ಮಂಗಳೂರು: ಹೊಸ ಹೆಲಿಪ್ಯಾಡ್‌ನ‌ಲ್ಲಿ ಯಶಸ್ವಿ ಕಾರ್ಯಾಚರಣೆ


Team Udayavani, May 4, 2023, 7:20 AM IST

ಮಂಗಳೂರು: ಹೊಸ ಹೆಲಿಪ್ಯಾಡ್‌ನ‌ಲ್ಲಿ ಯಶಸ್ವಿ ಕಾರ್ಯಾಚರಣೆ

ಮಂಗಳೂರು/ ಮೂಲ್ಕಿ: ಒಂದು ಕಡೆ ಹೆದ್ದಾರಿ, ಇನ್ನೊಂದು ಕಡೆ ಕೈಗಾರಿಕಾ ಪ್ರದೇಶ, ಜತೆಗೆ ಸುತ್ತಮುತ್ತ ಜನವಸತಿಯೂ ಇರುವ ಪ್ರದೇಶ. ಇವೆಲ್ಲದರ ನಡುವೆಯೇ ನಿರ್ಮಿಸಲಾದ ಹೆಲಿಪ್ಯಾಡ್‌ನ‌ಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ ಸೇರಿದಂತೆ ಒಟ್ಟು 3 ಹೆಲಿಕಾಪ್ಟರ್‌ಗಳ ಯಶಸ್ವಿ ಕಾರ್ಯಾಚರಣೆ ನಡೆಯಿತು.

ಪೈಲಟ್‌ಗಳು ಯಾವುದೇ ಸಮಸ್ಯೆ ಯಾಗದಂತೆ ಹೆಲಿಕಾಪ್ಟರ್‌ಗಳನ್ನು ಇಳಿಸಿ ಟೇಕಾಫ್‌ ಮಾಡಿದರು. ಮೂರು ಕಡೆಗಳಲ್ಲಿ ಹೆಲಿಪ್ಯಾಡ್‌ಗಳನ್ನು ಸಿದ್ಧಗೊಳಿಸಲಾಗಿತ್ತು. ಒಂದು ಸಮಾವೇಶ ಸ್ಥಳದಿಂದ 500 ಮೀ. ದೂರದಲ್ಲಿರುವ ಕೊಲಾ°ಡಿನ ಕೃಷಿ ಮೇಳ ಮೈದಾನದಲ್ಲಿ. ಇನ್ನೆರಡು ಎನ್‌ಎಂ ಪಿಎ ಮತ್ತು ಎನ್‌ಐಟಿಕೆ ಮೈದಾನ. ಎಸ್‌ಪಿಜಿಯವರು ಮೊದಲೇ ಪರಿಶೀಲನೆ ನಡೆಸಿ ಕೊಲಾ°ಡಿನ ಹೆಲಿಪ್ಯಾಡ್‌ ಸಭಾಂಗಣಕ್ಕೆ ಹತ್ತಿರ ಮತ್ತು ಲ್ಯಾಂಡಿಂಗ್‌ಗೆ ಸೂಕ್ತ ಎಂದು ಸೂಚಿಸಿದ್ದ ಹಿನ್ನೆಲೆಯಲ್ಲಿ ಅಲ್ಲಿಯೇ ಲ್ಯಾಂಡಿಂಗ್‌ಗೆ ಅನುಕೂಲ ಮಾಡಿದ್ದರು.

ಮೋದಿ ಅವರಿಗಾಗಿ ತಾತ್ಕಾಲಿಕವಾಗಿ ನಿರ್ಮಿಸಲಾದ ಹೆಲಿಪ್ಯಾಡ್‌ ಆಗಿದ್ದರೂ ಸುಸಜ್ಜಿತವಾಗಿತ್ತು. ಸ್ಥಳದಲ್ಲಿ ಎರಡು ಅಗ್ನಿಶಾಮಕ ವಾಹನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿತ್ತು. ಹೆಲಿಕಾಪ್ಟರ್‌ ಇಳಿಯುವಾಗ ಧೂಳು ಏಳದಂತೆ ತಡೆಯುವ ನಿಟ್ಟಿನಲ್ಲಿ ಟ್ಯಾಂಕರ್‌ನಲ್ಲಿ ನೀರು ಹಾಯಿಸಲಾಯಿತು. ಲ್ಯಾಂಡಿಂಗ್‌ ಮತ್ತು ಟೇಕಾಫ್‌ ಆಗುವಾಗ ಪೈಲಟ್‌ಗಳಿಗೆ ಗಾಳಿಯ ದಿಕ್ಕು ತಿಳಿಯಲು ಸ್ಥಳದಲ್ಲಿ “ವಿಂಡ್‌ ಸಾಕ್‌’ ಅಳವಡಿಸಲಾಗಿತ್ತು. ಮೋದಿಯವರ ಬಂದಿದ್ದ ಹೆಲಿಕಾಪ್ಟರ್‌ಗೆ ಇಂಡಿಯನ್‌ ಆಯಿಲ್‌ ಏವಿಯೇಶನ್‌ ಟ್ಯಾಂಕರ್‌ ಮೂಲಕ ಹೆಲಿಪ್ಯಾಡ್‌ನ‌ಲ್ಲೇ ಇಂಧನವನ್ನೂ ತುಂಬಿಸಲಾಯಿತು.

ಮೂರನೇ ಹೆಲಿಕಾಪ್ಟರ್‌ನಲ್ಲಿ ಮೋದಿ
ಲ್ಯಾಂಡಿಂಗ್‌ ಆದ 3 ಹೆಲಿಕಾಪ್ಟರ್‌ಗಳ ಪೈಕಿ ಮೊದಲ ಹೆಲಿಕಾಪ್ಟರ್‌ನಲ್ಲಿ ಮೋದಿಯವರ ಛಾಯಾಚಿತ್ರಗ್ರಾಹಕರು, ಇತರ ಆಪ್ತ ಸಿಬಂದಿ ಬಂದಿಳಿದರು. ಬಳಿಕ ಆ ಹೆಲಿಕಾಪ್ಟರ್‌ ಸ್ಥಳದಿಂದ ನಿರ್ಗಮಿಸಿತು. ಅನಂತರದ ಹೆಲಿಕಾಪ್ಟರ್‌ ಹೆಚ್ಚುವರಿ (ಸ್ಪೇರ್‌) ಆಗಿದ್ದ ಕಾರಣ ಪೈಲಟ್‌ ಮಾತ್ರ ಇದ್ದರು. ಕೊನೆಯದಾಗಿ ಮೋದಿಯವರಿದ್ದ ಝಡ್‌ಪಿ 5230 ಹೆಲಿಕಾಪ್ಟರ್‌ ಆಗಮಿಸಿತು. ಮೊದಲಿನ ಹೆಲಿಕಾಪ್ಟರ್‌ ಮತ್ತೆ ಬಂದು ಲ್ಯಾಂಡ್‌ ಆಯಿತು. ಸಮಾವೇಶ ಮುಗಿದ ಬಳಿಕ ಮೂರು ಕೂಡ ನಿರ್ಗಮಿಸಿದವು.

ಎಸ್‌ಪಿಜಿ, ಪೊಲೀಸರಿಂದ ನಿಯಂತ್ರಣ
ಹೆಲಿಪ್ಯಾಡ್‌ನ‌ ಸುತ್ತಮುತ್ತಲಿನ ಪ್ರದೇಶವನ್ನು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದರು. ಸುತ್ತಲೂ ಪೊಲೀಸರನ್ನು ನಿಯೋಜಿಸಲಾಗಿತ್ತು. ನಾಲ್ಕು ಮಂದಿ ಬ್ಲ್ಯಾಕ್‌ ಕ್ಯಾಟ್‌ ಸಿಬಂದಿ ಬೈನಾಕ್ಯುಲರ್‌ ಮೂಲಕ ಹೆಲಿಪ್ಯಾಡ್‌ನ‌ ಸುತ್ತಲೂ ಆಗಾಗ ಪರಿಶೀಲಿಸುತ್ತಿದ್ದರು. ಹೆಲಿಪ್ಯಾಡ್‌ ಪಾಸ್‌ ಇದ್ದವರಿಗಷ್ಟೇ ಸುತ್ತಮುತ್ತ ಅಡ್ಡಾಡಲು ಅವಕಾಶವಿತ್ತು. ಹೆದ್ದಾರಿಯಲ್ಲಿ ಸಮಾವೇಶಕ್ಕೆ ಬರುತ್ತಿದ್ದ ಜನರನ್ನು ಸ್ವಲ್ಪ ಹೊತ್ತು ನಿಲ್ಲಲೂ ಪೊಲೀಸರು ಅವಕಾಶ ನೀಡುತ್ತಿರಲಿಲ್ಲ. ಆಗಾಗ್ಗೆ ಟ್ರಾಫಿಕ್‌ ಪೊಲೀಸರು ವಾಹನದಲ್ಲಿ ಅನೌನ್ಸ್‌ ಮಾಡಿ ಜನರನ್ನು ಸಮಾವೇಶ ಸ್ಥಳಕ್ಕೆ ಕಳುಹಿಸುತ್ತಿದ್ದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.