ಅಡಿಕೆ ಅಡಮಾನ ಸಾಲ: ಡಾ| ರಾಜೇಂದ್ರ ಕುಮಾರ್
Team Udayavani, Apr 5, 2020, 12:53 PM IST
ಮಂಗಳೂರು: ಕೋವಿಡ್ 19 ಸೋಂಕು ಸಾಂಕ್ರಾಮಿಕವಾಗಿ ಹರಡುತ್ತಿರುವುದರಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ರೈತರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಇದನ್ನು ಮನಗಂಡು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರೈತರಿಗೆ ತುರ್ತಾಗಿ ಅಡಿಕೆ ಅಡಮಾನ ಸಾಲವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲು ಮುಂದಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಅವಿಭಜಿತ ದ. ಕ. ಜಿಲ್ಲೆಯಲ್ಲಿ ಅಡಿಕೆ ಮಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದಿರುವುದರಿಂದ ಅಡಿಕೆ ಧಾರಣೆಯಲ್ಲೂ ಕುಸಿತ ಕಂಡಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರಿಗೆ ಆರ್ಥಿಕ ತುರ್ತು ಸಾಲದ ನೆರವನ್ನು ನೀಡಲು ಎಸ್ಸಿಡಿಸಿಸಿ ಬ್ಯಾಂಕ್ ಮುಂದಾಗಿದೆ ಎಂದು ಹೇಳಿದ್ದಾರೆ.
ರೈತರೇ ಬ್ಯಾಂಕಿನ ಆಸ್ತಿ
ಸದ್ಯ ಕೋವಿಡ್ 19 ಮಹಾಮಾರಿಯಿಂದ ರೈತರ ಪರಿಸ್ಥಿತಿ ಬಿಗಡಾಯಿಸಿದೆ. ರೈತರು ಬೆಳೆದಿರುವ ಕೃಷಿ ಉತ್ಪನ್ನಗಳು ಸೂಕ್ತ ಮಾರುಕಟ್ಟೆ ಇಲ್ಲದೆ ಹಾಳಾಗುತ್ತಿವೆ. ರೈತರಿಗೆ ಅಡಿಕೆಯೇ ಜೀವನಾಧಾರವಾಗಿದೆ. ರೈತರೇ ಬ್ಯಾಂಕಿನ ಆಸ್ತಿಯಾಗಿದ್ದು ಅವರ ನೆರವಿಗೆ ಧಾವಿಸುವುದು ನಮ್ಮ ಕರ್ತವ್ಯ ಎಂದು ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್