Passengers: ನವರಾತ್ರಿಯ ಸಂದರ್ಭ ಪ್ರಯಾಣಿಕರ ಸಂಖ್ಯೆ ವೃದ್ಧಿ

ಅರಮನೆ ನಗರಿಯಿಂದ ಮುರ್ಡೇಶ್ವರಕ್ಕೆ ರೈಲು

Team Udayavani, Oct 23, 2023, 11:22 AM IST

5-murdeshwara

ಸುರತ್ಕಲ್‌: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ಕ್ಷೇತ್ರಗಳಲ್ಲಿ ಒಂದಾದ ಮುರ್ಡೇಶ್ವರಕ್ಕೆ ಅರಮನೆ ನಗರಿ ಮೈಸೂರಿನಿಂದ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಮಂಗಳೂರು ರೈಲನ್ನು ಮುರ್ಡೇಶ್ವರದವರೆಗೆ ವಿಸ್ತರಿಸಿದ್ದು ಈ ಭಾಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಂತಸ ತಂದಿದೆ.

ಜತೆಗೆ ಮಂಗಳೂರು ಸುರತ್ಕಲ್‌ನಿಂದ ತೆರಳುವ ಮಂದಿಗೆ ಉಡುಪಿ ಪ್ರಯಾಣಕ್ಕೆ ಹಾಗೂ ಪ್ರವಾಸಿ ಕ್ಷೇತ್ರದ ವೀಕ್ಷಣೆಗೆ ರೈಲಿನ ಸಮಯವೂ ಈಗಿನ ವೇಳಾಪಟ್ಟಿ ಸುಧಾರಣೆ ಆದಲ್ಲಿ ಉಪಯುಕ್ತ ಪ್ರವಾಸಿ ರೈಲು ಎನಿಸಿಕೊಳ್ಳಲಿದೆ.

ಇದೀಗ ನವರಾತ್ರಿಯ ಸಂದರ್ಭ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ.

ಬೆಂಗಳೂರಿನಿಂದ ರಾತ್ರಿ 8.15 ಹೊರಟು ಮೈಸೂರಿಗೆ 11.20ಕ್ಕೆ ಮುಟ್ಟಿದರೆ ಇತ್ತ ಮಂಗಳೂರಿಗೆ ಮುಂಜಾನೆ 8.30ಕ್ಕೆ, ಉಡುಪಿಗೆ 10.40ಕ್ಕೆ ತಲುಪುತ್ತದೆ.

ವಿವಿಧ ಪ್ರವಾಸಿ ಕ್ಷೇತ್ರಗಳಾದ ಬಾರ್ಕೂರು, ಕೊಲ್ಲೂರು, ಭಟ್ಕಳ ಹಾಗೂ ಮುರ್ಡೇಶ್ವರ ಹೀಗೆ ವಿವಿಧ ಕ್ಷೇತ್ರವನ್ನು ಸಂದರ್ಶಿಸಲು ಈ ರೈಲು ಅನುಕೂಲ ಕಲ್ಪಿಸುತ್ತದೆ. ದಿನದ ಮಟ್ಟಿಗೆ ಪಿಕ್‌ನಿಕ್‌ಗೆ ತೆರಳುವ ತಂಡ ಇಲ್ಲವೇ ಕುಟುಂಬ ಸಮೇತರಾಗಿ ಹೋಗುವ ಮಂದಿಗೆ ಅತೀ ಕಡಿಮೆ ವೆಚ್ಚ ದಲ್ಲಿ ಪ್ರವಾಸಿ ಕ್ಷೇತ್ರ ತಲುಪಲು ಸಾಧ್ಯವಾಗುತ್ತದೆ.

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಿ ರುವ ಮುಡೇìಶ್ವರಕ್ಕೂ ಮೈಸೂರಿಗೂ ರೈಲು ಮೂಲಕ ಸಂಪರ್ಕವು ಆರಾಮದಾಯಕ ಹಾಗೂ ಅವಸರವಿಲ್ಲದ ಪ್ರಯಾಣವನ್ನು ಬಯಸುವವರಿಗೆ ಈ ರೈಲು ಅನುಕೂಲ. ಆದರೆ ಮುಡೇìಶ್ವರದಿಂದ ಮಧ್ಯಾಹ್ನ ಹೊರಟರೆ, ಮೈಸೂರಿಗೆ ನಸುಕಿನ ವೇಳೆಗಿಂತ ಮೊದಲೇ ತಲುಪುವ ಕಾರಣ ಸಮಯದ ಹೊಂದಾಣಿ ಕೆಯಲ್ಲಿ ಬದಲಾವಣೆ ಮಾಡ ಬಹುದು ಎಂಬ ಅಭಿ ಪ್ರಾಯವೂ ಕೇಳಿ ಬಂದಿದೆ.

ರೈಲಿನ ವೇಳಾಪಟ್ಟಿ ಹೀಗಿದೆ

ಮೈಸೂರು ಮೂಲಕ ಬೆಂಗಳೂರು ಮಂಗಳೂರು ನಡುವೆ ಸಂಚರಿಸುವ ಎಕ್ಸ್‌ ಪ್ರಸ್‌ ರೈಲು 16586/585 ಪ್ರತಿದಿನ ಮುಡೇìಶ್ವರವರೆಗೆ ಸಂಚರಿಸುವ ಹಿನ್ನೆಲೆಯಲ್ಲಿ ವೇಳಾಪಟ್ಟಿಯನ್ನು ಈ ರೀತಿ ಮಾಡಲಾಗಿದೆ. ನಂ.16585 ರೈಲು ಬೆಂಗಳೂರಿನ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ (ಎಸ್‌. ಎಂ.ವಿ.ಟಿ.ಬಿ.)ನಿಂದ ರಾತ್ರಿ 8.15ಕ್ಕೆ ಹೊರಡುತ್ತದೆ. ರಾತ್ರಿ 11.30ಕ್ಕೆ ಮೈಸೂರು ತಲುಪುತ್ತದೆ. ಬೆಳಗ್ಗೆ 8.30ಕ್ಕೆ ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ ತಲುಪುತ್ತದೆ. 9.40ಕ್ಕೆ ಸೆಂಟ್ರಲ್‌ ನಿಂದ ಹೊರಡುತ್ತದೆ. ಮಧ್ಯಾಹ್ನ 12.55ಕ್ಕೆ ಕ್ಕೆ ಮುರ್ಡೇಶ್ವರ ತಲುಪುತ್ತದೆ.

ನಂ.16586 ರೈಲು ಮುಡೇìಶ್ವರ ದಿಂದ ಮಧ್ಯಾಹ್ನ 2.10ಕ್ಕೆ ಹೊರಡುತ್ತದೆ. ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ ಸಂಜೆ 6.25ಕ್ಕೆ ಆಗಮಿಸುತ್ತದೆ. ಮೈಸೂರಿಗೆ ಮುಂಜಾನೆ 3.25ಕ್ಕೆ ತಲುಪಿದರೆ ಬೆಂಗಳೂರಿಗೆ ಬೆಳಗ್ಗೆ 7.15ಕ್ಕೆ ತಲುಪುತ್ತದೆ.

ಬೆಂಗಳೂರು ಮೈಸೂರು ಮುರ್ಡೇಶ್ವರ ನಡುವೆ ರೈಲು ಸಂಪರ್ಕ ಆಗಿರುವುದು ಕರಾವಳಿ ಕ್ಷೇತ್ರ ದರ್ಶನಕ್ಕೆ ಉಪಯುಕ್ತವಾಗಿದೆ. ಮುಂದಿನ ದಿನದಲ್ಲಿ ಈ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಳ ಆಗುವುದರಲ್ಲಿ ಸಂಶಯವಿಲ್ಲ. – ಸುಧಾ ಕೃಷ್ಣಮೂರ್ತಿ, ಪಿಆರ್‌ಒ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.