ಸಿಗದ ಸಚಿವ ಸ್ಥಾನ: ಕರಾವಳಿ ಬಿಲ್ಲವ ಸಮುದಾಯದ ಅಸಮಾಧಾನ
Team Udayavani, May 27, 2023, 4:22 PM IST
ಮಂಗಳೂರು: ಕರಾವಳಿಯ ಬಿಲ್ಲವ ಸಮುದಾಯದ ಮುಖಂಡರಿಗೆ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡರು ಅಸಮಾಧಾನ ತಮ್ಮ ವ್ಯಕ್ತಪಡಿಸಿದ್ದಾರೆ.
ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಪಕ್ಷದ ನಿರ್ಧಾರದಿಂದ ಬೇಸರವಾಗಿದೆ. ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅಥವಾ ಹರೀಶ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಗಬಹುದು ಎನ್ನುವ ವಿಶ್ವಾಸವಿತ್ತು. ಆದರೆ ಇಬ್ಬರನ್ನೂ ಕಡೆಗಣಿಸಲಾಗಿದೆ. ಈ ಸಂಬಂಧ ರಾಜ್ಯ ನಾಯಕರ ಜತೆ ಮಾತುಕತೆ ನಡೆಸಲಾಗಿದ್ದು, ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಲಾಗಿದೆ ಎಂದರು.
ಪ್ರವೀಣ್ ನೆಟ್ಟಾರು ಪತ್ನಿಗೆ ಬಿಜೆಪಿಯವರು ಗುತ್ತಿಗೆ ಆಧಾರದ ಕೆಲಸ ನೀಡಿದ್ದರು. ಗುತ್ತಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಹೋಗಿದೆ. ಬಿಜೆಪಿಯವರಿಗೆ ನಿಜವಾದ ಕಾಳಜಿ ಇದ್ದಿದ್ದರೆ ಖಾಯಂ ಸರಕಾರಿ ಕೆಲಸ ಕೊಡಬೇಕಿತ್ತು. ನೆಟ್ಟಾರು ನಮ್ಮ ಸಮುದಾಯಕ್ಕೆ ಸೇರಿದವರು ಅವರ ಪತ್ನಿಗೆ ಸರಕಾರಿ ಕೆಲಸ ಕೊಡಿಸುವ ಜವಾಬ್ದಾರಿ ನಮ್ಮದು ಎಂದರು.
ಮುಖಂಡರಾದ ಉಮೇಶ್ ದಂಡಕೇರಿ, ಗಣೇಶ್ ಪೂಜಾರಿ, ನೀರಜ್ ಪಾಲ್, ಪದ್ಮನಾಭ ಕೋಟ್ಯಾನ್, ಉಲ್ಲಾಸ್ ಕೋಟ್ಯಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ