
ನೋ ಪಾರ್ಕಿಂಗ್ ಜಾಗದಲ್ಲಿ ಪಾರ್ಕಿಂಗ್; ಪೊಲೀಸರಿಂದ ಅರಿವು
Team Udayavani, Nov 27, 2022, 12:29 PM IST

ಮಹಾನಗರ: ಕೆಲವು ಸಮಯಗಳಿಂದ ನಗರದ ಹಲವು ಕಡೆಗಳಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿತ್ತು.
ಇದೀಗ ಮಂಗಳೂರು ಸಂಚಾರ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ವಿವಿಧ ಕಡೆಗಳಲ್ಲಿ ಬ್ಯಾನರ್ ಅಳವಡಿಸುವ ಮೂಲಕ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ವೆನ್ಲಾಕ್ ಆಸ್ಪತ್ರೆ ಮುಂಭಾಗ, ಹಂಪನಕಟ್ಟೆಯ ಸಿಗ್ನಲ್, ಬೆಸೆಂಟ್ ಬಳಿ, ಕೆ.ಎಸ್. ರಾವ್ ರಸ್ತೆ ಸೇರಿ ಹಲವು ಪ್ರಯಾಣಿಕರು ಬಸ್ಗಾಗಿ ಕಾಯಬಾರದು ಮತ್ತು ಪ್ರಯಾಣಿಕರನ್ನು ಬಸ್ಗೆ ಹತ್ತಿಸಬಾರದು ಎಂದು ಸಂಚಾರಿ ಪೊಲೀಸರು ಈಗಾಗಲೇ ಸೂಚನೆ ನೀಡಿದ್ದರೂ ಅದು ಸಮರ್ಪಕವಾಗಿ ಪಾಲನೆಯಾಗುತ್ತಿರಲಿಲ್ಲ. ಈ ಹಿಂದೆ ಈ ಭಾಗದಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಮತ್ತು ಟೇಪ್ಗ್ಳನ್ನು ಹೆಚ್ಚಿನ ಕಡೆ ತೆಗೆಯಲಾಗಿತ್ತು. ಪರಿಣಾಮ, ಬಸ್ಗಳು ಇದೇ ಭಾಗದಲ್ಲಿ ನಿಲ್ಲುತ್ತಿದ್ದು, ಟ್ರಾಫಿಕ್ ಜಾಮ್ಗೆ ಕಾರಣವಾಗುತ್ತಿತ್ತು.
ಈ ಕುರಿತು ಉದಯವಾಣಿ ಸುದಿನ ಕೆಲವು ದಿನಗಳ ಹಿಂದೆ “ನೋ ಪಾರ್ಕಿಂಗ್ ಜಾಗದಲ್ಲಿ ಪಾರ್ಕಿಂಗ್’ ಎಂಬ ತಲೆಬರಹದಡಿ ವರದಿ ಪ್ರಕಟಿಸಿತ್ತು. ಇದೀಗ ನಗರದ ಹಲವು ಕಡೆಗಳಲ್ಲಿ ಪೊಲೀಸರು ಜಾಗೃತಿ ಬ್ಯಾನರ್ ಅಳವಡಿಸಿ, ಈ ರೀತಿ ನಿಯಮ ಪಾಲನೆ ಮಾಡದೇ ಇರುವ ವಾಹನಗಳ ಮೇಲೆ ನಿಗಾ ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಚಿನ್ನದ ಬ್ರೇಸ್ಲೆಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ

ಗ್ರಾಚ್ಯುಟಿಗೆ ಒಪ್ಪಿಗೆ: ಧರಣಿ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು

ಶಾಲಾ ಮಕ್ಕಳ ಸಮವಸ್ತ್ರ: ಸರಕಾರದ ವಿರುದ್ಧ ಎಚ್ಡಿಕೆ ಕಿಡಿ

ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ