ಕಾರ್ಮಿಕರನ್ನು  ಒಡೆದು ಆಳುವ ತಂತ್ರ ಖಂಡನೀಯ: ಬಾಲಕೃಷ್ಣ ಶೆಟ್ಟಿ 


Team Udayavani, Aug 9, 2018, 12:28 PM IST

9-agust-8.jpg

ಮಹಾನಗರ: ಬೀಡಿ ಕಾರ್ಮಿಕರಿಗೆ 2018 ಎ. 1ರಿಂದ ಸಾವಿರ ಬೀಡಿಗೆ 210 ಕನಿಷ್ಠ ಕೂಲಿ ನಿಗದಿಯಾಗಿದೆ. ಆದರೆ ಬೀಡಿ ಮಾಲಕರು ಈ ಕನಿಷ್ಠ ಕೂಲಿಯನ್ನು ಜಾರಿ ಮಾಡಿರುವುದಿಲ್ಲ. ಬದಲಿಗೆ ಈ ಕೂಲಿಯನ್ನು ಕಾರ್ಮಿಕರಿಗೆ ಮೋಸ ಮಾಡಲು ವಾರದಲ್ಲಿ 2 ದಿನಗಳ
ಕೆಲಸ ನೀಡಿ ಒಡೆದು ಆಳುವ ತಂತ್ರವನ್ನು ಅಳವಡಿಸುತ್ತಿರುವುದು ಖಂಡನೀಯ ಎಂದು ಸೌತ್‌ ಕೆನರಾ ಬೀಡಿ ವರ್ಕರ್ಸ್‌ ಫೆಡರೇಶನ್‌ (ಸಿಐಟಿಯು) ಪ್ರಧಾನ ಕಾರ್ಯದರ್ಶಿ ಜೆ. ಬಾಲಕೃಷ್ಣ ಶೆಟ್ಟಿ ಹೇಳಿದರು. ಮಂಗಳೂರಿನ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಮುಂದುಗಡೆ ಮಂಗಳವಾರದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಬುಧವಾರ (ಎರಡನೇ ದಿನ) ಅವರು ಮಾತನಾಡಿದರು.

ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಫೆಡರೇಶನ್‌ ಅಧ್ಯಕ್ಷ ವಸಂತ ಆಚಾರಿ ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ತಮಗೂ ಕಾರ್ಮಿಕರ ಸಮಸ್ಯೆಗಳಿಗೂ ಸಂಬಂಧವಿಲ್ಲವೆಂದು ವರ್ತಿಸುತ್ತಿರುವುದು ಖಂಡನೀಯ. ವಿಧಾನಸಭಾ ಮತ್ತು ಸಂಸತ್‌ ಚುನಾವಣೆಯಲ್ಲಿ ನಿಂತು ಗೆಲ್ಲುತ್ತಾರೆ. ಆದರೆ ಅನಂತರ ಉಳ್ಳವರ ಪರವಾಗಿ ಸ್ಪಂದಿಸುತ್ತಾರೆ. ಮುಂದಿನ ಹೋರಾಟ ಜನಪ್ರತಿನಿಧಿಗಳ ಮನೆ ಮುಂದೆ ಕಾರ್ಯಕ್ರಮ ನಡೆಸುವುದು ಅನಿವಾರ್ಯವಾಗುತ್ತದೆ ಎಂದು
ಹೇಳಿದರು.

ಆ. 9ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದುಗಡೆ ಧರಣಿ ಸತ್ಯಾಗ್ರಹವನ್ನು ಮುಂದುವರಿಸಲಾಗುವುದು. ಈ ಮಧ್ಯೆ ಡಿಎಲ್‌ಸಿಯವರು ಜಂಟಿ ಮಾತುಕತೆಯನ್ನು ಕೂಡ ನಿಗದಿಪಡಿಸಿದ್ದು, ಸಮಸ್ಯೆ ಪರಿಹಾರವಾಗದಿದ್ದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಮುಂದುವರಿಸಲಾಗುವುದು ಎಂದರು.

ಫೆಡರೇಶನ್‌ ಉಪಾಧ್ಯಕ್ಷ ಬಾಬು ದೇವಾಡಿಗ ಮಾತನಾಡಿದರು. 2ನೇ ದಿನದ ಧರಣಿ ಸತ್ಯಾಗ್ರಹದ ನೇತೃತ್ವವನ್ನು ಬೀಡಿ ಕಾರ್ಮಿಕರ ಸಂಘಗಳ ಮುಂದಾಳುಗಳಾದ ಪುಷ್ಪಾ ಶಕ್ತಿನಗರ, ವಿಲಾಸಿನಿ, ಸುಂದರ ಕುಂಪಲ, ಜಯರಾಮ, ಶ್ರೀನಿವಾಸ, ಜನಾರ್ದನ ಕುತ್ತಾರ್‌, ಪುಷ್ಪಾ ಕುಂಪಲ, ಯು.ಬಿ. ಲೋಕಯ್ಯ, ಕೆ. ಸದಾಶಿವ ದಾಸ್‌, ಗಂಗಯ್ಯ ಅಮೀನ್‌ ಮೊದಲಾದವರು ವಹಿಸಿದ್ದರು. ಯು.ಜಯಂತ ನಾಯ್ಕ ಸ್ವಾಗತಿಸಿ, ಪದ್ಮಾವತಿ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.