ಹೆದ್ದಾರಿ ಸುತ್ತ-ಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್

ಪಡೀಲಿನ ಫಸ್ಟ್‌ ನ್ಯೂರೋ ಆಸ್ಪತ್ರೆ ಸೀಲ್‌ಡೌನ್‌

Team Udayavani, Apr 25, 2020, 5:30 AM IST

ಹೆದ್ದಾರಿ ಸುತ್ತ-ಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್

ಸಾಂದರ್ಭಿಕ ಚಿತ್ರ..

ಮಂಗಳೂರು: ಕೋವಿಡ್ 19ದಿಂದ ಗುರುವಾರ ಮೃತಪಟ್ಟ ಬಂಟ್ವಾಳದ 75 ವರ್ಷದ ವೃದ್ದೆ ಈ ಹಿಂದೆ ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯುತ್ತಿದ್ದ ಪಡೀಲಿನ ಫಸ್ಟ್‌ ನ್ಯೂರೋ ಆಸ್ಪತ್ರೆ ಆವರಣವನ್ನು ಜಿಲ್ಲಾಡಳಿತ ಸಂಪೂರ್ಣ ಸೀಲ್‌ಡೌನ್‌ ಮಾಡಿರುವುದರಿಂದ ಶುಕ್ರವಾರ ಈ ಪ್ರದೇಶದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಸೀಲ್‌ಡೌನ್‌ ಆದ ದಿನವೇ ಪೊಲೀಸರು ಪ್ರತಿ ಮನೆಗೆ ತೆರಳಿ ಮನೆಯಿಂದ ಹೊರ ಬಾರದೆಂದು ಜನಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಜನ ಆದೇಶ ಪಾಲನೆ ಮಾಡಿದ್ದು, ಇಡೀ ಪ್ರದೇಶ ಬಿಕೋ ಎನ್ನುವಂತಿತ್ತು. ಆಸ್ಪತ್ರೆಯ ಮುಂಭಾಗದಲ್ಲಿ ಪೊಲೀಸರ ಕಾವಲು ಹಾಕಲಾಗಿದೆ. ಆಸ್ಪತ್ರೆಯ ಒಳಗೆ ಹೋಗಲು, ಆಸ್ಪತ್ರೆಯಿಂದ ಹೊರ ಬರಲು ಯಾವುದೇ ರೋಗಿಗಳು ಅಥವಾ ಇತರ ಜನರಿಗೆ ಅವಕಾಶವಿರಲಿಲ್ಲ.

ಏಕಮುಖ ಸಂಚಾರಕ್ಕೆ ವ್ಯವಸ್ಥೆ
ಆಸ್ಪತ್ರೆ ಮುಂಭಾಗದಲ್ಲಿರುವ ಹೆದ್ದಾರಿಯಲ್ಲಿ ತುರ್ತು ವಾಹನಗಳಿಗೆ ಏಕಮುಖ ಸಂಚಾರಕ್ಕಷ್ಟೇ ಅವಕಾಶ ಕಲ್ಪಿಸಲಾಗಿದೆ. ಪುತ್ತೂರು, ಬಂಟ್ವಾಳ ಭಾಗದಿಂದ ಮಂಗಳೂರು ನಗರಕ್ಕೆ ಪ್ರವೇಶ ಪಡೆಯುವ ರಸ್ತೆಗೆ ಆಸ್ಪತ್ರೆ ಮುಂಭಾಗ ಅಡ್ಡಲಾಗಿ ಬ್ಯಾರಿಕೇಡ್‌ ಅಳವಡಿಸಿ ಮುಚ್ಚಲಾಗಿತ್ತು. ಆದರೆ, ಮಂಗಳೂರಿನಿಂದ ಈ ರಸ್ತೆಯಾಗಿ ಬಂಟ್ವಾಳ ಕಡೆಗೆ ಸಾಗುವ ತುರ್ತು ವಾಹನಗಳಿಗೆ ರಸ್ತೆಯಲ್ಲಿ ಅವಕಾಶ ಕೊಡಲಾಗಿತ್ತು. ಆ ಕಡೆಯಿಂದ ಬರುವ ವಾಹನಗಳಿಗೂ ಇದೇ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪ್ರಸ್ತುತ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಹೆದ್ದಾರಿಯಲ್ಲಿ ತುರ್ತು ಸೇವೆಗಳ ವಾಹನಗಳನ್ನು ಹೊರತುಪಡಿಸಿ ಇತರ ವಾಹನಗಳ ಓಡಾಟ ಇರುವುದಿಲ್ಲ. ಆದರೆ, ಬೆಳಗ್ಗೆ 7ರಿಂದ 12ರ ತನಕ ದಿನಸಿ ಅಂಗಡಿಗಳು ತೆರೆದಿರುವುದರಿಂದ ಆ ಸಮಯದಲ್ಲಿ ಇಲ್ಲಿ ಜನರ ಓಡಾಟ ಇರುತ್ತಿತ್ತು. ಆದರೆ, ಇದೀಗ ಸೀಲ್‌ಡೌನ್‌ ಮಾಡಿರುವುದರಿಂದ ಜನ ಮನೆಯಿಂದ ಹೊರ ಬರಬಾರದು ಎಂಬ ಆದೇಶವೂ ಇರುವುದರಿಂದ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶ ಜನರ ಓಡಾಟವಿಲ್ಲದೆ ಬಿಕೋ ಎನ್ನುತ್ತಿತ್ತು.

ಕಂಟೈನ್ಮೆಂಟ್‌ ಝೋನ್‌ಗಳಲ್ಲಿಲ್ಲ ಓಡಾಟ
ಆಸ್ಪತ್ರೆಯ ಪೂರ್ವಭಾಗದಿಂದ ಕನ್ನಗುಡ್ಡೆ, ಪಶ್ಚಿಮದಿಂದ ರಮಾನಾಥ್‌ ಕೃಪಾ ರೈಸ್‌ ಮಿಲ್‌, ಉತ್ತರಕ್ಕೆ ರಾ.ಹೆ. 73 ದಕ್ಷಿಣಕ್ಕೆ ಸರಕಾರಿ ಜಾಗದ ಸುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್‌ ಝೋನ್‌ ಎಂದು ಜಿಲ್ಲಾಡಳಿತ ಈಗಾಗಲೇ ಘೋಷಣೆ ಮಾಡಿ ಆದೇಶಿಸಿದೆ.

ಬ್ಯಾರಿಕೇಡ್‌ ಅಳವಡಿಕೆ
ಆಸ್ಪತ್ರೆ ಸನಿಹದಲ್ಲೇ ಇರುವ ಎರಡು ಅಂಗಡಿ ಮತ್ತು ಐದು ಮನೆಗಳನ್ನೂ ಸೀಲ್‌ಡೌನ್‌ ಮಾಡಲಾಗಿರುವುದರಿಂದ ಜನ ಮನೆಯೊಳಗೇ ಬಾಕಿಯಾಗಿದ್ದಾರೆ. ಸೀಲ್‌ಡೌನ್‌ ಮಾಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.

ಬಫರ್‌ ಝೋನ್‌ ವ್ಯಾಪ್ತಿಯಲ್ಲಿರುವ ಪ್ರದೇಶಗಳು
ಸೀಲ್‌ಡೌನ್‌ ಮಾಡಿದ ಪರಿಸರದ 5 ಕಿ.ಮೀ. ವ್ಯಾಪ್ತಿಯನ್ನು ಬಫರ್‌ ಝೋನ್‌ ಎಂದೂ ಘೋಷಣೆ ಮಾಡಲಾಗಿದೆ. 42 ಸಾವಿರ ಮನೆ, 1,800 ಅಂಗಡಿ ಮತ್ತು ಕಚೇರಿ, 1.8 ಲಕ್ಷ ಜನರು ಬಫರ್‌ ಝೋನ್‌ ಅಡಿಯಲ್ಲಿ ಬರುತ್ತಾರೆ. ಪೂರ್ವಕ್ಕೆ ಕಲ್ಲಾಪು, ಪಶ್ಚಿಮಕ್ಕೆ ಕುಡುಪು, ಉತ್ತರಕ್ಕೆ ಫರಂಗಿಪೇಟೆ, ದಕ್ಷಿಣಕ್ಕೆ ಫಳ್ನೀರ್‌ ಬಫರ್‌ ಝೋನ್‌ ವ್ಯಾಪ್ತಿಯಲ್ಲಿರುವ ಪ್ರದೇಶಗಳು.

ಒಳರೋಗಿಗಳಿಗೆ ಆಹಾರ
ಪೂರೈಕೆಗೆ ಆಗ್ರಹ
ಸುಳ್ಯ: ಕೋವಿಡ್ 19 ಪಾಸಿಟಿವ್‌ ಮಹಿಳೆ ಚಿಕಿತ್ಸೆಗಾಗಿ ದಾಖಲಾಗಿದ್ದ ಮಂಗಳೂರು ಪಡೀಲ್‌ ಫಸ್ಟ್‌ ನ್ಯೂರೋ ಆಸ್ಪತ್ರೆ ಸೀಲ್‌ಡೌನ್‌ ಆಗಿದ್ದು ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿರುವರಿಗೆ ಹಾಗೂ ಮನೆಯವರಿಗೆ ಕ್ಯಾಂಟಿನ್‌ ವ್ಯವಸ್ಥೆ ಇಲ್ಲದ ಕಾರಣ ಸಮಯಕ್ಕೆ ಸರಿಯಾಗಿ ಆಹಾರ ಪೂರೈಕೆ ಆಗುತ್ತಿಲ್ಲ ಎಂಬ ದೂರು ಕೇಳಿ ಬಂದಿದೆ.

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.