ಲಕ್ಷದ್ವೀಪ ಸರಕು ಸಾಗಾಟ: ಹೂಳು ತೊಡಕು!


Team Udayavani, Sep 22, 2022, 1:24 PM IST

16

ಬಂದರು: ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪಕ್ಕೆ ಮಂಗಳೂರಿನ ಹಳೆಬಂದರಿನಿಂದ ಸರಕು ಸಾಗಾಟ ಮಾಡಲು ಅವಕಾಶ ಲಭಿಸಿದರೂ ಅಳಿವೆ ಬಾಗಿಲಿನಲ್ಲಿ (ನೇತ್ರಾವತಿ ಹಾಗೂ ಫಲ್ಗುಣಿ ನದಿ ಸಂಗಮಿಸಿ ಸಮುದ್ರ ಸೇರುವ ಸ್ಥಳ) ಹೂಳು ತುಂಬಿರುವ ಕಾರಣದಿಂದ ನೌಕೆ ಸಂಚಾರ ಇನ್ನೂ ಆರಂಭವಾಗಿಲ್ಲ.

ಲಕ್ಷದ್ವೀಪಕ್ಕೆ ಸರಕು ಸಾಗಾಟ ಮಾಡುವುದರಿಂದ ಕರಾವಳಿಯ ಸ್ಥಳೀಯ ವ್ಯಾಪಾರ ವಹಿವಾಟಿನಲ್ಲಿ ಚೇತರಿಕೆ ಕಂಡುಬರುತ್ತದೆ. ಜತೆಗೆ ಸ್ಥಳೀಯ ವ್ಯಾಪಾರಕ್ಕೂ ಹೆಚ್ಚು ಅವಕಾಶ ಲಭಿಸಿದಂತಾಗುತ್ತದೆ.

ಹಳೆಬಂದರಿನಿಂದ ಲಕ್ಷದ್ವೀಪಕ್ಕೆ ಪ್ರತೀ ವರ್ಷ ಸೆ. 15ರಿಂದ ಮೇ 15ರ ವರೆಗೆ ಮಾತ್ರ (ಮೇ 16ರಿಂದ ಸೆ. 14ರ ವರೆಗೆ ನಿಷೇಧ) ಸರಕು ಸಾಗಾಟಕ್ಕೆ ನಿಯಮಾವಳಿ ಪ್ರಕಾರ ಅವಕಾಶವಿದೆ. ಅಕ್ಕಿ, ಆಹಾರ ವಸ್ತುಗಳು, ತರಕಾರಿ, ಕಲ್ಲು, ಮಣ್ಣು, ಜಲ್ಲಿ, ಸಿಮೆಂಟ್‌, ಇಟ್ಟಿಗೆ, ಬ್ಲಾಕ್‌, ಸ್ಟೀಲ್‌ ಸಾಗಿಸಲಾಗುತ್ತದೆ. ಆದರೆ ಸೆ. 15ರಿಂದ ಸಾಗಾಟ ಮಾಡಲು ಅವಕಾಶ ಇದ್ದರೂ ಅಳಿವೆಯಲ್ಲಿ ಹೂಳು ತುಂಬಿ ಸಾಗಾಟಕ್ಕೆ ಅವಕಾಶ ದೊರೆಯಲಿಲ್ಲ.

1 ನೌಕೆಯು ಸಾಮಾನ್ಯವಾಗಿ 500 ಟನ್‌ ಸಾಮರ್ಥ್ಯದ ಸರಕು ಸಾಗಾಟ ಮಾಡಲು ಅವಕಾಶವಿದೆ. ಆದರೆ ಅಳಿವೆ ಬಾಗಿಲಿನಲ್ಲಿ ಹೂಳು ತುಂಬಿದ ಕಾರಣದಿಂದ 300 ಟನ್‌ನಷ್ಟು ಮಾತ್ರ ಸಾಗಾಟ ಮಾಡಬಹುದಾಗಿದೆ. ಇದು ಸಾಗಾಟಗಾರರಿಗೆ ನಷ್ಟವಾಗುತ್ತದೆ. ಹೀಗಾಗಿ ಹೂಳು ತೆಗೆಯದೆ ಸರಕು ಸಾಗಾಟ ಆರಂಭವಾಗದು.

ಅಳಿವೆ ಬಾಗಿಲಿನಲ್ಲಿ ಸರಕು ನೌಕೆ ಸಾಗಾಟಕ್ಕೆ 4 ಮೀ. ಆಳದವರೆಗೆ ಹೂಳು ತೆಗೆದಿರಬೇಕು. ಆದರೆ ಇದೀಗ 2.30 ಮೀ. ವರೆಗೆ ಹೂಳು ಇದೆ. ಮೀನುಗಾರಿಕೆ ಬೋಟ್‌ಗಳು ಇಲ್ಲಿ ಆತಂಕದಿಂದಲೇ ಸಂಚರಿಸಬಹುದಾಗಿದೆ. ಆದರೆ ಸರಕು ಸಾಗಾಟ ನೌಕೆಗೆ ಕಷ್ಟ.

1 ಕೋ.ರೂ ವೆಚ್ಚದಲ್ಲಿ ಡ್ರೆಜ್ಜಿಂಗ್‌

ಬಂದರು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರವೀಣ್‌ ಅವರು “ಸುದಿನ’ ಜತೆಗೆ ಮಾತನಾಡಿ, “ಅಳಿವೆ ಬಾಗಿಲಿನಲ್ಲಿ ತಾತ್ಕಾಲಿಕವಾಗಿ 1 ಕೋ.ರೂ ವೆಚ್ಚದಲ್ಲಿ ಹೂಳೆತ್ತಲು ಅನುಮತಿ ದೊರೆತಿದೆ. ಕಾಮಗಾರಿ ನಡೆಸಲು ಅಳಿವೆಯಲ್ಲಿ ಅಲೆಗಳ ತೀವ್ರತೆ ತೊಡಕಾಗಿದೆ. ಜತೆಗೆ, ಸರ್ವೇ ಬೋಟ್‌ ತೆರಳಲೂ ಕಷ್ಟವಿದೆ. ಹೀಗಾಗಿ ಅಲೆಗಳ ತೀವ್ರತೆ ಕಡಿಮೆಯಾದ ಕೂಡಲೇ ಇಲ್ಲಿ ಡ್ರೆಜ್ಜಿಂಗ್‌ ಮಾಡಲಾಗುತ್ತದೆ. ಈ ಬಗ್ಗೆ ಮೀನುಗಾರಿಕೆ ಇಲಾಖೆಯವರ ಜತೆಗೆ ಮಾತುಕತೆ ಕೂಡ ನಡೆಸಲಾಗಿದೆ’ ಎಂದರು.

29 ಕೋ.ರೂ. ವೆಚ್ಚದಲ್ಲಿ ಡ್ರೆಜ್ಜಿಂಗ್‌ ಕೈಗೊಳ್ಳಲು ಈ ಹಿಂದೆ ಕೇಂದ್ರ ಸರಕಾರ ನಿರ್ಧಾರ ಮಾಡಿತ್ತು. ತಾತ್ಕಾಲಿಕವಾಗಿ ಡ್ರೆಜ್ಜಿಂಗ್‌ ಮಾಡುವ ಅನಿವಾರ್ಯ ಇಲ್ಲ ಎಂದೇ ಭಾವಿಸಲಾಗಿತ್ತು. ಆದರೆ ಈ ಕಾಮಗಾರಿ ಆರಂಭಕ್ಕೆ ಇನ್ನೂ ಹಲವು ಸಮಯ ಅಗತ್ಯವಿರುವ ಕಾರಣದಿಂದ ಸದ್ಯ 1 ಕೋ.ರೂ ವೆಚ್ಚದಲ್ಲಿ ಡ್ರೆಜ್ಜಿಂಗ್‌ ಮಾಡಬೇಕಾದ ಅನಿವಾರ್ಯವಿದೆ. ಹಾಗಾಗಿ ಶಾಸಕ ವೇದವ್ಯಾಸ್‌ ಕಾಮತ್‌ ಅವರ ಕೋರಿಕೆಯ ಮೇರೆಗೆ ಅನುಮತಿ ದೊರಕಿದೆ.

ಲಕ್ಷದ್ವೀಪ ಸರಕು ರಫ್ತುದಾರರಾದ ಹರೀಶ್‌ ಕಾವ ಅವರು “ಸುದಿನ’ ಜತೆಗೆ ಮಾತನಾಡಿ, “ಹೂಳೆತ್ತುವ ಕಾಮಗಾರಿಯನ್ನು ಶೀಘ್ರ ಮುಗಿಸಿ ಸರಕು ಸಾಗಾಟಕ್ಕೆ ಅವಕಾಶ ಮಾಡಿ ಕೊಡಬೇಕಿದೆ. ಜತೆಗೆ ಮಂಗಳೂರಿನ ಬಂದರು ಇಲಾಖೆಯ ಹಿಂಭಾಗ ದಲ್ಲಿರುವ ಹೊಸ ಜೆಟ್ಟಿಯಲ್ಲಿ ಸರಕು ಸಂಗ್ರಹ ಹಾಗೂ ಸಾಗಾಟಕ್ಕೆ ಅವಕಾಶ ಮಾಡಿಕೊಡುವ ವಾಣಿಜ್ಯ ಬಳಕೆಗೆ ನೀಡುವ ಮಹತ್ವದ ನಿರ್ಧಾರ ಕೈಗೊಂಡರೆ ಉತ್ತಮ’ ಎನ್ನುತ್ತಾರೆ.

29 ಕೋ.ರೂ ಡ್ರೆಜ್ಜಿಂಗ್‌ಗೆ 6ನೇ ಬಾರಿ ಟೆಂಡರ್‌!

ಮೀನುಗಾರರಿಗೆ ಹಾಗೂ ವಾಣಿಜ್ಯ ವ್ಯವಹಾರದ ಹಡಗುಗಳಿಗೆ ನಿತ್ಯ ಸಮಸ್ಯೆ ಆಗುತ್ತಿರುವ ಮಂಗಳೂರಿನ ಅಳಿವೆಬಾಗಿಲು ವ್ಯಾಪ್ತಿಯಲ್ಲಿ ತುಂಬಿರುವ ಹೂಳನ್ನು ಪೂರ್ಣ ಪ್ರಮಾಣದಲ್ಲಿ ಮೇಲಕ್ಕೆತ್ತುವ (ಡ್ರೆಜ್ಜಿಂಗ್‌) 29 ಕೋ.ರೂ.ಗಳ ಮಹತ್ವದ ಯೋಜನೆ ಇನ್ನೂ ಟೆಂಡರ್‌ ಹಂತದಲ್ಲಿಯೇ ಬಾಕಿಯಾಗಿದೆ. 5 ಬಾರಿ ಟೆಂಡರ್‌ ಆಗಿದ್ದರೂ ಕಾನೂನಾತ್ಮಕ, ತಾಂತ್ರಿಕ ಕಾರಣದಿಂದ ಯಾರಿಗೂ ಟೆಂಡರ್‌ ನೀಡಲು ಸಾಧ್ಯವಾಗಿಲ್ಲ. ಇದೀಗ 6ನೇ ಬಾರಿ ಟೆಂಡರ್‌ ಕರೆಯಲಾಗಿದೆ. ಈಗಲೂ ಕೆಲವು ತಾಂತ್ರಿಕ ಸಮಸ್ಯೆ ಎದುರಾಗಿದೆ. ಹೀಗಾಗಿ, ಸಿಎಂ ಅಧ್ಯಕ್ಷತೆಯ ಮೆರಿಟೈಮ್‌ ಬೋರ್ಡ್‌ನಲ್ಲಿ ವಿಶೇಷ ಅನುಮತಿ ಪಡೆದು ಟೆಂಡರ್‌ ಒಪ್ಪಿಗೆ ಪಡೆಯಲು ಈ ಬಾರಿ ಅವಕಾಶವಿದೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ, 7ನೇ ಬಾರಿಗೆ ಟೆಂಡರ್‌ ಕರೆಯುವುದು ಅನಿವಾರ್ಯ!

ಅವಕಾಶ ಕಲ್ಪಿಸಲಾಗುವುದು: ನಿಯಮಾವಳಿ ಪ್ರಕಾರ ಮೇ 15ರಿಂದ ಸೆ. 15ರ ವರೆಗೆ ಮಂಗಳೂರು ಹಳೆಬಂದರಿನಿಂದ ಸರಕು ಸಾಗಾಟಕ್ಕೆ ನಿಷೇಧವಿದೆ. ಇದರಂತೆ ಸದ್ಯ ಸರಕು ಸಾಗಾಟಕ್ಕೆ ಅವಕಾಶವಿದೆ. ಆದರೆ, ಅಳಿವೆಬಾಗಿಲಿನಲ್ಲಿ ಹೂಳು ತುಂಬಿರುವ ಕಾರಣದಿಂದ ನೌಕೆ ತೆರಳಲು ಸಮಸ್ಯೆಯಾಗಿದೆ. ಕಡಲ ಅಲೆಗಳ ತೀವ್ರತೆ ಕೊಂಚ ಕಡಿಮೆಯಾದ ಕೂಡಲೇ ಹೂಳೆತ್ತುವ ಕೆಲಸ ನಡೆಸಿ ಸರಕು ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗುವುದು. – ಯೋಗೀಶ್‌, ಬಂದರು ಸಂರಕ್ಷಣಾಧಿಕಾರಿ-ಮಂಗಳೂರು ದಿನೇಶ್‌ ಇರಾ

ಟಾಪ್ ನ್ಯೂಸ್

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.