ಪ್ರಾಕೃತಿಕ ವಿಕೋಪ: ಸಾವು ನೋವು ತಗ್ಗಿಸಲು ಎನ್‌ಐಟಿಕೆಯ ಇಂಡೆಕ್ಸ್‌


Team Udayavani, Feb 21, 2023, 7:30 AM IST

ಪ್ರಾಕೃತಿಕ ವಿಕೋಪ: ಸಾವು ನೋವು ತಗ್ಗಿಸಲು ಎನ್‌ಐಟಿಕೆಯ ಇಂಡೆಕ್ಸ್‌

ಸುರತ್ಕಲ್‌: ಟರ್ಕಿಯಲ್ಲಿನ ಭೀಕರ ಭೂ ಕಂಪನದಿಂದ ಸಾವಿರಾರು ಮಂದಿ ಕಟ್ಟಡದೊಳಗೆ ಸಿಲುಕಿ ಪ್ರಾಣ ಕಳೆದುಕೊಂಡಿರುವ ದೃಶ್ಯಾವಳಿ ಕಣ್ಣಮುಂದೆ ಬರುತ್ತಿರುವಂತೆಯೇ ಸುರತ್ಕಲ್‌ನ ಎನ್‌ಐಟಿಕೆ ಸಂಸ್ಥೆಯ ಪ್ರೊ| ಶ್ರೀವಲ್ಸ ಕೊಳತ್ತಾಯರ್‌ ಶೋಧಿಸಿದ 5 ವರ್ಷಗಳ ಹಿಂದಿನ ಪ್ರಾಕೃತಿಕ ವಿಕೋಪ ಪೂರ್ವತಯಾರಿ ಇಂಡೆಕ್ಸ್‌ (ಸೂಚ್ಯಂಕ) ಮತ್ತೆ ಮುನ್ನೆಲೆಗೆ ಬಂದಿದೆ.

ಭಾರತ ಸೇರಿದಂತೆ ಅಭಿವೃದ್ಧಿ ಹೊಂದುತ್ತಿರುವ ಹಾಗೂ ಬಡ ರಾಷ್ಟ್ರಗಳಲ್ಲಿ ಪ್ರಾಕೃತಿಕ ವಿಕೋಪದಿಂದ ರಕ್ಷಿಕೊಳ್ಳಲು ಪೂರ್ವ ತಯಾರಿಯ ಕೊರತೆ ಕಂಡು ಬರುತ್ತದೆ. ಭೂಕಂಪ ವಲಯದಲ್ಲಿ ಅವೈಜ್ಞಾನಿಕ ಕಟ್ಟಡಗಳ ನಿರ್ಮಾಣದಿಂದ ಹೆಚ್ಚಿನ ಸಾವು ಸಂಭವಿಸುತ್ತಿದೆ. ಪ್ರಕೃತಿ ವಿಕೋಪದ ಸಂದರ್ಭ ಜನರ ಪೂರ್ವ ತಯಾರಿ ಹೇಗಿರುತ್ತದೆ ಎಂಬ ಬಗ್ಗೆ ಗ್ರಾಮ, ನಗರ, ವಾರ್ಡ್‌ ಮಟ್ಟದಲ್ಲಿ ಅಧ್ಯಯನ ನಡೆಸಿ ಈ ಇಂಡೆಕ್ಸ್‌ ತಯಾರಿಸಲಾಗಿದೆ. ಪರಿಸ್ಥಿತಿಯನ್ನು ಎದುರಿಸಲು ಜನತೆ ಮುನ್ಸೂಚನೆಯನ್ನು ಪಾಲಿಸಬೇಕು. ಜೀವ ಉಳಿಸಿಕೊಳ್ಳುವ ಉಪಾಯಗಳು ಮತ್ತಿತರ ವಿಚಾರಗಳನ್ನು ಇದು ಒಳಗೊಂಡಿದೆ.

ಶ್ರೀವಲ್ಸ ಅವರ ಸೂಚ್ಯಂಕದ ಅಳವಡಿಕೆಗೆ ನ್ಯೂಜಿಲ್ಯಾಂಡ್‌, ಸ್ವಿಜರ್‌ಲ್ಯಾಂಡ್‌ ದೇಶಗಳು ಆಸಕ್ತಿ ತಳೆದಿದ್ದು, ಅಲ್ಲಿಯ ಹವಾಗುಣಕ್ಕೆ ತಕ್ಕಂತೆ ಸೂಚ್ಯಂಕವನ್ನು ತಯಾರಿಸಿ ಕೊಡಲು ಮಾತುಕತೆ ನಡೆದಿದೆ.

ನಾನು ತಯಾರಿಸಿದ ಪ್ರಾಕೃತಿಕ ವಿಕೋಪ ಪೂರ್ವ ತಯಾರಿ ಸೂಚ್ಯಂಕವನ್ನು ಬಳಸಿಕೊಂಡು ಜನರಲ್ಲಿ ಜಾಗೃತಿ ಮತ್ತು ತಯಾರಿ ನಡೆಸಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಮಾಡಿದರೆ ಶೇ. 40ರಷ್ಟಾದರೂ ಜೀವ ಹಾನಿ ಕಡಿಮೆ ಮಾಡಲು ಸಾಧ್ಯ. ಸ್ಥಳೀಯ ಆಡಳಿತಗಳು, ರಾಜ್ಯ, ದೇಶದಲ್ಲಿ ಇದು ಕಡ್ಡಾಯವಾಗಿ ಜಾರಿಗೆ ತಂದರೆ ಜನರಲ್ಲಿಯೂ ಸುರಕ್ಷೆಯ ಭಾವನೆ ಹೆಚ್ಚಬಹುದು.
– ಪ್ರೊ| ಶ್ರೀವಲ್ಸ ಕೊಳತ್ತಾಯರ್‌, ಸಂಶೋಧಕ, ಎನ್‌ಐಟಿಕೆ

ಯಾವೆಲ್ಲ ಮುನ್ನೆಚ್ಚರಿಕೆ ವಹಿಸುವುದರಿಂದ ಪ್ರಾಕೃತಿಕ ವಿಕೋಪದ ಸಂದರ್ಭ ಸಾವು ನೋವು ತಗ್ಗಿಸಲು ಸಾಧ್ಯವಾದೀತು ಎಂಬ ಬಗ್ಗೆ ಶ್ರೀವಲ್ಸ 10 ವರ್ಷಗಳಿಂದ ಅಧ್ಯಯನ ನಡೆಸಿ 14 ಅಂಶಗಳ ಸೂಚ್ಯಂಕ (ಇಂಡೆಕ್ಸ್‌)ತಯಾರಿಸಿದ್ದಾರೆ. ಅದರ ಅನುಷ್ಠಾನದಿಂದ ಶೇ. 40ರಷ್ಟಾದರೂ ಸಾವು ನೋವು ಕಡಿಮೆ ಮಾಡಬಹುದು ಎಂಬುದು ಅವರ ಲೆಕ್ಕಾಚಾರ. ಆಹಾರ ದಾಸ್ತಾನು, ನೀರು, ಪ್ರಾಣ ಉಳಿಸಿಕೊಳ್ಳುವ ಉಪಾಯ, ಕಟ್ಟಡ ನಿರ್ಮಾಣ ಹೇಗಿರಬೇಕು, ಮುಂಜಾಗ್ರತೆ, ತರಬೇತಿ ಇದರಲ್ಲಿದೆ. ಪ್ರಸ್ತುತ ಭಾರತದ ಕೆಲವೆಡೆ, ಬಾಂಗ್ಲಾದೇಶ, ಮಲೇಶ್ಯಾ, ಫಿಲಿಪೈನ್ಸ್‌ ಮೊದಲಾದೆಡೆ ಇದನ್ನು ಬಳಸಲಾಗುತ್ತಿದೆ.

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.