ಎದ್ದು ಹೋದ ಡಾಮರು, ಹದಗೆಟ್ಟ ಸರ್ವಿಸ್‌ ರಸ್ತೆ; ಸಂಚಾರ ದುಸ್ತರ

ರಸ್ತೆ ನಿರ್ವಹಣೆ ಮಾಡದೆ ಎರಡು ವರ್ಷ

Team Udayavani, Apr 21, 2022, 10:33 AM IST

maintenance

ಸುರತ್ಕಲ್‌: ಮುಕ್ಕದಿಂದ ಕೂಳೂರು-ನಂತೂರುವರೆಗೆ ಹೆದ್ದಾರಿ ಇಲಾಖೆ ರಸ್ತೆ ನಿರ್ವಹಣೆ ಮಾಡದೆ ಎರಡು ವರ್ಷ ಕಳೆದಿವೆ. ಈ ಹಿಂದೆ ಹಾಕಲಾದ ಡಾಮರು ರಸ್ತೆಯಲ್ಲಿಯೇ ವಾಹನ ಓಡಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಂಡ ಸೃಷ್ಟಿಯಾಗಿ ದ್ವಿಚಕ್ರ ಸವಾರರು ಪ್ರಾಣಾಪಾಯದ ಭೀತಿಯಲ್ಲಿದ್ದಾರೆ.

ಸುರತ್ಕಲ್‌, ಪಣಂಬೂರು ಕೂಳೂರು ಸಹಿತ ಸುತ್ತಮುತ್ತ ಜನರಿಗೆ ನಗರವನ್ನು ಸಂಪರ್ಕಿಸುವ ಹೆದ್ದಾರಿಯೇ ಪ್ರಮುಖ ರಸ್ತೆಯಾಗಿದೆ. ಖಾಸಗಿ, ಸಿಟಿ ಬಸ್‌ಗಳು, ಆಟೋ ರಿಕ್ಷಾ ಹೀಗೆ ಸಾವಿರಾರು ವಾಹನ ಓಡಾಟ ನಡೆಸುವ ಪ್ರಮುಖ ರಸ್ತೆ. ಕೊರೊನಾ ಬಳಿಕ ರಸ್ತೆಯನ್ನು ಫೇವರ್‌ ಫಿನಿಷ್‌ ಮಾಡಲಾಗಿಲ್ಲ. ಮಾತ್ರವಲ್ಲ ನಗರ ವ್ಯಾಪ್ತಿಯಲ್ಲಿ ಸರ್ವಿಸ್‌ ರಸ್ತೆಗಳ ಸ್ಥಿತಿ ನೋಡಿದರೆ ಸ್ಮಾರ್ಟ್‌ ಸಿಟಿಗೆ ಅಪವಾದ ಎಂಬಂತಿದೆ. ಬೈಕಂಪಾಡಿ ಪ್ರದೇಶದಲ್ಲಿ ಸರ್ವಿಸ್‌ ರಸ್ತೆ, ತೋಡುಗಳು ಮಾಯವಾಗಿವೆ. ಲಾರಿಗಳ ನಿಲುಗಡೆಗೆ ಹಾಳಾದ ಸರ್ವಿಸ್‌ ರಸ್ತೆ ಬಳಕೆಯಾಗುತ್ತಿದೆ. ಹೆದ್ದಾರಿಯಲ್ಲಿ ಅಪಘಾತವಾದರೆ ಪರ್ಯಾಯ ಮಾರ್ಗವಾಗಿ ಸರ್ವಿಸ್‌ ರಸ್ತೆಗಳೇ ಪ್ರಯೋಜನಕ್ಕೆ ಬಾರದಂತಿವೆ.

ಆಳವಾದ ಹೊಂಡ ಸೃಷ್ಟಿ

ಮುಖ್ಯವಾಗಿ ಬಂದರು, ಕೈಗಾರಿಕೆ ಪ್ರದೇಶ ದಲ್ಲಾದರೂ ರಸ್ತೆ ನಿರ್ವಹಣೆ ಕಾರ್ಯ ನಡೆಸದೆ ರಸ್ತೆ ಮತ್ತಷ್ಟು ಹದಗೆಡಲು ಕಾರಣವಾಗಿದೆ. ರಸ್ತೆ ಬದಿಯ ಆಳವಾದ ಹೊಂಡಗಳಿಂದ ದ್ವಿಚಕ್ರ ಸವಾರರು ಪ್ರಾಣಭೀತಿ ಎದುರಿಸುತ್ತಿದ್ದಾರೆ. ರಸ್ತೆ ಬದಿ ಇರುವ ಪೆಟ್ರೋಲ್‌ ಬಂಕ್‌ನಿಂದ ತಿರುವು ಪಡೆಯುವ ಲಾರಿಗಳಿಂದ ರಸ್ತೆಗಳ ಇಕ್ಕೆಲಗಳಲ್ಲಿ ಹೊಂಡಮಯವಾಗಿ ವಾಹನ ಇಳಿಸಲು ಸಾಧ್ಯವಾಗದ ಸ್ಥಿತಿಯಿದೆ.

ನಗರ ಪ್ರದೇಶದೊಳಗೆ ಹಾದು ಹೋಗುವ ಹೆದ್ದಾರಿಯನ್ನು ಸ್ಥಳೀಯ ಆಡಳಿತ ನಿರ್ವಹಣೆ ಮಾಡಬೇಕು, ಬಂದರು ವ್ಯಾಪ್ತಿಯಲ್ಲಿ ಬಂದರು ಇಲಾಖೆ ಮಾಡಬೇಕು ಎಂಬುದು ಹೆದ್ದಾರಿ ಇಲಾಖೆಯ ಹೇಳಿಕೆ. ಆದರೆ ಇದರ ಬಗ್ಗೆ ಸ್ಥಳೀಯ ಅಧಿಕಾರಿಗಳನ್ನ ಕೇಳಿದರೆ ಸ್ಪಷ್ಟತೆಯಿಲ್ಲ. ಸೂಕ್ತ ನಿರ್ವಹಣೆ ಕೊರತೆ, ದುರಸ್ತಿ ಕಾಮಗಾರಿ ವೈಫಲ್ಯಗಳಿಂದಾಗಿ ರಾ. ಹೆದ್ದಾರಿಗಳ ಅವ್ಯವಸ್ಥೆಗೆ ಜನ ಪ್ರಾಣ ಕಳೆದುಕೊಳ್ಳುವಂತಾಗಿದೆ.

ಸುಗಮ ಸಂಚಾರಕ್ಕೆ ಮಾರಕ

ಡಾಮರು, ರಸ್ತೆ ದೀಪ, ರಸ್ತೆಗಳ ತಡೆಗೋಡೆ, ಮೇಲ್ಸೇತುವೆ, ಕೆಳಸೇತುವೆ, ರಸ್ತೆ ಸೂಚಕಗಳು, ಪಾದಚಾರಿ ಮೇಲ್ಸೇತುವೆಗಳ ನಿರ್ವಹಣೆಯಲ್ಲಿ ಪ್ರಾಧಿಕಾರ ಹಿಂದೆ ಬಿದ್ದಿದೆ. ರಸ್ತೆಗಳ ತಡೆ ಗೋಡೆಗಳಲ್ಲಿ ಗಿಡಗಳು ಬೆಳೆದುಕೊಂಡಿವೆ. ರಸ್ತೆಗಳ ಇಕ್ಕೆಲಗಳಲ್ಲಿ ಎದುರಿನಿಂದ ಬರುವ ವಾಹನಗಳು ಕಾಣದಷ್ಟು ಹುಲ್ಲು ಬೆಳೆದಿದ್ದು, ಕಟಾವು ಕಾರ್ಯ ನಡೆದಿಲ್ಲ. ಬಿಸಿಲ ಬೇಗೆಗೆ ಡಾಮರು ಹಂಪ್ಸ್‌ಗಳಂತೆ ಅಲಲ್ಲಿ ಮೇಲೆದ್ದು ನಿಂತಿದ್ದು, ಸುಗಮ ಸಂಚಾರಕ್ಕೆ ಮಾರಕವಾಗಿದೆ.

ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು

ರಾಷ್ಟ್ರೀಯ ಹೆದ್ದಾರಿ 66ರ ಬಂದರು ಸುತ್ತಮುತ್ತ ತೇಪೆ ಕಾರ್ಯವನ್ನು ನವಮಂಗಳೂರು ಬಂದರು ನೋಡಿಕೊಳ್ಳಬೇಕಿದೆ. ಈ ಭಾಗವನ್ನು ಪೋರ್ಟ್‌ ರೋಡ್‌ ಸಂಪರ್ಕ ಎಂದು ಗುರುತಿಸಲ್ಪಟ್ಟಿದೆ. ಈ ಬಗ್ಗೆ ಬಂದರು ಇಲಾಖೆಯ ಅಧಿಕಾರಿಗಳಲ್ಲಿ ಮಾತುಕತೆ ನಡೆಸಲಾಗುವುದು. -ಡಾ| ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿಗಳು, ದ.ಕ.

ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.