ಪಚ್ಚನಾಡಿ: ಸಹಜ ಸ್ಥಿತಿಗೆ ಬರಲು ಬೇಕು ನಾಲ್ಕೈದು ದಿನ
ಅಗ್ನಿಶಾಮಕ ದಳದಿಂದ ಮುಂದುವರಿದ ಕಾರ್ಯಾಚರಣೆ
Team Udayavani, Jan 9, 2023, 7:00 AM IST
ಪಚ್ಚನಾಡಿ: ಇಲ್ಲಿನ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಬೆಂಕಿ ಬಿದ್ದ ಪರಿಣಾಮ ತ್ಯಾಜ್ಯದ ಒಳಗೆ ಹೊಗೆಯಾ ಡುತ್ತಿರುವ ಕೆಂಡವನ್ನು ನಂದಿಸುವ ನಿಟ್ಟಿನಲ್ಲಿ ಆಗ್ನಿಶಾಮಕ ದಳದ ಕಾರ್ಯಾಚರಣೆ ರವಿವಾರವೂ ಮುಂದುವರಿದಿದೆ. ಏಳುತ್ತಿ ರುವ ಹೊಗೆ ಸಂಪೂರ್ಣವಾಗಿ ಸಹಜ ಸ್ಥಿತಿಗೆ ಬರಲು ಇನ್ನೂ ಕನಿಷ್ಠ ನಾಲ್ಕೈದು ದಿನ ಬೇಕಾಗಬಹುದು ಎನ್ನುತ್ತಾರೆ ಅಗ್ನಿಶಾಮಕ ದಳದ ಸಿಬಂದಿ.
ಕದ್ರಿ ಮತ್ತು ಪಾಂಡೇಶ್ವರ ಅಗ್ನಿ ಶಾಮಕ ದಳದ ವಾಹನದೊಂದಿಗೆ ಇತರ ಸಂಸ್ಥೆಗಳಿಗೆ ಸೇರಿದ ಮೂರು ಅಗ್ನಿ ಶಾಮಕ ವಾಹನಗಳು, ಸಿಬಂದಿ ಬೆಂಕಿ ನಂದಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಆಗಾಗ್ಗೆ ಆವರಿಸುತ್ತಿರುವ ದಟ್ಟವಾದ ಹೊಗೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಬೆಳಗ್ಗಿನ ಹೊತ್ತು ಹೊಗೆ ಪಶ್ಚಿಮ ದಿಕ್ಕಿನತ್ತ ಚಲಿಸಿದರೆ, ಮಧ್ಯಾಹ್ನ ಬಳಿಕ ಪೂರ್ವಕ್ಕೆ ಬರುತ್ತದೆ. ಇದರಿಂದ ಕಾರ್ಯಾಚರಣೆ ನಡೆಸಲು ಸಾಧ್ಯವಾಗುತ್ತಿಲ್ಲ.
ಸ್ಥಳೀಯ ನೀರಿನ ಮೂಲಕಗಳಿಂದ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮುಂದುವರಿಸಲಾಗಿದ್ದು, ಈಗಾಗಲೇ ಹಲವು ಲಕ್ಷ ಲೀಟರ್ಗಳನ್ನು ನೀರನ್ನು ವ್ಯಯಿಸಲಾಗಿದೆ.
ಸುತ್ತಮುತ್ತಲಿನ ಪ್ರದೇಶದಲ್ಲಿ ಹೊಗೆಯ ವಾತಾವರಣ ರವಿವಾರವೂ ಕಂಡು ಬಂದಿದ್ದು, ನಿರಂತರವಾಗಿ ಈ ಕಲುಷಿತ ಹೊಗೆ ಸೇವನೆ ಸ್ಥಳೀಯರಲ್ಲಿ ಆತಂತಕ್ಕೆ ಕಾರಣವಾಗಿದೆ. ಶೀಘ್ರ ಬೆಂಕಿಯನ್ನು ನಂದಿಸುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಮಂಗಳೂರು ಪಾಲಿಕೆ ವಲಯ ಆಯುಕ್ತ ಶಬರಿನಾಥ್ ರೈ, ಆರೋಗ್ಯ ಅಧಿಕಾರಿ ಡಾ| ಮಂಜಯ್ಯ ಶೆಟ್ಟಿ,, ಆರೋಗ್ಯ ವಿಭಾಗದ ಅಧಿಕಾರಿಗಳು ರವಿವಾರ ಭೇಟಿ ನೀಡಿ ಪರಿಶೀಲಿಸಿದರು.
ಕಣ್ಣುರಿ, ಕಫ, ಚರ್ಮದಲ್ಲಿ ತುರಿಕೆ
ಮಾಸ್ಕ್ ಧರಿಸಿ ಕಾರ್ಯಾಚರಣೆ ಮಾಡಲೂ ಸಾಧ್ಯವಾಗುತ್ತಿಲ್ಲ. ಹೊಗೆ ಯೊಂದ ಕಣ್ಣು ಉರಿ ಬರು ತ್ತಿದ್ದು, ಕಪ್ಪು ಕಫ ಹೊರಬರುತ್ತದೆ. ಚರ್ಮ ದಲ್ಲಿಯೂ ತುರಿಕೆ ಕಂಡು ಬರುತ್ತಿದೆ. ಹೊಗೆಯೊಂದಿಗೆ ಬರುವ ಘಾಟು ವಾಸನೆಯಿಂದ ಊಟ ಮಾಡಲೂ ಸಾಧ್ಯವಾಗುತ್ತಿಲ್ಲ. ಡ್ನೂಟಿ ಮುಗಿಸಿ ಹೋದರೂ ವಾಸನೆಯೇ ಮೂಗಿಗೆ ಬಡಿಯುತ್ತಿದೆ. ಕೆಲವು ದಿನ ಇಲ್ಲಿಯೇ ಇದ್ದರೆ ಕಾಯಿಲೆ ಬೀಳುವುದು ಖಚಿತ ಎನ್ನುವುದು ಅಗ್ನಿಶಾಮಕ ದಳದ ಸಿಬಂದಿಯ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ