ವಿವಿಧೆಡೆ ಮಾಸ್ಕ್ ಧರಿಸದವರಿಗೆ ದಂಡ
Team Udayavani, Sep 28, 2020, 10:32 PM IST
ಸುರತ್ಕಲ್: ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಯಿತು.
ಮಹಾನಗರ/ಸುರತ್ಕಲ್: ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಪ್ರಕ್ರಿಯೆ ಮುಂದುವರಿದಿದ್ದು, ಸೋಮವಾರ 6 ಮಂದಿಗೆ ದಂಡ ವಿಧಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಹಿರಿಯ, ಕಿರಿಯ ನಿರೀಕ್ಷಕರು ಕಾರ್ಯಾಚರಣೆ ನಡೆಸಿದರು.
ಸಾವಿರ ರೂ. ದಂಡ ಸಂಗ್ರಹ
ಸುರತ್ಕಲ್ ಪರಿಸರದಲ್ಲಿ ಪಾಲಿಕೆಯ ಆರೋಗ್ಯ ವಿಭಾಗ ಹಾಗೂ ವಲಯ ಆಯುಕ್ತ ಸದಾಶಿವ ಅವರ ನೇತೃತ್ವದಲ್ಲಿ ಸೋಮವಾರ ಮಾಸ್ಕ್ ಧರಿಸದವರಿಗೆ ದಂಡ ಹಾಕಲಾಯಿತು. ಈ ಪ್ರದೇಶದಲ್ಲಿ ಒಟ್ಟು 1,000 ರೂ.ಗಳನ್ನು ಸಂಗ್ರಹಿಸಲಾಗಿದೆ. ಮಾಸ್ಕ್ ಧರಿಸದ ಸುರತ್ಕಲ್ ವ್ಯಾಪ್ತಿಯ ಸಾರ್ವಜನಿಕರಿಗೆ, ಅಂಗಡಿ ಮಾಲಕರಿಗೆ ಮಾಸ್ಕ್ ನೀಡಿ ದಂಡ ವಿ ಧಿಸಲಾಯಿತು. ಬಡವರಿಗೆ ದಂಡ ವಿಧಿ ಸದೆ ಕೊರೊನಾ ಬಗ್ಗೆ ಅರಿವು ಮೂಡಿಸಿ ಉಚಿತ ಮಾಸ್ಕ್ ನೀಡಲಾಯಿತು. ಈ ಕಾರ್ಯಾಚರಣೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಶುಶಾಂತ್ ಮತ್ತು ಪರಿಸರ ಅಭಿಯಂತರ ದಯಾನಂದ ಪೂಜಾರಿ, ಹೆಲ್ತ್ ಸೂಪರ್ವೈಸರ್ ಪ್ರವೀಣ್, ಯೋಗೀಶ್, ಸುಭಾಶ್ ಭಾಗವಹಿಸಿದ್ದರು.
ಮೂಡುಬಿದಿರೆ: ಮಾಸ್ಕ್ ಧರಿಸದ 7 ಮಂದಿಗೆ ದಂಡ
ಮೂಡುಬಿದಿರೆ: ಸೋಮವಾರ ಮಾಸ್ಕ್ ಧರಿಸದ 7 ಮಂದಿಗೆ ತಲಾ 200 ರೂ.ಗಳಂತೆ ದಂಡ ವಿಧಿಸಲಾಗಿದೆ ಎಂದು ಮುಖ್ಯಾಧಿಕಾರಿ ಇಂದು ಎಂ. ತಿಳಿಸಿದ್ದಾರೆ. ಕಚೇರಿ ಕೆಲಸದ ಒತ್ತಡವಿದ್ದುದರಿಂದ ಹೆಚ್ಚು ಓಡಾಟ ನಡೆಸಲು ಸಾಧ್ಯವಾಗಿಲ್ಲ. ಮಂಗಳವಾರದಿಂದ ಮತ್ತೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಉಳ್ಳಾಲ: 10,800 ರೂ. ದಂಡ ಸಂಗ್ರಹ
ಉಳ್ಳಾಲ: ಮಂಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ ಮತ್ತು ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್-19 ತಡೆ ನಿಯಮ ಉಲ್ಲಂಘಿಸಿದವರಿಂದ ಸೋಮವಾರ ಒಟ್ಟು 10,800 ರೂ. ದಂಡ ಸಂಗ್ರಹಿಸಲಾಗಿದೆ.
ನಾಲ್ಕು ದಿನಗಳಿಂದ ಮಾಸ್ಕ್ ಧರಿಸದೆ, ನಿಯಾಮವಳಿಯನ್ನು ಉಲ್ಲಂಘಿಸುತ್ತಿರುವವರ ದಂಡ ವಸೂಲಾತಿ ನಡೆಸುತ್ತಿದ್ದು, ಸೋಮವಾರ ಉಳ್ಳಾಲ ನಗರಸಭಾ ಪೌರಾಯುಕ್ತ ರಾಯಪ್ಪ ಅವರ ನೇತೃತ್ವದಲ್ಲಿ ಉಳ್ಳಾಲ ವ್ಯಾಪ್ತಿಯಲ್ಲಿ 8,000ರೂ. ದಂಡ ವಸೂಲಿಯಾದರೆ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ ನೇತೃತ್ವದಲ್ಲಿ 1,800 ರೂ. ಮತ್ತು ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಭಾಕರ ಎಂ. ಪಾಟೀಲ ಅವರ ನೇತೃತ್ವದಲ್ಲಿ 1,000 ರೂ. ದಂಡ ವಸೂಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ