ಮಂಗಳೂರು ಪೊಲೀಸರ ಕೋವಿಡ್ ಕಾಟ: ಗ್ರಾಮಾಂತರ ಠಾಣಾ ಸಿಬ್ಬಂದಿಗೆ ಸೋಂಕು ದೃಢ
Team Udayavani, Jun 30, 2020, 10:59 AM IST
ಮಂಗಳೂರು: ಕೋವಿಡ್-19 ಸೋಂಕಿನಿಂದ ಜನರನ್ನು ರಕ್ಷಿಸಲು ಹಗಲಿರುಳು ದುಡಿಯುತ್ತಿದ್ದ ಆರಕ್ಷಕ ಸಿಬ್ಬಂದಿಗೆ ಕೋವಿಡ್-19 ಸೋಂಕು ಕಾಟ ಆರಂಭವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಿಗೆ ಈಗಾಗಲೇ ಲಗ್ಗೆಯಿಟ್ಟಿರುವ ಕೋವಿಡ್ ಸೋಂಕು ಮತ್ತೆ ತನ್ನ ಜಾಲವನ್ನು ವಿಸ್ತರಿಸಿದೆ.
ಇಂದು ಮಂಗಳೂರು ಹೊರವಲಯದ ವಾಮಂಜೂರು ಗ್ರಾಮಾಂತರ ಠಾಣಾ ಸಿಬ್ಬಂದಿ ಯೋರ್ವರಿಗೆ ಕೋವಿಡ್-19 ಪಾಸಿಟಿವ್ ವರದಿಯಾಗಿದೆ. ಇವರು ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ವೇಳೆ ಆರೋಪಿಯೊಬ್ಬನಿಗೆ ಕೋವಿಡ್-19 ಸೋಂಕು ತಗುಲಿತ್ತು. ನಂತರ ಉಳ್ಳಾಲ ಠಾಣೆಯ ಎಸ್ ಐ ಸೇರಿದಂತೆ ಹತ್ತು ಮಂದಿಗೆ ಸೋಂಕು ತಾಗಿತ್ತು. ಈತನ ಸಂಪರ್ಕದಿಂದಲೇ ಈ ಸಿಬ್ಬಂದಿಗೂ ಸೋಂಕು ತಾಗಿರುವ ಶಂಕೆ ವ್ಯಕ್ತವಾಗಿದೆ. ಇವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಕೈದಿಗೆ ಸೋಂಕು: ಮಂಗಳೂರು ಕೇಂದ್ರ ಕಾರಾಗೃಹದ ಖೈದಿಯೋರ್ವನಿಗೆ ಕೋವಿಡ್-19 ಸೋಂಕು ತಾಗಿರುವ ಬಗ್ಗೆ ವರದಿಯಾಗಿದೆ. ಈ ಖೈದಿ ಮನೋರೋಗದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈತ ವೆನ್ಲಾಕ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಸಿಬ್ಬಂದಿಯಿಂದ ಸೋಂಕು ಹರಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಖೈದಿ ಜೊತೆ ಇದ್ದ ಪೊಲೀಸ್ ಸಿಬ್ಬಂದಿ ಕ್ವಾರೆಂಟೈನ್ ನಲ್ಲಿರಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು