ವ್ಯಾಪ‌ಕ ಭದ್ರತೆ; ಕರಾವಳಿಯಲ್ಲಿ ಶಾಂತ ಮತದಾನ


Team Udayavani, Apr 19, 2019, 10:36 AM IST

URVA

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗುರುವಾರ ಬಿರುಸಿನ ಮತ್ತು ಶಾಂತಿಯುತ ಮತದಾನವಾಗಿದ್ದು, ಒಟ್ಟು ಶೇ.77.78ರಷ್ಟು ಪ್ರಮಾಣದ ಮತದಾನವಾಗಿದೆ. 2014ಕ್ಕೆ ಹೋಲಿಸಿದರೆ ಈ ಬಾರಿ ಮತದಾನದಲ್ಲಿ ತುಸು ಹೆಚ್ಚಳವಾಗಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ.77.19 ಮತದಾನ ವಾಗಿದ್ದು, ಅದು ರಾಜ್ಯದಲ್ಲೇ ಅತಿಹೆಚ್ಚು ಎಂಬ ಹೆಗ್ಗಳಿಕೆ ಪಡೆದಿತ್ತು. ಅಷ್ಟೇ ಅಲ್ಲ, 1952ರಿಂದ ಜಿಲ್ಲೆಯಲ್ಲಿ ಆಗಿದ್ದ ಅತ್ಯಧಿಕ ಶೇಕಡಾವಾರು ಪ್ರಮಾಣವಾಗಿತ್ತು. ಈ ಬಾರಿ 2014ರ ದಾಖಲೆಯನ್ನು ಮುರಿದಿರುವುದು ಗಮನಾರ್ಹ.

ಗುರುವಾರ ಬೆಳಗ್ಗೆ 6 ಗಂಟೆಗೆ ಜಿಲ್ಲೆಯ ಎಲ್ಲ 1,861 ಬೂತ್‌ಗಳಲ್ಲಿ ಅಭ್ಯರ್ಥಿಗಳ ಬೂತ್‌ ಎಜೆಂಟರ ಸಮ್ಮುಖದಲ್ಲಿ ಅಣಕು ಮತದಾನ ನಡೆಸಿ ಪರಿಶೀಲಿಸಲಾಯಿತು. 7 ಗಂಟೆಗೆ ಮತದಾನಕ್ಕೆ ಅನುವು ಮಾಡಿ ಕೊಡಲಾಯಿತು. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾದ ವೇಳೆಯಿಂದಲೂ ಮತದಾರರು ಬಹಳ ಉತ್ಸುಕತೆಯಿಂದ ಸರದಿಯಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲ ಮತಗಟ್ಟೆಗಳಲ್ಲೂ ಕಂಡುಬಂತು.

ಶಾಂತಿಯುತ ಮತದಾನ
ಮತದಾನಕ್ಕೆ ಸಂಜೆ 6 ಗಂಟೆಗೆ ಗಡುವು ನೀಡಲಾಗಿತ್ತು. ಆ ಬಳಿಕ ಸರದಿಯಲ್ಲಿದ್ದ ಮತದಾರರಿಗೆ ಚೀಟಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಕೆಲವು ಕಡೆ 7 ಗಂಟೆಯ ವರೆಗೆ ಮುಂದುವರಿಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದೆ ಶಾಂತಿಯುತ ಮತದಾನ ಜರಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ವ್ಯಾಪಕ ಕ್ರಮಗಳನ್ನು ಕೈಗೊಂಡಿತ್ತು.
ಕ್ಷೇತ್ರದಲ್ಲಿ ಒಟ್ಟು 16 ಕಂಟ್ರೋಲ್‌ ಯೂನಿಟ್‌, 16 ಬ್ಯಾಲೆಟ್‌ ಯೂನಿಟ್‌ ಮತ್ತು 38 ವಿವಿಪ್ಯಾಟ್‌ಗಳಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಅವುಗಳನ್ನು ಬದ ಲಾಯಿಸಲಾಯಿತು. ಎ.18ರಂದು ಜಿಲ್ಲೆಯಲ್ಲಿ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಮದುವೆ ಸಮಾರಂಭ ಇದ್ದವು. ಮದುವೆಯ ನಡುವೆಯೂ ವಧೂವರರು ಮಂಟಪಕ್ಕೆ ತೆರಳುವ ಮುನ್ನ ಅಥವಾ ವಿವಾಹದ ಬಳಿಕ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಿ ಬದ್ಧತೆ ಮೆರೆದ ಘಟನೆಗಳು ನಡೆದಿವೆ.

ಮಂಗಳೂರಿನ ಚಿಲಿಂಬಿಯ 100 ವರ್ಷದ ಕೇಶವ ಕುಡ್ವಾ ಅವರು ಲೇಡಿಹಿಲ್‌ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಂಟ್ವಾಳ ತಾಲೂಕಿನ ಪೇರಾಜೆಯ 106 ವರ್ಷದ ಲಕ್ಷ್ಮೀ ಅವರು ಪೇರಾಜೆ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಕಳೆದ ಬಾರಿಗಿಂತ ಶೇ. 0.06 ಅಧಿಕ
2014ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸುಮಾರು ಶೇ. 0.6 ರಷ್ಟು ಹೆಚ್ಚು ಮತದಾನವಾಗಿದೆ. ಪೂರ್ಣ ಅಂಕಿಅಂಶಗಳು ಲಭ್ಯತೆಗೆ ಬಾಕಿ ಇದ್ದು ಇದರಲ್ಲಿ ತುಸು ಹೆಚ್ಚಳವಾಗುವ ಸಾಧ್ಯತೆಗಳಿವೆ. 2014 ರಲ್ಲಿ ಶೇ.77.19 ಮತದಾನವಾಗಿತ್ತು. 2018ರ ವಿಧಾನಸಭಾ ಚುನಾವಣೆ ಹೋಲಿಸಿದರೆ ಈ ಬಾರಿ ಶೇ 0.38ರಷ್ಟು ಕಡಿಮೆಯಾಗಿದೆ. 2018 ರಲ್ಲಿ ಶೇ. 77.63 ಮತದಾನವಾಗಿತ್ತು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.