ಕಳೆಗುಂದಿದ ಪಣಂಬೂರು ಬೀಚ್‌ ಸೌಂದರ್ಯ; ಭಾರೀ ಗಾಳಿ, ಮಳೆಗೆ ಕಡಲ್ಕೊರೆತ


Team Udayavani, Aug 4, 2022, 4:06 PM IST

10

ಪಣಂಬೂರು: ಅಂತಾರಾಷ್ಟ್ರೀಯ ಖ್ಯಾತಿಯ ಪಣಂಬೂರು ಬೀಚ್‌ ತನ್ನ ಸೌಂದರ್ಯವನ್ನು ಕಳೆದುಕೊಂಡಿದೆ. ಕಾರಣ ಕಳೆದ ಎರಡು ತಿಂಗಳುಗ ಳಿಂದ ಸುರಿಯುತ್ತಿರುವ ಭಾರೀ ಗಾಳಿ, ಮಳೆಗೆ ಬೀಚ್‌ ಕಡಲ್ಕೊರೆತಕ್ಕೆ ತುತ್ತಾಗಿ ಹೊಗೆ ರಾಶಿ ಸಮುದ್ರದ ಒಡಲು ಸೇರಿದರೆ, ಇತ್ತ ಬೀಚ್‌ ವೃತ್ತದ ಮೆಟ್ಟಿಲುಗಳು ಸಮುದ್ರ ಪಾಲಾಗುವ ಭೀತಿಯಲ್ಲಿವೆ.

ಇಲ್ಲಿದ್ದ ವೀಕ್ಷಣಾ ಗೋಪುರ ಗಾಳಿಯ ಹೊಡೆತಕ್ಕೆ ಸಿಲುಕಿ ಉರುಳಿ ಬಿದ್ದಿದೆ. ಬೀಚ್‌ ನ ಸೌಂದರ್ಯವನ್ನು ಹೆಚ್ಚಿಸುತ್ತಿದ್ದ ಹಾಗೂ ಇಲ್ಲಿಗೆ ಬರುವ ಪ್ರವಾಸಿಗರಿಗೆ ನೆರಳು ನೀಡುತ್ತಿದ್ದ ಬೃಹತ್‌ ತೆಂಗಿನ ಮರಗಳಲ್ಲಿ ನಾಲ್ಕೈದು ಈಗಾಗಲೇ ಉರುಳಿ ಬಿದ್ದು ಭೂಗತವಾಗಿವೆ. ತೀರದಲ್ಲಿ ನೆಟ್ಟಿರುವ ಸಸಿಗಳು ಸಮುದ್ರ ಪಾಲಾಗಿವೆ.

ಸಮುದ್ರ ಸೇರಿದ ಕಸ ಕಡ್ಡಿ, ಅಳಿದುಳಿದ ತ್ಯಾಜ್ಯ ರಾಶಿ ದಡದಲ್ಲಿ ಸಂಗ್ರಹವಾಗಿದೆ. ಸಮುದ್ರದ ಅಬ್ಬರದಿಂದಾಗಿ ಇದೀಗ ದಡಕ್ಕೂ ಕಾಲಿಡಲಾಗದೆ ದೂರದಲ್ಲೇ ನಿಂತು ಸಮುದ್ರ ವೀಕ್ಷಿಸುವ ಪರಿಸ್ಥಿತಿ ಬಂದೊ ದಗಿದೆ. ಹಲ ವಾರು ವರ್ಷಗಳ ಬಳಿಕ ಪಣಂಬೂರು ಬೀಚ್‌ ಇಷ್ಟು ದೊಡ್ಡ ಪ್ರಮಾ ಣದಲ್ಲಿ ಹಾಳಾಗಿದೆ.

ವ್ಯಾಪಾರಿ ಮಳಿಗೆಗಳ ಸ್ಥಳಾಂತರ

ಇಲ್ಲಿನ ಬೀಚ್‌ನಲ್ಲಿ ಹಲವಾರು ವ್ಯಾಪಾರ, ಆಹಾರ ಮಳಿಗೆಗಳಿದ್ದು ಭಾರೀ ಮಳೆ, ಕಡಲ್ಕೊರೆತಕ್ಕೆ ಸ್ಥಳಾಂತರ ಮಾಡಲಾಗಿದೆ. ತೆರೆಗಳು ರುದ್ರನರ್ತನಕ್ಕೆ ಸಮುದ್ರದ ಬದಿಯ ಉದ್ದಕ್ಕೂ ಆಳವಾದ ಹೊಂಡ ನಿರ್ಮಾಣವಾಗಿದೆ. ಇನ್ನು ಕೆಲವೇ ಮೀಟರ್‌ ದೂರದಲ್ಲಿ ಮೀನಕಳಿಯ ಬಳಿ ಕಡಲ್ಕೊರೆತ ಉಂಟಾಗಿರುವುದರ ಪರಿಣಾಮ ಪಣಂಬೂರು ಬೀಚ್‌ಗೂ ಆಗಿದೆ ಎಂಬುದು ಪರಿಣಿತರ ಅಭಿಪ್ರಾಯ. ಮೀನಕಳಿಯ ಭಾಗದಲ್ಲಿ ಕಾಂಕ್ರೀಟ್‌ ರಸ್ತೆ ಕುಸಿದಿದೆ ಮಾತ್ರವಲ್ಲ, ದಡದ ಸಮೀಪದವಿದ್ದ ಮೂರ್‍ನಾಲ್ಕು ಮನೆಗಳು ಭಾಗಶಃ ಹಾನಿಗೊಳಗಾಗಿವೆ.

ವೀಕ್ಷಣಾ ಗೋಪುರ ದುರಸ್ತಿಗೊಳ್ಳಬೇಕಿದೆ

ಮಳೆಗಾಲದ ಬಳಿಕ ನೈಸರ್ಗಿಕವಾಗಿ ಮರಳು ದಡದ ಮೇಲೆ ಬಿದ್ದು ಸರಿಯಾಗಬಹುದಾದರೂ ಇಲ್ಲಿನ ವೀಕ್ಷಣಾ ಗೋಪುರ, ಗುತ್ತು ಮನೆಯನ್ನು ದುರಸ್ತಿ ಪಡಿಸಲು ಪ್ರವಾಸೋದ್ಯಮ ಇಲಾಖೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಭಿವೃದಿಗೆ ಕ್ರಮ: ಕಳೆದ ಚಂಡಮಾರುತ ಸಮಯದಲ್ಲೂ ಬೀಚ್‌ನ ಬಹುತೇಕ ಭಾಗ ಹಾನಿಗೊಳಗಾಗಿತ್ತು. ಈ ಬಾರಿಯು ಸಮಸ್ಯೆಯಾಗಿದೆ. ಬೀಚ್‌ ನಿರ್ವಹಣೆಗೆ ಇದೀಗ ಇ ಟೆಂಡರ್‌ ಆಹ್ವಾನಿಸಲಾಗಿದ್ದು, ಆ. 18ರ ವರೆಗೆ ಸಲ್ಲಿಸಲು ಅವಕಾಶವಿದೆ. ಬೀಚ್‌ನಲ್ಲಿ ಅಭಿವೃದ್ಧಿಗೆ ಕಾಮಗಾರಿಗೆ ಪ್ರವಾಸೋದ್ಯಮ ಇಲಾಖೆ ಕ್ರಮ ಕೈಗೊಳ್ಳಲಿದೆ. – ಮಾಣಿಕ್ಯ, ಪ್ರವಾಸೋದ್ಯಮ ಉಪನಿರ್ದೇಶಕರು, ಮಂಗಳೂರು

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.