ಪಚ್ಚನಾಡಿ: “ಕಟ್ಟಡ ಭಗ್ನಾವಶೇಷ ಸಂಸ್ಕರಣೆ ಘಟಕ’

ಷರತ್ತಿನ ಮೇರೆಗೆ ಸ್ಮಾರ್ಟ್‌ ಸಿಟಿ ಕಾಮಗಾರಿಗಳಿಗೆ ಅವಕಾಶ ದೊರಕಿದೆ.

Team Udayavani, Feb 3, 2023, 10:21 AM IST

ಪಚ್ಚನಾಡಿ: “ಕಟ್ಟಡ ಭಗ್ನಾವಶೇಷ ಸಂಸ್ಕರಣೆ ಘಟಕ’

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಗೆ ತಲೆನೋವಾಗಿ ಪರಿಣಮಿಸಿರುವ ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿ ಪರಿಹಾರದ ದಾರಿಯೊಂದನ್ನು ಕಂಡುಕೊಳ್ಳಲಾಗಿದ್ದು, ಈ ಕಾರ್ಯಕ್ಕಾಗಿ ಪಚ್ಚನಾಡಿ ಯಲ್ಲಿರುವ ಪ್ರಸಕ್ತ ತ್ಯಾಜ್ಯ ನಿರ್ವಹಣ ಘಟಕದ ಸಮೀಪದ ಸುಮಾರು 10 ಎಕರೆ ಭೂಮಿಯನ್ನು ಈ ಕಾರ್ಯಕ್ಕಾಗಿ ಖರೀದಿಸಲು ಪಾಲಿಕೆ ಮುಂದಾಗಿದೆ. ಪಾಲಿಕೆಯು ಸ್ವಾಧೀನ ಪಡಿಸಿ ಕೊಳ್ಳಲು ಮುಂದಾಗಿರುವ ಜಾಗ ದಲ್ಲಿ ಭೂ ಭರ್ತಿ ಮಾಡದೆಯೇ ಸಂಸ್ಕರಣೆಯ ಮೂಲಕ ಕಟ್ಟಡ ತ್ಯಾಜ್ಯ ನಿರ್ವಹಣೆಯ ಜತೆಗೆ ಮರುಬಳಕೆಯ ಉದ್ದೇಶದೊಂದಿಗೆ “ಕಟ್ಟಡ ಭಗ್ನಾವಶೇಷ ಸಂಸ್ಕರಣೆ ಘಟಕ’ವನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ.

ನಗರ ವ್ಯಾಪ್ತಿಯಲ್ಲಿ ಕಟ್ಟಡ ತ್ಯಾಜ್ಯ ನಿರ್ವಹಣೆ ಪಾಲಿಕೆಗೆ ಭಾರೀ ಸಮಸ್ಯೆಯಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದಲ್ಲಿ ನಡೆದ ಹಲವಾರು ನಿರ್ಮಾಣ ಕಾಮಗಾರಿಗಳ ಕಟ್ಟಡ ತ್ಯಾಜ್ಯವನ್ನು ನಗರದ ಜೀವನದಿಗಳಾದ ಫ‌ಲ್ಗುಣಿ, ನೇತ್ರಾವತಿಯ ದಂಡೆಗಳಲ್ಲಿ ಅಕ್ರಮ ವಾಗಿ ಕಟ್ಟಡ ತ್ಯಾಜ್ಯ ಸುರಿದು ನದಿ ನೀರನ್ನು ಮಲಿನಗೊಳಿಸಲಾಗುತ್ತಿರುವ ಬಗ್ಗೆ ಹೈಕೋರ್ಟ್‌ ಈ ಹಿಂದೆ ಕೆಲವು ಸಮಯ ಕಾಮಗಾರಿ ಗಳಿಗೆ ತಡೆ ಯನ್ನೂ ನೀಡಿತ್ತು. ಬಳಿಕ ಕಟ್ಟಡ ತ್ಯಾಜ್ಯ ಸಂಸ್ಕರಣೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವ ಷರತ್ತಿನ ಮೇರೆಗೆ ಸ್ಮಾರ್ಟ್‌ ಸಿಟಿ ಕಾಮಗಾರಿಗಳಿಗೆ ಅವಕಾಶ ದೊರಕಿದೆ.

ಜಾಗ ಗುರುತಿಸುವಿಕೆ
ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯ ನಿರ್ವಹಣೆಗಾಗಿ ಸಂಸ್ಕರಣೆ ಘಟಕ ಸ್ಥಾಪಿಸಲು ಕನಿಷ್ಠ ಐದು ಎಕರೆ ಜಾಗದ ಅಗತ್ಯ ಪಾಲಿಕೆಗಿದೆ. ಆದರೆ ಪಾಲಿಕೆಯ ಅಧೀನದಲ್ಲಿ ಸದ್ಯ ಅಂತಹ ಭೂಮಿ ಇಲ್ಲದಿರುವ ಕಾರಣ ಈಗಾಗಲೇ ಪಚ್ಚನಾಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಘನ ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ತಾಗಿಕೊಂಡಿರುವ ಕುಡುಪು ಗ್ರಾಮ ಸರ್ವೆ ನಂ. 57ರಲ್ಲಿನ 10 ಎಕರೆ 8 ಸೆಂಟ್ಸ್‌ ಖಾಸಗಿ ಮಾಲಕತ್ವದ ಜಾಗವನ್ನು ಪಾಲಿಕೆ ಗುರುಸಿತ್ತು.

ಟಿಡಿಆರ್‌ ಮೂಲಕ ಜಾಗವನ್ನು ಪಾಲಿಕೆಗೆ ನೀಡಲು ಮೌಖಿಕ ಒಪ್ಪಿಗೆ ದೊರಕಿತ್ತು. ಈ ಬಗ್ಗೆ 2016ರ ಸೆಪ್ಟಂಬರ್‌ನಲ್ಲಿ ನಡೆದ ಮನಪಾ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಗಿತ್ತು. ಅದಕ್ಕಾಗಿ ಜಿಲ್ಲಾಧಿಕಾರಿ ಅವರ ದರ ನಿರ್ಧಾರದ ಸಮಿತಿಯು ಆ ಆಸ್ತಿಗೆ 8 ಕೋಟಿ ರೂ.ಗಳನ್ನು ನಿಗದಿಪಡಿಸಿತ್ತು. ಪಾಲಿಕೆಯಿಂದ ಅಷ್ಟು ಹಣ ಹೊಂದಿಸಲು ಅಸಾಧ್ಯವಾದ ಕಾರಣ 2019ರ ನವೆಂಬರ್‌ನಲ್ಲಿ ಸರಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದ್ದು, ಆದರೆ ಸರಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ.

ಈ ಘಟಕ ಸಾರ್ವ ಜನಿಕ ಉದ್ದೇಶ ವನ್ನು ಹೊಂದಿರುವುದರಿಂದ ಟಿಡಿಆರ್‌ ನೀಡಲು ಕಾಯಿದೆಯಲ್ಲಿ ಅವಕಾಶ ವಿರುವುದರಿಂದ ಮನಪಾ ಈ
ಬಗ್ಗೆ ಪ್ರಕ್ರಿಯೆಗೆ ಮುಂದಾಗಿದೆ. ಗುರುತಿಸಲಾಗಿರುವ ಜಮೀನು ಕೃಷಿ ವಲಯದಲ್ಲಿದ್ದರೂ ಜಮೀನು ಖಾಲಿ ಇದ್ದು, ಬೆರಳೆಣಿಕೆಯ ತೆಂಗಿನ ಮರಗಳಿವೆ. ಮನಪಾದ ಘನತ್ಯಾಜ್ಯ ಘಟಕದ ಜಮೀನಿಗೆ ಹೊಂದಿಕೊಂಡಿದೆ, 6 ಮೀಟರ್‌ ಅಗಲದ ಸಂಪರ್ಕ ರಸ್ತೆಯನ್ನು ಹೊಂದಿದೆ. ಭವಿಷ್ಯದಲ್ಲಿ ಈಗಿರುವ ಘಟಕವನ್ನು ವಿಸ್ತರಿಸಲು ಕೂಡ ಈ ಜಮೀನು ಸೂಕ್ತ ಎಂಬುದು ಮನಪಾ ಚಿಂತನೆ.

ವಿಪಕ್ಷ ಆಕ್ಷೇಪ
2016ರಲ್ಲಿ ಈ ಪ್ರಸ್ತಾವನೆ ಮಾಡಲಾಗಿತ್ತು. ಆದರೆ ಅಂದಿನ ಜಿಲ್ಲಾಧಿಕಾರಿ ಇದನ್ನು ನಿರಾಕರಿಸಿದ್ದರು. ತಜ್ಞರ ಸಮಿತಿ ಕೂಡ ವಿರೋಧ ವ್ಯಕ್ತಪಡಿಸಿತ್ತು. ಮತ್ತೊಮ್ಮೆ ಪಚ್ಚನಾಡಿಯನ್ನು ಡಂಪಿಂಗ್‌ ಯಾರ್ಡ್‌ ಮಾಡುವುದು ಸರಿಯಲ್ಲ ಎಂದು ಈ ತೀರ್ಮಾನಕ್ಕೆ ಮನಪಾ ವಿಪಕ್ಷವಾದ ಕಾಂಗ್ರೆಸ್‌ ಸದಸ್ಯರಿಂದ ಆಕ್ಷೇಪ ವ್ಯಕ್ತವಾಗಿದೆ.

*ಸತ್ಯಾ ಕೆ

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.