ರಸ್ತೆ ವಿಸ್ತರಣೆಗೊಂಡರೂ ಫುಟ್‌ಪಾತ್‌ ಮೇಲೆಯೇ ಪಾರ್ಕಿಂಗ್‌


Team Udayavani, Oct 15, 2020, 10:26 PM IST

ರಸ್ತೆ ವಿಸ್ತರಣೆಗೊಂಡರೂ ಫುಟ್‌ಪಾತ್‌ ಮೇಲೆಯೇ ಪಾರ್ಕಿಂಗ್‌

ಲಾಲ್‌ಬಾಗ್‌ನಲ್ಲಿ ಫ‌ುಟ್‌ಪಾತ್‌ ಅನ್ನು ಸಂಪೂರ್ಣವಾಗಿ ಅತಿಕ್ರಮಿಸಿ ಕೊಂಡಿರುವ ವಾಹನಗಳು.

ಮಹಾನಗರ: ನಗರದ ಹಲವೆಡೆ ಹೊಸದಾಗಿ ನಿರ್ಮಾಣಗೊಂಡಿರುವ ಫ‌ುಟ್‌ಪಾತ್‌ಗಳ ಪೈಕಿ ಬಹುತೇಕ ವಾಹನಗಳ ಪಾರ್ಕಿಂಗ್‌ಗೆ ಬಳಕೆಯಾಗುತ್ತಿವೆ!

ವಿಸ್ತರಿಸಲಾದ ರಸ್ತೆಗಳು ಈಗಾಗಲೇ ಅನಧಿಕೃತ ವಾಹನ ಪಾರ್ಕಿಂಗ್‌ ಸ್ಥಳವಾಗಿ ಮಾರ್ಪಟ್ಟಿವೆ. ಇದೀಗ ಹೊಸದಾಗಿ ನಿರ್ಮಾಣಗೊಂಡಿರುವ ಫುಟ್‌ಪಾತ್‌ಗಳು ಕೂಡ ವಾಹನಗಳ ನಿಲುಗಡೆ ತಾಣವಾಗುತ್ತಿವೆ. ಇದರಿಂದ ಪಾದಚಾರಿಗಳು ರಸ್ತೆಯಲ್ಲಿಯೇ ಅಪಾಯಕಾರಿಯಾಗಿ ನಡೆದಾಡುವ ಸ್ಥಿತಿ ಉಂಟಾಗಿದೆ.

ಫುಟ್‌ಪಾತ್‌ ನಿರ್ಮಿಸಿದ್ದು ಏತಕ್ಕಾಗಿ?
ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಕಡೆಯಿಂದ ಲಾÇಬಾಗ್‌ ಕಡೆಗೆ, ಅಲ್ಲಿಂದ ಮುಂದಕ್ಕೆ ಬಲ್ಲಾಳ್‌ಬಾಗ್‌ ಕಡೆಗೆ ಬರುವ ರಸ್ತೆ ಪಾದಚಾರಿಗಳಿಗೆ ಅತ್ಯಂತ ಅಪಾಯ ಕಾರಿಯಾಗಿ ಪರಿಣಮಿಸಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಹೊರಡುವ ಪಾದಚಾರಿಗಳು ಆರಂಭದಲ್ಲಿ ಫುಟ್‌ಪಾತ್‌ ಇಲ್ಲದೇ ತೊಂದರೆಗೆ ಸಿಲುಕುತ್ತಾರೆ. ಇಲ್ಲಿ ರಸ್ತೆ ವಿಸ್ತರಣೆಯಾದರೂ ಫುಟ್‌ಪಾತ್‌ ನಿರ್ಮಾಣವಾಗಿಲ್ಲ. ವಿಸ್ತರಣೆಗೊಂಡ ರಸ್ತೆಯಲ್ಲಿ ವಾಹನಗಳನ್ನು ಅಡ್ಡಾದಿಡ್ಡಿ ಯಾಗಿ ನಿಲ್ಲಿಸಲಾಗುತ್ತದೆ. ಪಾಲಿಕೆ ಕಚೇರಿ ಕಟ್ಟಡದ ಎದುರಿನ ಕಟ್ಟಡದ ಪಕ್ಕದಿಂದ ಮುಂದೆ ಸುವ್ಯವಸ್ಥಿತ ಫುಟ್‌ಪಾತ್‌ ನಿರ್ಮಿಸಲಾಗಿದೆ. ಆದರೆ ಫುಟ್‌ಪಾತ್‌ನ್ನು ಸಂಪೂರ್ಣವಾಗಿ ವಾಹನಗಳು ಆಕ್ರಮಿಸಿಕೊಂಡಿರುತ್ತವೆ.

ಫ‌ುಟ್‌ಪಾತ್‌ಗೆ ತಡೆ
ಕೆಲವು ಕಟ್ಟಡಗಳು/ವಾಣಿಜ್ಯ ಮಳಿಗೆಗಳ ಎದುರು ಸಾಮಗ್ರಿಗಳನ್ನು ಫ‌ುಟ್‌ಪಾತ್‌ನಲ್ಲಿಯೇ ಇಟ್ಟು ಪಾದಚಾರಿಗಳು ಫ‌ುಟ್‌ಪಾತ್‌ ಬಳಸದಂತೆ ಮಾಡಲಾಗಿದೆ. ತಿಂಗಳ ಹಿಂದೆಯಷ್ಟೇ ನಿರ್ಮಾಣಗೊಂಡ ಫ‌ುಟ್‌ಪಾತ್‌ ಕೂಡ ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗುತ್ತಿದೆ. ಇನ್ನು ಕೆಲವೆಡೆ ಫ‌ುಟ್‌ಪಾತ್‌ಗಳ ಮಧ್ಯೆ ರಸ್ತೆಗಾಗಿ ಸ್ಥಳಾವಕಾಶ ಬಿಟ್ಟು ಸಂಪರ್ಕವೇ ಇಲ್ಲದಿರುವುದರಿಂದ ಅಂತಹ ಸ್ಥಳಗಳಲ್ಲಿಯೂ ನಡೆದಾಡುವುದು ಅಸಾಧ್ಯ.

ಎತ್ತರವಿಲ್ಲದ ಫ‌ುಟ್‌ಪಾತ್‌
ಹಲವೆಡೆ ಫ‌ುಟ್‌ಪಾತ್‌ಗಳನ್ನು ರಸ್ತೆಗೆ ಸಮತಟ್ಟಾಗಿ ನಿರ್ಮಿಸಲಾಗಿದೆ. ಹಾಗಾಗಿ ವಾಹನಗಳನ್ನು ಸುಲಭವಾಗಿ ಫ‌ುಟ್‌ಪಾತ್‌ಗಳಲ್ಲಿ ನಿಲ್ಲಿಸಲಾಗುತ್ತಿದೆ. ಇನ್ನು ಕೆಲವೆಡೆ ತುಸು ಎತ್ತರದಲ್ಲಿದ್ದರೂ ಅದು ವಾಹನಗಳು ಏರುವಷ್ಟೇ ಎತ್ತರವಿದೆ. ಫ‌ುಟ್‌ಪಾತ್‌ಗಳನ್ನು ನಿರ್ಮಿಸುವಾಗಲೇ ವಾಹನಗಳ ನಿಲುಗಡೆಗೆ ಸೂಕ್ತವಾಗಿರುವ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ ಎಂದು ಅನೇಕ ಮಂದಿ ಪಾದಚಾರಿಗಳು ದೂರಿದ್ದಾರೆ.

ಸಂಚಾರಕ್ಕೆ ತೊಡಕು
ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಫ‌ುಟ್‌ಪಾತ್‌ಗಳು ವಾಹನಗಳ ಪಾರ್ಕಿಂಗ್‌ಗೆ ಬಳಕೆಯಾಗುತ್ತಿರುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ಜೀವಭಯದಲ್ಲೇ ನಡೆದಾಡುವುದು ಅನಿವಾರ್ಯವಾಗಿದೆ. ಅಲ್ಲದೆ ವಾಹನಗಳ ಸುಗಮ ಸಂಚಾರಕ್ಕೂ ತೊಡಕಾಗುತ್ತಿದೆ. ವಿಸ್ತರಣೆಗೊಂಡ ರಸ್ತೆಯ ಅಂಚಿನಲ್ಲಿ ವಾಹನಗಳ ಪಾರ್ಕಿಂಗ್‌ ಅವಕಾಶ ನೀಡಿದರೂ ಫ‌ುಟ್‌ಪಾತ್‌ಗಳನ್ನು ಮಾತ್ರ ಜನರ ಓಡಾಟಕ್ಕೆ ಮುಕ್ತವಾಗಿರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಅನಧಿಕೃತ ಪಾರ್ಕಿಂಗ್‌ ತೆರವು
ರಸ್ತೆ ಮಾತ್ರವಲ್ಲದೆ ಫ‌ುಟ್‌ಪಾತ್‌ಗಳನ್ನು ಆಕ್ರಮಿಸಿ ಪಾರ್ಕಿಂಗ್‌ ಮಾಡುವ ವಾಹನ ಸವಾರರು/ ಚಾಲಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಜನರ ಓಡಾಟಕ್ಕೆ ತೊಂದರೆಯಾಗುವಂತೆ ವಾಣಿಜ್ಯ ಮಳಿಗೆಗಳು ಸಾಮಗ್ರಿಗಳನ್ನು ಇಟ್ಟರೆ ಅಂತವರ ವಿರುದ್ಧ ಪಾಲಿಕೆ ಹಾಗೂ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ.
-ನಟರಾಜ್‌, ಎಸಿಪಿ ಸಂಚಾರಿ ಪೊಲೀಸ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.