ನಗರದ ನೂರು ಕಡೆ “ಮಿಯಾವಾಕಿ’ ಕಾಡು!

"ಲಕ್ಷ ವೃಕ್ಷ' ಬೆಳೆಸುವ ಮಹತ್ಕಾರ್ಯಕ್ಕೆ ರೂಪರೇಖೆ ಸಿದ್ಧ

Team Udayavani, Dec 21, 2019, 4:55 AM IST

dc-32

ಮಹಾನಗರ: ನಗರದ ನೂರು ಕಡೆ “ಮಿಯಾವಾಕಿ’ ಮಾದರಿಯಲ್ಲಿ ನೈಸರ್ಗಿಕ ಕಾಡು ಸೃಷ್ಟಿಸಿ ನಗರವನ್ನು ಹಸುರಾಗಿಸುವ ಮಹತ್ವದ ಯೋಜನೆಗೆ ರಾಮಕೃಷ್ಣ ಮಿಷನ್‌ ಮುಂದಾಗಿದೆ. ಈ ಮೂಲಕ ನಗರದೊಳಗೆ “ಲಕ್ಷ ವೃಕ್ಷ’ ಬೆಳೆಸುವ ಮಹತ್ಕಾರ್ಯಕ್ಕೆ ರೂಪರೇಖೆ ಸಿದ್ಧಗೊಳ್ಳುತ್ತಿದೆ.

ಕೊಟ್ಟಾರದಲ್ಲಿ ಆರಂಭ
ಕಡಿಮೆ ಜಾಗದಲ್ಲಿ ದಟ್ಟವಾಗಿ ಕಾಡು ಬೆಳೆಸುವ ಜಪಾನ್‌ನ ಮಿಯಾ ವಾಕಿ ಮಾದರಿಯಲ್ಲಿ ಕೊಟ್ಟಾರ ಚೌಕಿಯ ಇನ್ಫೋ ಸಿಸ್‌ ಸಂಸ್ಥೆ ಸಮೀ ಪ ದಲ್ಲಿ ಆರಂಭಿಸಲಾದ ಕಾಡು ಬೆಳೆಯುತ್ತಿದೆ. ಇಲ್ಲಿ 4 ಸೆಂಟ್ಸ್‌ ಜಾಗದಲ್ಲಿ 103 ಜಾತಿಯ 238 ಗಿಡಗಳನ್ನು ಕಳೆದ ಅಕ್ಟೋಬರ್‌ನಲ್ಲಿ ನೆಡಲಾಗಿದ್ದು ಈಗ ಅವು ಸೊಂಪಾಗಿ ಬೆಳೆಯುತ್ತಿವೆ. ಸಾಮಾ ನ್ಯ ವಾಗಿ ಇಷ್ಟು ಜಾಗದಲ್ಲಿ 10-12 ಗಿಡ ಗಳನ್ನು ನೆಡಲಾಗುತ್ತದೆ.

ವಿವಿಧ ಜಾತಿಯ ಗಿಡ
ಮಿಯಾ ವಾಕಿ ಮಾದರಿಯಲ್ಲಿ 600 ಗಿಡಗಳನ್ನು ಬೆಳೆಸಬಹುದಾಗಿದೆ. ಸದ್ಯ ಇಲ್ಲಿ 238 ಗಿಡಗಳನ್ನು ಬೆಳೆಸಲಾಗಿದ್ದು ಎರಡು ಗಿಡಗಳನ್ನು ಹೊರತುಪಡಿಸಿದರೆ ಉಳಿದೆಲ್ಲವೂ ನಳನಳಿಸುತ್ತಿವೆ. ಇಲ್ಲಿ ಅರ್ತಿ, ಶ್ರೀಗಂಧ, ರಕ್ತಚಂದನ, ಪೇರಳೆ, ಮಾವು, ಹಲಸು, ಪುನರ್ಪುಳಿ, ನೇರಳೆ ಸಹಿತ ಹಣ್ಣು ಹಾಗೂ ಇತರ ಜಾತಿಯ ಮರಗಳಿವೆ. ಸಹಜವಾದ ಕಾಡಿನಲ್ಲಿ ಇರಬೇಕಾದ ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗಿದೆ.

ಅಂತರ ಕಡಿಮೆ ಇದ್ದರೂ ಉತ್ತಮ ಬೆಳವಣಿಗೆ
ಇಲ್ಲಿ ಒಂದು ಅಡಿಗಿಂತಲೂ ಕಡಿಮೆ ಅಂತರದಲ್ಲಿ ಗಿಡಗಳನ್ನು ನೆಡಲಾಗಿದೆ. ಹೆಚ್ಚು ಬಾಳಿಕೆಯ ಗಿಡಗಳ ಸಮೀಪ ಕಡಿಮೆ ಬಾಳಿಕೆಯ ಗಿಡಗಳನ್ನು ನೆಡಲಾಗಿದೆ. ಒಂದು ಮರದ ಆಯಸ್ಸು ಮುಗಿಯುವಾಗ ಅಲ್ಲಿ ಪಕ್ಕದಲ್ಲಿರುವ ಇನ್ನೊಂದು ಮರ ವಿಶಾಲವಾಗಿ ಬೆಳೆಯುತ್ತದೆ. ಕಾಡು ದಟ್ಟವಾಗಿಯೇ ಉಳಿಯುತ್ತದೆ. ಇದು ಮಿಯಾವಾಕಿಯ ಒಂದು ಸೂತ್ರ.”ಎರಡು ಬಾರಿ ಸ್ವಲ್ಪ ಪ್ರಮಾಣದಲ್ಲಿ ಸಾವಯವ ಗೊಬ್ಬರ ಹಾಕಿದ್ದೇವೆ. ಉತ್ತಮವಾಗಿ ಬೆಳೆಯುತ್ತಿದೆ’ ಎನ್ನುತ್ತಾರೆ ಮಿಯಾವಾಕಿ ಕೊಟ್ಟಾರಚೌಕಿಯಲ್ಲಿ ಕಾಡನ್ನು ನಿರ್ವಹಿಸುತ್ತಿರುವ ಶಿವು ಅವರು.

ನಗರದ 100 ಕಡೆಗಳಲ್ಲಿ 3ರಿಂದ 4 ಸೆಂಟ್ಸ್‌ ಜಾಗ ಅಥವಾ ಅದಕ್ಕಿಂತ ಕಡಿಮೆ/ ಹೆಚ್ಚು ಜಾಗ ಲಭ್ಯವಾದರೆ ಒಂದು ಲಕ್ಷದವರೆಗೆ ಗಿಡಗಳನ್ನು ನೆಡಬಹುದು ಎಂಬ ಅಂದಾಜಿದೆ. ದೇರಳಕಟ್ಟೆಯಲ್ಲಿ ನಿಟ್ಟೆ ವಿದ್ಯಾ ಸಂಸ್ಥೆಯವರು ಹಾಗೂ ನಗರದ ಕೆಲವೆಡೆ ಶಾಸಕರು ಜಾಗ ಒದಗಿಸಿಕೊಡುವ ಕುರಿತು ಆಸಕ್ತಿ ತೋರಿದ್ದಾರೆ.

ಇದೇ ರೀತಿ ಜಾಗ ದೊರೆತರೆ ಹಸುರಿನ ಕೊರತೆ ನೀಗಬಹುದು. ಮಾತ್ರವಲ್ಲದೆ ಕಟ್ಟಡಗಳನ್ನು ಕಟ್ಟುವವರು ಉದ್ಯಾನವನಕ್ಕೆ ಮೀಸಲಿಡುವ ಜಾಗದಲ್ಲಿಯೂ ಇಂತಹ ಕಾಡುಗಳನ್ನು ನಿರ್ಮಿಸಬಹುದಾಗಿದೆ. ಈ ರೀತಿ ಇಪ್ಪತ್ತು ವರ್ಷಗಳವರೆಗೆ ಕಾಡು ಬೆಳೆಸಿದರೆ ಅದರಿಂದ ಆದಾಯವನ್ನೂ ಗಳಿಸಬಹುದು ಜತೆಗೆ “ಫಾರೆಸ್ಟ್‌ ಅಗ್ರಿ ಕಲ್ಚರ್‌’ ಪರಿಕಲ್ಪನೆಗೂ ಇದು ಪೂರಕ ವಾಗಿದೆ ಎನ್ನುತ್ತಾರೆ ರಾಮಕೃಷ್ಣ ಮಠದ ಶ್ರೀ ಏಕಗಮ್ಯಾನಂದ ಸ್ವಾಮೀಜಿಯವರು.

ಸಕಾರಾತ್ಮಕ ಪ್ರತಿಕ್ರಿಯೆ
ವಿವಿಧ ಕಾರಣಗಳಿಂದ ಹಸುರು ಮಾಯವಾಗುತ್ತಿದೆ. ನಗರದಲ್ಲಿಯೂ ಶುದ್ಧ ಗಾಳಿಯ ಕೊರತೆ ಉದ್ಭವಿಸದಿರಲು ಹಸುರು ಅನಿವಾರ್ಯವಾಗಿದೆ. ಸದ್ಯದ ಸ್ಥಿತಿಯಲ್ಲಿ ಮಿಯಾವಾಕಿ ಕಾಡುಗಳೇ ಪರಿಹಾರ. ಕೊಟ್ಟಾರಚೌಕಿಯಲ್ಲಿ ಆರಂಭಿಸಿದ ಮಿಯಾವಾಕಿ ಕಾಡು ನಿರೀಕ್ಷಿತ ರೀತಿಯಲ್ಲಿ ಬೆಳೆಯುತ್ತಿದೆ. ಇದೇ ಮಾದರಿಯಲ್ಲಿ ನಗರದ 100 ಕಡೆ ಬೆಳೆಸುವ ಚಿಂತನೆ ನಮ್ಮದು. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯುತ್ತಿದೆ. ಯೋಜನೆಗೆ ಅಂತಿಮ ರೂಪ ಇನ್ನಷ್ಟೇ ನೀಡಬೇಕಿದೆ. ಸ್ವತ್ಛತೆಯಂತೆ ಹಸುರಿಗೂ ಆದ್ಯತೆ ಈ ಸಮಯದ ಅಗತ್ಯವಾಗಿದೆ.
 - ಶ್ರೀ ಏಕಗಮ್ಯಾನಂದ ಸ್ವಾಮೀಜಿ, ಶ್ರೀ ರಾಮಕೃಷ್ಣ ಮಠ, ಮಂಗಳೂರು.

- ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.