ಬಲ್ಮಠ ರಸ್ತೆಯಲ್ಲಿ ಎಣ್ಣೆ,  ದ್ವಿಚಕ್ರ ವಾಹನಗಳು ಸ್ಕಿಡ್‌, ಪ್ರತಿಭಟನೆ


Team Udayavani, Sep 19, 2017, 11:52 AM IST

19-MNG-3.jpg

ಬಲ್ಮಠ :  ಬಲ್ಮಠ ಬಸ್‌ ತಂಗುದಾಣ ಮತ್ತು ಜ್ಯೋತಿ ಜಂಕ್ಷನ್‌ ನಡುವಿನ  ಕಾಂಕ್ರೀಟ್‌ ರಸ್ತೆಯಲ್ಲಿ  ಹರಿದ ಎಣ್ಣೆಯಿಂದಾಗಿ ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಬೈಕ್‌ ಚಲಾಯಿಸಿಕೊಂಡು ಬಂದ ಕೆಲವರು ಏಕಾ ಏಕಿ ಸ್ಕಿಡ್‌ ಆಗಿ ಬಿದ್ದಿದ್ದು,  ಆಕ್ರೋಶಿತರಾದ ಕೆಲವರು ಸ್ಥಳದಲ್ಲೇ ಕುಳಿತು ಪ್ರತಿಭಟಿಸಿದ ಪರಿಣಾಮ ಕೆಲ ಹೊತ್ತು ರಸ್ತೆ ತಡೆ  ಉಂಟಾಗಿ ಸಂಚಾರ ವ್ಯತ್ಯಯವಾಯಿತು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ  ಮೇಯರ್‌ ಕವಿತಾ ಸನಿಲ್‌ ಅವರೂ ಪ್ರತಿಭಟನಕಾರರೊಂದಿಗೆ  ಮಾತುಕತೆ ನಡೆಸಿದರು.

ರಸ್ತೆಯಲ್ಲಿ ಹರಿದು ಬಂದದ್ದು ಬಲ್ಮಠ ರಸ್ತೆ ಪರಿಸರದ ಹೊಟೇಲ್‌ಗ‌ಳಲ್ಲಿ ತಿಂಡಿ ಮತ್ತು ಇತರ ಪದಾರ್ಥಗಳನ್ನು ಕಾಯಿಸಿ ಉಳಿಕೆಯಾದ ಎಣ್ಣೆಯಾಗಿತ್ತು.  ಹೊಟೇಲ್ ಅದನ್ನು ನೇರವಾಗಿ ಒಳ ಚರಂಡಿಗೆ ಚೆಲ್ಲಿದ್ದು, ಅದು ನೀರಿನ ಮೇಲೆ ತೇಲಿ ಕೊಂಡು ರಸ್ತೆಯ ಮೇಲೆ ಬಿದ್ದಿರುವುದು ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣವಾಯಿತು. 

ಮಳೆ ಬಂದಿರುವ ಕಾರಣ  ಒಳ ಚರಂಡಿಯಲ್ಲಿ ನೀರು ತುಂಬಿದ್ದು, ಹೊಟೇಲ್‌ನವರು ಚರಂಡಿಗೆ ಬಿಟ್ಟ  ಎಣ್ಣೆ ಈ ನೀರಿನ ಮೇಲ್ಭಾಗದಲ್ಲಿ ತೇಲಿಕೊಂಡು  ರಸ್ತೆಗೆ ತಲುಪಿದೆ. ಎಣ್ಣೆ  ಪಸರಿಸಿದ ಕಾಂಕ್ರೀಟ್‌ ರಸ್ತೆಯ ಮೇಲೆ ವಾಹನಗಳು ಅದರಲ್ಲೂ  ಮುಖ್ಯವಾಗಿ ದ್ವಿಚಕ್ರ ವಾಹನಗಳು ಚಲಿಸಿದಾಗ ಟೈರ್‌ಗಳು ಸ್ಕಿಡ್‌ ಆಗಿ ಸವಾರರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. 

ಚರಂಡಿಯಿಂದ ಆಯಿಲ್‌ ಹರಿದು ಬರುತ್ತಿದ್ದು, ಇದಕ್ಕೆ ಕಾರಣವೇನೆಂಬುದು ಗೊತ್ತಾಗಬೇಕು ಹಾಗೂ ಅದನ್ನು ತಡೆಯಲು ಕ್ರಮ ಆಗಬೇಕು ಎಂದು ಪಟ್ಟು ಹಿಡಿದು ಈ ಬೈಕ್‌ ಸವಾರರು ಅಲ್ಲಿಯೇ ಪ್ರತಿಭಟಿಸಿದರು. ಅವರಿಗೆ ಸ್ಥಳೀಯರು ಸಾಥ್‌ ನೀಡಿದರು. ಈ ಪ್ರತಿಭಟನೆಯಿಂದಾಗಿ ಸುಮಾರು ಎರಡು ಗಂಟೆಗಳ ಕಾಲ ಬಲ್ಮಠ ಪ್ರದೇಶದಲ್ಲಿ  ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಆಗಮಿಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು. ಟ್ರಾಫಿಕ್‌ ಪೂರ್ವ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಗವಾರ್‌ ಮತ್ತು ಸಿಬಂದಿ ಹೊಗೆಯನ್ನು ತರಿಸಿ ತಾವೇ ಸ್ವತಃ ಎಣ್ಣೆ ಬಿದ್ದ ರಸ್ತೆಯ ಭಾಗಕ್ಕೆ ಹಾಕಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಬಳಿಕ ಅಗ್ನಿ ಶಾಮಕ ದಳದವರು ಆಗಮಿಸಿ ಮರಳು ಮಿಶ್ರಿತ ನೀರನ್ನು ಸಿಂಪಡಿಸಿ ರಸ್ತೆಯನ್ನು ಸ್ವತ್ಛಗೊಳಿಸಿದರು.

ವಿಷಯ ತಿಳಿದು ಮೇಯರ್‌ ಕವಿತಾ ಸನಿಲ್‌ ಅವರು ಸಚೇತಕ ಶಶಿಧರ ಹೆಗ್ಡೆ, ಅಧಿಕಾರಿಗಳಾದ ಮರಳಹಳ್ಳಿ, ವಿಶಾಲ್‌ನಾಥ್‌, ರಘುಪಾಲ್‌ ಅವರ ಜತೆ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. 

ಹೊಟೇಲ್‌ಗ‌ಳಿಗೆ ನೋಟಿಸ್‌
ಕಾಯಿಸಿದ ಎಣ್ಣೆಯನ್ನು ಚರಂಡಿಗೆ ಬಿಟ್ಟು ಅವಾಂತರಕ್ಕೆ ಕಾರಣವಾದ ಬಲ್ಮಠ ರಸ್ತೆ ಪರಿಸರದ ಹೊಟೇಲ್‌ಗ‌ಳಿಗೆ ನೋಟಿಸ್‌ ನೀಡಲಾಗುವುದು ಎಂದು ಮೇಯರ್‌ ಕವಿತಾ ಸನಿಲ್‌ ತಿಳಿಸಿದರು.

ಚರಂಡಿಗೆ ಎಣ್ಣೆ ಬಿಟ್ಟರೆ ಕ್ರಮ 
ನಗರದ ಯಾವುದೇ ಹೊಟೇಲ್‌ನವರು ಇನ್ನು ಮುಂದೆ ಕಾಯಿಸಿದ ಎಣ್ಣೆ ಅಥವಾ ಜಿಡ್ಡು ಪದಾರ್ಥವನ್ನು ಚರಂಡಿ/ ಒಳ ಚರಂಡಿಗೆ ಬಿಡ ಬಾರದು. ಎಣ್ಣೆಯನ್ನು ಚರಂಡಿಗೆ ಬಿಡುವುದರಿಂದ ಅದು ನೀರಿನ ಮೇಲೆ ತೇಲಿ ರಸ್ತೆ ಮೇಲೆ ಹರಿದು ವಾಹನ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಒಂದೊಮ್ಮೆ  ಯಾರಾದರೂ ಚರಂಡಿಗೆ ಎಣ್ಣೆ ಬಿಡುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್‌ ಕವಿತಾ ಸನಿಲ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.