ಗೋ ಹತ್ಯೆ ನಿಷೇಧ ಕಾಯ್ದೆ; ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ: ಪ್ರಭು ಚವ್ಹಾಣ್
Team Udayavani, Jan 19, 2021, 8:50 PM IST
ಮಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಈ ವಿಷಯದಲ್ಲಿ ಬೇಜವಬ್ದಾರಿಯನ್ನು ತೋರಬಾರದು ಎಂದು ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.
ಇಂದು ಮಂಗಳೂರಿಗೆ ಆಗಮಿಸಿದ ಪ್ರಭು ಚವ್ಹಾಣ್ , ಕಾರವಾರ ಮಂಗಳೂರು ಹಾಗೂ ಉಡುಪಿಯಲ್ಲಿ ದಿನದಿಂದ ದಿನಕ್ಕೆ ಗೋಹತ್ಯೆ ಗೋ ಕಳ್ಳತನ ನಡೆಯುತ್ತಿದೆ. ಇನ್ನು ಈ ರೀತಿ ನಡೆಯದಂತೆ ನೋಡಿಕೊಳ್ಳಬೇಕು ಎಂದು ಎಸ್.ಪಿ ಮತ್ತು ಡಿ.ಸಿ.ಪಿ ಗೆ ಖಡಕ್ ಆದೇಶ ನೀಡಿದರು.
ಜಿಲ್ಲೆಯಲ್ಲಿ ಅತೀ ಹೆಚ್ಚು ಗೋ ಶಾಲೆ ನಿರ್ಮಾಣ ಆಗಬೇಕು. ಕೆಲವೊಂದು ಪ್ರದೇಶಗಳಿಗೆ ಗೋ ವೈದ್ಯರುಗಳು ಹೋಗುವುದಿಲ್ಲ ಎಂದು ದೂರುಗಳು ಬಂದಿದೆ. ಇಂತಹ ದೂರುಗಳು ಇನ್ನು ಮುಂದೆ ಬರಬಾರದು.
ಗೋಕಳ್ಳತನ ಆಗುತ್ತಿದೆ ಎಂದು ಯಾರು ಮಾಹಿತಿ ಕೊಡುತ್ತರೋ ಅವರನ್ನೇ ಬಂಧಿಸುತ್ತಿದ್ದೀರಿ. ಈ ರೀತಿ ನಡೆಯಬಾರದು ಸರಿಯಾಗಿ ಕಾರ್ಯನಿರ್ವಹಿಸಬೇಕು. ಹಕ್ಕಿಜ್ವರ ಏನಾದರೂ ಮತ್ತೆ ಕಾಣಿಸಿಕೊಂಡರೆ ಸರಿಯಾಗಿ ಅಲರ್ಟ್ ಆಗುವಹಾಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಕಾಂಗ್ರೆಸ್ ಈ ಕಾಯ್ದೆಯನ್ನು ವಿರೋಧ ಮಾಡುತ್ತಿದೆ. ಹೇಗೆ ಬೇಕಾದರೂ ಠೀಕೆ ಮಾಡಿ ಪರವಾಗಿಲ್ಲ. ಗೋ ಮಾತೆಗೆ ಮಹತ್ವವಾದ ಸ್ಥಾನವಿದೆ. ಈ ಹಿಂದೆ ಗೋರಕ್ಷಣೆಯಲ್ಲಿ ಕೇಸು ದಾಖಲಿಸಿಕೊಂಡವರ ಕೇಸನ್ನು ಹಿಂದೆಗೆಯಲು ಇದರ ಬಗ್ಗೆ ಗೃಹಮಂತ್ರಿವರ ಜೊತೆ ಚರ್ಚೆ ಮಾಡುತ್ತೇನೆ. ತಾಲೂಕಿಗೆ ಒಂದು ಸರ್ಕಾರಿ ಗೋ ಶಾಲೆಯನ್ನು ನಿರ್ಮಿಸಲು ಯೋಚನೆಯಾಗಿದೆ ಎಂದು ಈ ವೇಳೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…