Ladyhill ಅಪಘಾತ ಪ್ರಕರಣ: ಉನ್ನತ ತನಿಖೆ, ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
ಕಾರು ಢಿಕ್ಕಿಯಾಗಿ ಯುವತಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದರು
Team Udayavani, Nov 19, 2023, 8:31 PM IST
ಮಂಗಳೂರು: ಕಳೆದ ತಿಂಗಳು ನಗರದ ಲೇಡಿಹಿಲ್ ಬಳಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರು ಢಿಕ್ಕಿಯಾಗಿ ಓರ್ವಳು ಯುವತಿ ಮೃತಪಟ್ಟು ನಾಲ್ವರು ಗಾಯಗೊಂಡ ಪ್ರಕರಣದ ಉನ್ನತ ಮಟ್ಟದ ತನಿಖೆಯಾಗಬೇಕು, ಮೃತ ಯುವತಿಯ ಕುಟುಂಬಿಕರಿಗೆ ಸರಕಾರ ಗರಿಷ್ಠ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರವಿವಾರ ಸಂಜೆ ಬೋಂದೆಲ್ ನಲ್ಲಿ ಸರ್ವಜ್ಞ ವೃತ್ತದ ಬಳಿ ಪ್ರತಿಭಟನೆ ನಡೆಯಿತು.
ಮೃತಪಟ್ಟ ರೂಪಶ್ರೀ ಅವರ ಭಾವಚಿತ್ರಕ್ಕೆ ಆಕೆಯ ತಾಯಿ ದೀಪ ಬೆಳಗಿ ಪ್ರತಿಭಟನೆಗೆ ಚಾಲನೆ ನೀಡಿದರು.ಘಟನೆಯ ಬಗ್ಗೆ ಸರಿಯಾದ ತನಿಖೆಯಾಗಿಲ್ಲ.ಜಿಲ್ಲಾಡಳಿತ, ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ. ರೂಪಶ್ರೀ ಸಾವಿಗೆ ನ್ಯಾಯ ಒದಗಿಸಿಕೊಡಬೇಕು. ಪಾದಚಾರಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ನೂರಾರು ಪ್ರತಿಭಟನಾಕಾರರು ದೀಪದೊಂದಿಗೆ ಮೌನ ಮೆರವಣಿಗೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?