ಸುರತ್ಕಲ್‌ ಮಧ್ಯದಲ್ಲಿ ಹೊಸ ಲೇಔಟ್‌

474 ನಿವೇಶನ ಹಂಚಿಕೆಗೆ ಗೃಹ ಮಂಡಳಿ ಚಿಂತನೆ; ಬೇಡಿಕೆ ಸರ್ವೇ ಆರಂಭ

Team Udayavani, Dec 9, 2022, 8:55 AM IST

2

ಮಹಾನಗರ: ಖಾಸಗಿ ಭೂಮಿ ಪಡೆದು ಅದನ್ನು ಕರ್ನಾಟಕ ಗೃಹ ಮಂಡಳಿಯಿಂದ ಲೇಔಟ್‌ ಮಾಡಿ ಜನರಿಗೆ ನಿವೇಶನ ಒದಗಿಸುವ ಮಹತ್ವದ ಯೋಜನೆ ಸುರತ್ಕಲ್‌ ಸಮೀಪದ ಮಧ್ಯ ಗ್ರಾಮದಲ್ಲಿ ಅನುಷ್ಠಾನಕ್ಕೆ ಚಿಂತನೆ ನಡೆಸಲಾಗಿದೆ.

ಇಲ್ಲಿನ ಸುಮಾರು 31.57 ಎಕರೆ ಖಾಸಗಿ ಜಮೀನಿನಲ್ಲಿ 474 ನಿವೇಶನವನ್ನು 50:50 (ಭೂ ಮಾಲಕರಿಗೆ: ಗೃಹ ಮಂಡಳಿಗೆ) ಅನುಪಾತದಲ್ಲಿ ಎಲ್ಲ ಮೂಲ ಸೌಕರ್ಯವನ್ನು ಒಳಗೊಂಡ ವಸತಿ ಯೋಜನೆಗೆ ಕರ್ನಾಟಕ ಗೃಹ ಮಂಡಳಿ ತೀರ್ಮಾನಿಸಿದೆ. ಇದಕ್ಕಾಗಿ ಸಾರ್ವಜನಿಕರಿಂದ “ಬೇಡಿಕೆ ಸರ್ವೇ’ ಆರಂಭಿಸಲಾಗಿದೆ. ನಿವೇಶನ ಬಯಸಿ ಸಾರ್ವಜನಿಕರು ಸಲ್ಲಿಸುವ ಅರ್ಜಿಯ ಆಧಾರದಲ್ಲಿ “ಬೇಡಿಕೆ’ ಬಂದರೆ ಅದರಂತೆ ಗೃಹಮಂಡಳಿಯು ಲೇಔಟ್‌ ಮಾಡಿ ಫಲಾನುಭವಿಗಳಿಗೆ ನೀಡಲಿದೆ.

ಭೂಮಾಲಕರಿಂದ ಪಡೆದ ಭೂಮಿಗೆ ಗೃಹ ಮಂಡಳಿ ಹಣ ಪಾವತಿಸುವುದಿಲ್ಲ. ಬದಲಿಗೆ ನಿಗದಿತ ಜಮೀನು ದೊರೆತರೆ ಅದನ್ನು ಗೃಹಮಂಡಳಿ ಪಡೆದು ಲೇಔಟ್‌ ಮಾಡಿ, ಅದಕ್ಕೆ ಪರ್ಮಿಷನ್‌ ಆಗಿ, ವಿದ್ಯುತ್‌, ಚರಂಡಿ, ಕುಡಿಯುವ ನೀರು ಸಹಿತ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತದೆ. ಬಳಿಕ ಆ ಜಮೀನಿನ ಬಗ್ಗೆ ಮಾರ್ಕೆಟಿಂಗ್‌ ಕೂಡ ಗೃಹ ಮಂಡಳಿಯೇ ನಡೆಸುತ್ತದೆ. ಹೀಗೆ ಅಭಿವೃದ್ಧಿ ಪಡಿಸಿದ ಒಟ್ಟು ಜಮೀನಿನ ಪೈಕಿ ಶೇ.50ರಷ್ಟು ಭೂಮಿಯನ್ನು ಸಂಬಂಧಪಟ್ಟ ಭೂಮಾಲಕರಿಗೆ ಗೃಹ ಮಂಡಳಿ ನೀಡುತ್ತದೆ.

ಗೃಹ ಮಂಡಳಿಯ ಅಧಿಕಾರಿಗಳು “ಸುದಿನ’ ಜತೆಗೆ ಮಾತನಾಡಿ, “ಜಮೀನು ನೀಡುವ ಪಾಲಿಕೆ, ಇತರ ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಗೆ ಬರುವ ಮಾಲಕರಿಗೆ ಅಭಿವೃದ್ಧಿಪಡಿಸಿದ ನಿವೇಶನವನ್ನು ಸಮಾನ ಮಾದರಿಯಲ್ಲಿ ಹಂಚಿಕೆ ಮಾಡಲಾಗುತ್ತದೆ. ಎಲ್ಲ ಸೌಲಭ್ಯವನ್ನು ಆ ಜಮೀನಿಗೆ ಗೃಹ ಮಂಡಳಿಯು ನಡೆಸಿಕೊಡಲಿದೆ. ನಗದು ಪರಿಹಾರದ ಬದಲು ಅಭಿವೃದ್ಧಿ ಪಡಿಸಿದ ಜಮೀನನ್ನೇ ಭೂಮಾಲಕರಿಗೆ ನೀಡುವ ಹಿನ್ನೆಲೆಯಲ್ಲಿ ಭೂಮಾಲಕರಿಗೂ ಮುಂದೆ ಉಪಯೋಗಕ್ಕೆ ಬರಲಿದೆ. ಹೀಗಾಗಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಈ ರೀತಿ ಭೂಮಿ ದೊರಕಿದರೆ ಇನ್ನಷ್ಟು ನಿವೇಶನ ನೀಡಲು ಸಾಧ್ಯವಾಗಲಿದೆ’ ಎನ್ನುತ್ತಾರೆ.

ಏನಿದು ಯೋಜನೆ?

ಭೂಮಾಲಕರಿಂದ ಉಚಿತವಾಗಿ ಭೂಮಿ ಪಡೆದು ಗೃಹ ಮಂಡಳಿಯು ಅದನ್ನು ಸಂಪೂರ್ಣ ಲೇಔಟ್‌ ಮಾಡುತ್ತದೆ. ಅಭಿವೃದ್ಧಿಪಡಿಸಿದ ಅನಂತರ ಒಟ್ಟು ಭೂಮಿಯ ಅರ್ಧದಷ್ಟು ಗೃಹ ಮಂಡಳಿ ಹಾಗೂ ಉಳಿದ ಅರ್ಧವನ್ನು ಭೂಮಾಲಕರಿಗೆ ನೀಡಲಾಗುತ್ತದೆ. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಾದರೆ ಶೇ.50:50 ಇದ್ದರೆ ಗ್ರಾಮಾಂತರ ಭಾಗದಲ್ಲಾದರೆ ಶೇ.60 ಗೃಹ ಮಂಡಳಿ ಹಾಗೂ ಶೇ. 40 ಭೂಮಾಲಕರಿಗೆ ಅಭಿವೃದ್ಧಿಪಡಿಸಿದ ಲೇಔಟ್‌ ದೊರೆಯಲಿದೆ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಇಂತಹ ಪರಿಕಲ್ಪನೆ ಜಾರಿಗೆ ಗೃಹ ಮಂಡಳಿ ನಿರ್ಧರಿಸಿದೆ.

ನಿವೇಶನ ನೀಡಲು ಕ್ರಮ: ಮಧ್ಯ ಗ್ರಾಮದಲ್ಲಿ 31.57 ಎಕರೆ ಖಾಸಗಿ ಜಮೀನಿನಲ್ಲಿ 474 ನಿವೇಶನ ಮಾಡುವ ಯೋಜನೆಗೆ ಗೃಹ ಮಂಡಳಿ ತೀರ್ಮಾನಿಸಿದೆ. ಇದರಂತೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅವರ ಬೇಡಿಕೆಯ ಆಧಾರದಂತೆ ಅಭಿವೃದ್ಧಿಪಡಿಸಿದ ಭೂಮಿಯನ್ನು ಭೂಮಾಲಕರು, ಗೃಹಮಂಡಳಿ 50:50 ಅನುಪಾತದೊಂದಿಗೆ ಹಂಚಿಕೆ ಮಾಡುತ್ತದೆ. ಗೃಹಮಂಡಳಿ ನಿವೇಶನ ಫಲಾನುಭವಿಗಳಿಗೆ ನೀಡಲಾಗುತ್ತದೆ. –ವಿಜಯ್‌ ಕುಮಾರ್‌, ಸಹಾಯಕ ಕಾರ್ಯಪಾಲಕ ಅಭಿಯಂತ, ಕರ್ನಾಟಕ ಗೃಹ ಮಂಡಳಿ, ಮಂಗಳೂರು

-ದಿನೇಶ್‌ ಇರಾ

ಟಾಪ್ ನ್ಯೂಸ್

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತಸ್ವೀಪ್‌ ಚಿತ್ತ!

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ajit kumar rai maladi

ಬಂಟರು ಯಾನೆ ನಾಡವರನ್ನು ಪ್ರವರ್ಗ 2(ಎ)ಗೆ ಸೇರಿಸಿ- ನಿಗಮ ಸ್ಥಾಪಿಸಿ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.