ಮಂಗಳೂರು: ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

 ಅಪ್ಪಣ್ಣನ ಕಟ್ಟೆಗೂ ಬಾವಿಗೂ ಇತ್ತು ಭಾವನಾತ್ಮಕ ನಂಟು

Team Udayavani, Sep 18, 2020, 10:33 AM IST

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

ಮಹಾನಗರ: ಮಂಗಳೂರು ನಗರದ ಹೃದಯ ಭಾಗ ಹಂಪನಕಟ್ಟೆಯಲ್ಲಿ ಸುಮಾರು ಒಂದು ಶತಮಾನಕ್ಕೂ ಹಿಂದಿನ ಇತಿಹಾಸವಿರುವ ಬೃಹತ್‌ ಬಾವಿಯೊಂದು ಪತ್ತೆಯಾಗಿದ್ದು, ಕುತೂ ಹಲಕ್ಕೆ ಕಾರಣವಾಗಿದೆ. ವಿಶೇಷ ಅಂದರೆ ಈ ಬಾವಿಯು ಈಗಲೂ ಸುಸ್ಥಿತಿಯಲ್ಲಿದೆ.

ಈ ಬಾವಿಯ ಮತ್ತೂಂದು ವಿಶೇಷ ಅಂದರೆ ಅದು ಸಾಮಾನ್ಯವಾಗಿ ಯಾರು ಊಹಿಸಲು ಸಾಧ್ಯವಾಗದಷ್ಟು ಆಳವನ್ನು ಹೊಂದಿದೆ. ಸ್ಥಳೀಯ ನಿವಾಸಿ ಗಳ ಪ್ರಕಾರ, ಈ ಬಾವಿಯು ಸುಮಾರು 100 ಅಡಿ ಆಳವನ್ನು ಹೊಂದಿದೆ ಎನ್ನಲಾಗುತ್ತಿದೆ.

ಹಂಪನಕಟ್ಟೆಯ ಸಿಗ್ನಲ್‌ ಬಳಿಯಿರುವ ರಿಕ್ಷಾ ಪಾರ್ಕಿಂಗ್‌ ಹತ್ತಿರದಲ್ಲಿ ಹಳೆ ಕಾಲದ ಈ ಬಾವಿ ಪತ್ತೆಯಾಗಿದೆ. ಇಲ್ಲಿ ಕೆಲವು ದಿನಗಳಿಂದ ಸ್ಮಾರ್ಟ್‌ಸಿಟಿ ಯೋಜನೆಯಡಿ ಜಂಕ್ಷನ್‌ ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ರಸ್ತೆ ಅಗೆಯುವ ಕಾಮಗಾರಿ ನಡೆಯು ತ್ತಿತ್ತು. ಈ ವೇಳೆ ಕಾಂಕ್ರೀಟ್‌ ಸ್ಲಾಬ್‌ ಕಾಣಿಸಿತ್ತು. ಆಗ ಸ್ಲಾಬ್‌ ಮೇಲೆತ್ತಿ ನೋಡಿದಾಗ ಆಳವಾದ ಬಾವಿ ಇರುವುದು ಗೊತ್ತಾಗಿದೆ. ಈ ವಿಚಾರವನ್ನು ಅಲ್ಲಿ ನೆಲೆಸಿರುವ ಜನರೊಂದಿಗೆ ಚರ್ಚಿಸಿದಾಗ ಶತಮಾನದಷ್ಟು ಹಳೆಯ ಬಾವಿ ಇದು ಎನ್ನುವುದು ಖಚಿತಗೊಂಡಿದೆ.

ಅಂದಹಾಗೆ, ಈ ಬಾವಿಗೂ ಹಂಪನಕಟ್ಟೆ ಪ್ರದೇಶಕ್ಕೂ ಭಾವನಾತ್ಮಕ ಸಂಬಂಧವಿದೆ. ಶತಮಾನದ ಹಿಂದೆ ಮಂಗಳೂರಿಗೆ ದೂರದಿಂದ ಬಂದವರಿಗೆ ಬಾಯಾರಿಕೆಗಾಗಿ ಸ್ಥಳೀಯರಾದ ಅಪ್ಪಣ್ಣ ಅವರು ಈಗಿನ ಹಂಪನಕಟ್ಟೆಯ ಅಶ್ವತ್ಥ ಮರದ ಕಟ್ಟೆಯ ಮೇಲೆ ಕುಳಿತು ನೀರು ಕೊಡುತ್ತಿದ್ದರು ಎನ್ನುವ ಪ್ರತೀತಿ ಇದೆ. ಆ ಕಾಲದಲ್ಲಿ ಅಪ್ಪಣ್ಣ ಅವರು ಇದೇ ಬಾವಿಯಿಂದ ನೀರು ತೆಗೆದುಕೊಂಡು ಬಂದು ನೀಡುತ್ತಿದ್ದರು ಎನ್ನಲಾಗುತ್ತಿದೆ. ಈ ರೀತಿ ಹಿಂದೆ “ಅಪ್ಪಣ್ಣ ಕಟ್ಟೆ’ಯಾಗಿದ್ದ ಆ ಪ್ರದೇಶ ಅನಂತರದಲ್ಲಿ “ಹಂಪನಕಟ್ಟೆ’ಯಾಗಿ ಹೆಸರು ಪಡೆದುಕೊಂಡಿದೆ. ಹೀಗಿರುವಾಗ ಆ ಕಾಲದಲ್ಲಿ ಈ ಬಾವಿ ಕೂಡ “ಅಪ್ಪಣ್ಣನ ಬಾವಿ’ ಎಂದೇ ಪ್ರಸಿದ್ಧಿ ಪಡೆದಿತ್ತು ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.

 ಅಪ್ಪಣ್ಣನ ಕಟ್ಟೆಗೂ ಬಾವಿಗೂ ಇತ್ತು ಭಾವನಾತ್ಮಕ ನಂಟು

“ಸುಮಾರು ನೂರು ವರ್ಷಗಳ ಇತಿಹಾಸ ಹೊಂದಿದ ಈ ಬಾವಿಯ ನೀರನ್ನು ಈ ಹಿಂದೆ ಸುತ್ತಮುತ್ತಲಿನ ಜನರು ಉಪಯೋಗಿಸುತ್ತಿದ್ದರು. 1962ರ ಸಮಯದಲ್ಲಿ ನಗರದಲ್ಲಿ ಸ್ಥಳೀಯಾಡಳಿತದಿಂದ ನೀರು ಸರಬರಾಜು ಆರಂಭವಾಗಿತ್ತು. ಆ ಬಳಿಕ ರಸ್ತೆ ಅಭಿವೃದ್ಧಿ ಕಾಮಗಾರಿ ವೇಳೆ ಈ ಬಾವಿಯನ್ನು ಮುಚ್ಚಲು ನಿರ್ಧರಿಸಲಾಗಿತ್ತು. ಆಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಆ ಕಾರಣದಿಂದ ಬಾವಿ ಮುಚ್ಚದೆ, ಮುನ್ನೆಚ್ಚರಿಕೆ ಕ್ರಮವಾಗಿ ಬಾವಿಗೆ ಕಾಂಕ್ರೀಟ್‌ ಸ್ಲಾಬ್‌ ಹಾಕಿ ಇಡಲಾಗಿದೆ. ಕಾಲ ಕ್ರಮೇಣ ಆ ಸ್ಲಾಬ್‌ ಮೇಲೆ ಡಾಮರು ಹಾಕ
ಲಾಗಿದ್ದು, ಬಾವಿ ಇದ್ದ ಕುರುಹು ಕೂಡ ಕಣ್ಮರೆಯಾಗಿ ಹೋಗಿತ್ತು. ಇದೀಗ ರಸ್ತೆ ಅಗೆಯುವ ವೇಳೆ ಆ ಬಾವಿ ಗೋಚರಿಸಿರುವುದು ಹಂಪನ ಕಟ್ಟೆಯ ಇತಿಹಾಸದ ಪುಟಗಳನ್ನು ನೆನಪಿಸುವಂತೆ ಮಾಡಿರುವುದು ವಿಶೇಷ’ ಎನ್ನುತ್ತಾರೆ ಸ್ಥಳೀಯರು.

ಈ ಹಿಂದೆ ಬಾವಿ ಇತ್ತು
ಬಾವಿ ಪತ್ತೆ ಬಗ್ಗೆ ಹಂಪನಕಟ್ಟೆ ಬಳಿಯ ಕೆನರಾ ಜುವೆಲರ್ಸ್‌ ಮಾಲಕ ಧನಂಜಯ ಪಾಲ್ಕೆ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, ಅನೇಕ ವರ್ಷಗಳ ಹಿಂದೆ ನಮ್ಮ ಮಳಿಗೆಯ ಎದುರು ಬಾವಿ ಇತ್ತು. ಈ ಬಾವಿ ನೀರನ್ನು ನಾವೂ ಉಪಯೋಗಿಸುತ್ತಿದ್ದೆವು. ಈ ಬಾವಿ ಸುಮಾರು 100 ಅಡಿ ಆಳ ಹೊಂದಿದೆ. ಈ ಹಿಂದೆ ಬಾವಿಯ ಸುತ್ತಲೂ ಕಟ್ಟೆ ಇತ್ತು. ಆ ಬಾವಿಗೆ ಮೂರು ರಾಟೆ ಇದ್ದು, ಹಗ್ಗದ ಮೂಲಕ ಸ್ಥಳೀಯರು ನೀರು ಎಳೆಯುತ್ತಿದ್ದರು. ಅಭಿವೃದ್ಧಿ ಕಾರಣ ಈ ಬಾವಿ ಮುಚ್ಚುವ ಸಂದರ್ಭ ಬಂದಾಗ ನನ್ನ ತಂದೆ ದಿ| ಪಾಲ್ಕೆ ಬಾಬುರಾಯ ಆಚಾರ್ಯ ಅವರು ಬಾವಿಗೆ ಸ್ಲಾ ಬ್‌ ಹಾಕಿ ಮುಚ್ಚಳ ಅಳವಡಿಸಿದ್ದರು. ಬಳಿಕ ಸ್ಲಾಬ್‌ ಮೇಲೆ ಡಾಮರು ಹಾಕಲಾಗಿತ್ತು. ಇದೀಗ ರಸ್ತೆ ಕಾಮಗಾರಿ ವೇಳೆ ಬಾವಿ ಕಂಡಿದೆ. ಈ ಬಾವಿಯಲ್ಲಿನ ನೀರು ಈಗಲೂ ಉತ್ತಮವಾಗಿದ್ದು, ಮುಂದಿನ ಪೀಳಿಗೆಗೆ ಈ ಬಾವಿಯನ್ನು ಸಂರಕ್ಷಿಸಬೇಕು’ ಎನ್ನುತ್ತಾರೆ.

ಒಂದು ಕಾಲದಲ್ಲಿ ಬಾವಿಗಳ ನಗರ !
ನಗರದಲ್ಲಿ ಅನೇಕ ವರ್ಷಗಳ ಹಿಂದೆ ಅನೇಕ ಕೆರೆ, ಬಾವಿಗಳಿದ್ದವು. ಇದೇ ಕಾರಣಕ್ಕೆ ಮಂಗಳೂರು ಬಾವಿಗಳ ನಗರ ಎಂದೂ ಕರೆಯುವುದುಂಟು. ಆದರೆ ಕಾಲಕ್ರಮೇಣ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಬಾವಿಗಳು ಮರೆಯಾದವು. ಕೆಲವು ತಿಂಗಳುಗಳ ಹಿಂದೆ ಬೋಳಾರದ ಮಾರಿಗುಡಿ ಸಮೀಪ ಬೋಳಾರ ಜಂಕ್ಷನ್‌ನಲ್ಲಿ ಬ್ರಿಟಿಷ್‌ ಆಡಳಿತ ಕಾಲದ ಬಾವಿಯೊಂದು ಗೋಚರಿಸಿತ್ತು.

ಹಂಪನಕಟ್ಟೆಯಲ್ಲಿ ಕೆಲವು ದಿನಗಳಿಂದ ಜಂಕ್ಷನ್‌ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಆ ವೇಳೆ ಬಾವಿಯೊಂದು ಕಾಣಿಸಿತು. ಅಲ್ಲಿನ ಸ್ಥಳೀಯರು ಹೇಳುವಂತೆ ಅನೇಕ ವರ್ಷಗಳ ಹಿಂದಿನ ಬಾವಿ ಇದಾಗಿದೆ. ಸದ್ಯಕ್ಕೆ ಆ ಭಾಗದ ಕಾಮಗಾರಿ ನಿಲ್ಲಿಸಿದ್ದೇವೆ. ಈ ಬಾವಿ ಉಳಿಸುವ ನಿಟ್ಟಿನಲ್ಲಿ, ಮುಂದಿನ ಯೋಜನೆಯ ಬಗ್ಗೆ ಸ್ಥಳೀಯಾಡಳಿತ ಸಹಿತ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗುವುದು.
-ಮಹಮ್ಮದ್‌ ನಜೀರ್‌,
ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ

ಹಂಪನಕಟ್ಟೆಯಲ್ಲಿ ಅನೇಕ ವರ್ಷಗಳ ಹಿಂದೆ ನಮ್ಮ ಹೊಟೇಲ್‌ ಎದುರುಗಡೆ ಬಾವಿಯೊಂದು ಇದ್ದದ್ದು ನನಗೆ ನೆನಪಿದೆ. ಅಪ್ಪಣ್ಣ ಅವರು ಕೂಡ ಇದೇ ಬಾವಿ ನೀರು ಬಾಯಾರಿದವರಿಗೆ ನೀಡುತ್ತಿದ್ದರು ಎನ್ನುವುದನ್ನು ಹಿರಿಯರಿಂದ ಕೇಳಿದ್ದೇನೆ. ನೀರು ಸರಬರಾಜು ಆರಂಭಗೊಂಡ ಮೇಲೆ, ರಸ್ತೆ ಅಭಿವೃದ್ಧಿ ಸಮಯದಲ್ಲಿ ಆ ಬಾವಿಯನ್ನು ಸ್ಲಾಬ್‌ ಹಾಕಿ ಮುಚ್ಚಲಾಗಿತ್ತು. ಇದೀಗ ಬಾವಿ ಕಾಣಿಸಿಕೊಂಡಿದ್ದು, ಈ ಬಾವಿಯನ್ನು ಉಳಿಸಬೇಕಿದೆ.
ಕುಡ್ಪಿ ಜಗದೀಶ ಶೆಣೈ, ದ.ಕ. ಜಿಲ್ಲಾ ಹೊಟೇಲ್‌ ಮಾಲಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.