ಹುಡುಕಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಬದಲಾಗುತ್ತಿದ್ದಂತೆ ಪುನರ್ವಸತಿ ವಿಚಾರ ಮೂಲೆಗೆ ಸರಿದಿದೆ!

ಮಳೆಗಾಲದಲ್ಲಿ ತಾತ್ಕಾಲಿಕ ಕೆಲಸ
ಕೋಟೆಪುರ, ಮೊಗವೀರಪಟ್ಣ ಭಾಗದಲ್ಲಿ ಕಡಲ್ಕೊರತೆ ಸಮಸ್ಯೆ ಕಡಿಮೆಯಾಗಿದೆ. ಸಮ್ಮರ್‌ಸ್ಯಾಂಡ್‌, ಕೈಕೋ, ಹಿಲೆರಿನಗರ, ಸುಭಾಶ್‌ನಗರ ವ್ಯಾಪ್ತಿಯಲ್ಲಿ ಕಾಮಗಾರಿ ಆರಂಭವಾಗಿದೆ. ಕೊರೊನಾ ಕಾರಣದಿಂದ ಕಾಮಗಾರಿ ನಿಂತಿತ್ತು. ಈಗ ಉಸ್ತುವಾರಿ ಸಚಿವರು ಕೂಡ ಆ ಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಳೆಗಾಲದಲ್ಲಿ ತಾತ್ಕಾಲಿಕ ಕೆಲಸ ಮಾಡುವುದಕ್ಕೆ ಇಲ್ಲಿ ಅವಕಾಶ ಮಾಡಿಕೊಡಬೇಕಾಗಿದೆ.
-ಯು.ಟಿ. ಖಾದರ್‌, ಶಾಸಕರು, ಮಂಗಳೂರು ವಿಧಾನಸಭಾ ಕ್ಷೇತ್ರ

ಅಧಿಕಾರಿಗಳ ಜತೆ ಚರ್ಚೆ
ಕಡಲ್ಕೊರೆತದಿಂದಾಗಿ ಮೀನುಗಾರರಿಗೆ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ ಅನೇಕ ಕುಟುಂಬಗಳಿಗೆ ತೊಂದರೆ ಆಗುವ ಹಿನ್ನೆಲೆಯಲ್ಲಿ ತುರ್ತಾಗಿ ತಡೆ ಗೋಡೆ ಮಾಡಬೇಕಾದ ಅಗತ್ಯವಿದೆ. 230 ಕೋ.ರೂ. ಅನುದಾನದಲ್ಲಿ ಕಡಲ್ಕೊರೆತ ತಡೆಯುವ ಕಾಮಗಾರಿ ಪ್ರಗತಿಯಲ್ಲಿದೆ. ಕಡಲಿನ ಅಬ್ಬರ, ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಅಧಿಕಾರಿಗಳ ಜತೆಗೆ
ಚರ್ಚಿಸಲಾಗುವುದು.
-ಕೋಟ ಶ್ರೀನಿವಾಸ ಪೂಜಾರಿ,  ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.