ಪಣಂಬೂರು: ಮಕ್ಕಳ ಸರ್ಫಿಂಗ್‌ ಸ್ಪರ್ಧೆ


Team Udayavani, May 20, 2019, 6:00 AM IST

b-19

ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ವಿಜೇತ ಸರ್ಫಿಂಗ್‌ ಪಟುಗಳಿಗೆ ಪ್ರಶಸ್ತಿ ವಿತರಿಸಿದರು.

ಪಣಂಬೂರು: ಇಲ್ಲಿನ ಕಡಲ ಕಿನಾರೆಯಲ್ಲಿ ಮಂತ್ರ ಗ್ರೋಮ್‌ ಸರ್ಚ್‌ ಎಂಬ ಮಕ್ಕಳ ಸರ್ಫಿಂಗ್‌ ಸ್ಪರ್ಧೆ ರವಿವಾರ ಜರಗಿತು. ಪ್ರತಿಭಾನ್ವಿತ ಯುವ ಸಫìರ್‌ಗಳನ್ನು ಹುಡುಕಿ ಅವರ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಎರಡನೇ ಬಾರಿಗೆ ಸರ್ಫಿಂಗ್‌ ಸ್ವಾಮಿ ಫೌಂಡೇಶನ್‌, ಮಂತ್ರ ಸರ್ಫ್‌ ಕ್ಲಬ್‌, ಅಡ್ವೆಂಚರ್‌ ವರ್ಕ್ಸ್, ಥಂಡರ್‌ ಮಂಕಿ, ಫೈಯರ್‌ವೈರ್‌ ಸರ್ಫ್‌ ಬೋರ್ಡ್‌ ಮುಂತಾದ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ಸುಮಾರು 30 ಸ್ಪರ್ಧಿಗಳು ಭಾಗವಹಿಸಿ ಕಡಲ ಅಲೆಗಳಲ್ಲಿ ಸಾಹಸ ಪ್ರದರ್ಶಿಸಿದರು. 13, 16 ವರ್ಷದೊಳಗಿನ, ಓಪನ್‌ ವಿಭಾಗ, ಮತ್ತು ಬಾಲಕಿಯ ವಿಭಾಗದಲ್ಲಿ ಒಟ್ಟು ಸ್ಪರ್ಧೆ ನಡೆಯಿತು. 7 ವರ್ಷದ ಮಕ್ಕಳಿಂದ ಹಿಡಿದು 15 ವರ್ಷದವರೆಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.

ಪ್ರೋತ್ಸಾಹ ಅಗತ್ಯ
ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ವಿಜೇತ ಸರ್ಫಿಂಗ್‌ ಪಟುಗಳಿಗೆ ಪ್ರಶಸ್ತಿ ವಿತರಿಸಿದರು. ವಿಜೇತರಿಗೆ ವಿಶೇಷ ಕ್ರೀಡಾ ಬ್ಯಾಗ್‌, ನಗದು, ಟ್ರೋಫಿ ನೀಡಲಾಯಿತು. ಪ್ರಶಸ್ತಿ ವಿತರಿಸಿ ಮಾತನಾಡಿದ ಜಿಲ್ಲಾ ಧಿಕಾರಿ ಅವರು, ಸರ್ಫಿಂಗ್‌ ವಿಶೇಷ ಸಾಹಸಮಯ ಕ್ರೀಡೆಯಾಗಿದ್ದು ಪ್ರೋತ್ಸಾಹ ಅಗತ್ಯ. ಮಂಗಳೂರಿನಲ್ಲಿ ಸರ್ಫಿಂಗ್‌ಗೆ ಸೂಕ್ತವಾದ ಕಡಲ ಕಿನಾರೆಗಳಿವೆ.

ಜಿಲ್ಲಾಡಳಿತದ ವತಿಯಿಂದ ಬೇಕಾದ ಎಲ್ಲ ಪ್ರೋತ್ಸಾಹ ನೀಡಲಾಗುವುದು. ಈ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ವಿದ್ಯೆಗೂ ಮಹತ್ವ ನೀಡಿ ಶಿಕ್ಷಣದಲ್ಲೂ ಮುಂದೆ ಬರಬೇಕು ಎಂದರು. ಸ್ವಾಮಿ ಪೌಂಡೇಷನ್‌ನ ಗೌರವ್‌ ಹೆಗ್ಡೆ ಮಾತನಾಡಿ, ಕಡಲ ಕಿನಾರೆಯ ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ತೋರ್ಪಡಿಸಲು ಇದೊಂದು ಒಳ್ಳೆಯ ಅವಕಾಶ ಕಲ್ಪಿಸಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಭಾನ್ವಿತರಿಗೆ ಮುಂದೆ ಉಚಿತ ತರಬೇತಿ ಕೊಡಿಸುತ್ತೇವೆ ಎಂದರು.

ಪಣಂಬೂರು ಬೀಚ್‌ನ ಸಿಇಒ ಯತೀಶ್‌ ಬೈಕಂಪಾಡಿ, ಉದ್ಯಮಿ ರಾಮ್‌ಮೋಹನ್‌ ಪೈ ಮಾರೂರು, ಮಂತ್ರ ಸರ್ಫಿಂಗ್‌, ಸ್ವಾಮಿ ಫೌಂಡೇಷನ್‌ ಮತ್ತಿತರರ ಸಂಘಟನೆಗಳ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

ಉಚಿತ ತರಬೇತಿ
ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಅವರಿಗೆ ಸರ್ಫಿಂಗ್‌ ಸ್ವಾಮಿ ಫೌಂಡೇಶನ್‌ ವತಿಯಿಂದ ಉಚಿತ ತರಬೇತಿ ವ್ಯವಸ್ಥೆ ಮಾಡಲಾಗಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆ ಗಳಲ್ಲಿ ಅವಕಾಶ ನೀಡಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.