ನವರಾತ್ರಿ ಸೊಬಗು; ನಗರವೆಲ್ಲ ದೀಪಾಲಂಕಾರದ ಮೆರುಗು
Team Udayavani, Sep 30, 2022, 3:05 PM IST
ಮಹಾನಗರ: ನಾಡಿನೆಲ್ಲೆಡೆ ನವರಾತ್ರಿ ಸಂಭ್ರಮ. ದೇವಾಲಯಗಳಲ್ಲಿ ಭಕ್ತಿ ಸಡಗರ. ಇದಕ್ಕೆ ಪೂರಕವಾಗಿ ನಗರವೆಲ್ಲ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
ಶ್ರೀ ಕ್ಷೇತ್ರ ಕುದ್ರೋಳಿ, ಶ್ರೀ ಮಂಗಳಾದೇವಿ ದೇವಸ್ಥಾನ ಸಹಿತ ನಗರದ ಹಲವು ದೇವಾಲಯಗಳು ವಿದ್ಯುದ್ದೀಪಾಲಂಕೃತವಾಗಿ ಕಂಗೊಳಿಸುತ್ತಿರುವುದನ್ನು ನೋಡುವುದೇ ಕಣ್ಣಿಗೊಂದು ಹಬ್ಬ. ವಿವಿಧ ಮಾದರಿಯ ನವ ನವೀನ ವಿನ್ಯಾಸದ ಮಿನಿಯೇಚರ್ಗಳಿಂದ ಅಲಂಕೃತಗೊಂಡ ದೇವಳದ ಗೋಪುರ, ಪೌಳಿಗಳನ್ನು ರಾತ್ರಿ ವೇಳೆ ವೀಕ್ಷಿಸುವುದು ಆನಂದಮಯ. ಪೂರಕವಾಗಿ ಮಂಗಳೂರಿನ ಹಲವು ಸರ್ಕಲ್, ರಸ್ತೆಗಳನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ದಸರಾ ಹಿನ್ನೆಲೆಯಲ್ಲಿ ಈ ಬಾರಿ ರಸ್ತೆಗಳ ಬೆಳಕಿನ ಶೃಂಗಾರವನ್ನು ಮಂಗಳೂರು ಪಾಲಿಕೆಯೇ ನಿರ್ವಹಿಸಿದೆ.
ಜಗದ್ವಿಖ್ಯಾತ ಮಂಗಳೂರು ದಸರಾ ಎಂದು ಗಮನಸೆಳೆದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಮಹೋತ್ಸವ ನೆಲೆಯಲ್ಲಿ ನಗರದ ವಿವಿಧ ರಸ್ತೆಗಳಿಗೆ ಬೆಳಕಿನ ಶೃಂಗಾರ ಮಾಡಲಾಗಿದೆ. ದಸರಾ ಮೆರವಣಿಗೆ ಸಾಗಿ ಬರುವ ಮುಖ್ಯರಸ್ತೆಗಳು ಬಗೆಬಗೆಯ ಬೆಳಕಿನ ಚಿತ್ತಾರದಿಂದ ಕನ್ಮಣ ಸೆಳೆಯುತ್ತಿದೆ. ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನದ ಮುಂಭಾಗ ಹಾಗೂ ಅಕ್ಕ ಪಕ್ಕದ ರಸ್ತೆಗಳು ಕೂಡ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದೆ. ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಕೊಡಿಯಾಲಬೈಲ್ನ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ, ಬೋಳಾರ ಶ್ರೀ ಮಾರಿಯಮ್ಮ ಮಹಿಷಾಮರ್ಧಿನಿ ದೇವಸ್ಥಾನ, ಉರ್ವಾ ಶ್ರೀ ಮಾರಿಯಮ್ಮ ದೇವಸಾœನ ಸಹಿತ ವಿವಿಧ ದೇವಾಲಯಗಳು, ಆಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಣ್ಣ ಬಣ್ಣದ ಬೆಳಕಿನೊಂದಿಗೆ ಗಮನಸೆಳೆಯುತ್ತಿದೆ.
ಶಕ್ತಿ ದೇವತೆಯ ಹಬ್ಬ
ಒಂಬತ್ತು ದಿನ ಒಂದೊಂದು ಶಕ್ತಿ ದೇವತೆಯನ್ನು ಆರಾಧಿಸುವುದೇ ನವರಾತ್ರಿಯ ವಿಶೇಷ. ರಾಜ್ಯದಲ್ಲಿ ನಾಡಹಬ್ಬದಂತೆ ನವರಾತ್ರಿಯನ್ನು ಆಚರಿಸಲಾಗುತ್ತಿದ್ದರೆ, ಕರಾವಳಿಯಲ್ಲಿ ಮಂಗಳೂರು ದಸರಾ ಸ್ವರೂಪದಲ್ಲಿ ಸಂಭ್ರಮಿಸಲಾಗುತ್ತಿದೆ. ಶಕ್ತಿ ದೇವತೆಯ ಹಬ್ಬ ನವರಾತ್ರಿ ಉತ್ಸವ ಸೆ. 26 ರಿಂದ ಆರಂಭವಾಗಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಸಾವಿರಾರು ಜನಸಂದೋಹದ ಮಧ್ಯೆ ನಡೆಯುತ್ತಿರುವ ನವರಾತ್ರಿ ಮಹೋತ್ಸವ ಭಕ್ತ ಸಮೂಹಕ್ಕೆ ಹೊಸ ಚೈತನ್ಯ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ