ಸುರತ್ಕಲ್ ಪ್ರತ್ಯೇಕ ಅಪಘಾತ: ಪಿಕಪ್ ಪಲ್ಟಿ, ಕಾರಿಗೆ ಗುದ್ದಿದ ಲಾರಿ
Team Udayavani, Mar 7, 2019, 8:07 AM IST
ಸುರತ್ಕಲ್: ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ವೇಗವಾಗಿ ಹೋದ ಪಿಕಪ್ ವಾಹನವೊಂದು ಪಲ್ಟಿಯಾದ ಘಟನೆ ಗುರುವಾರ ಮಧ್ಯಾಹ್ನ ಮಂಗಳೂರಿನ ಕೂಳೂರಿನಲ್ಲಿ ನಡೆದಿದೆ. ಇನ್ನೊಂದು ಪ್ರಕರಣದಲ್ಲಿ ಸ್ಟಿಯರಿಂಗ್ ತುಂಡಾದ ಕಾರಣ ಲಾರಿಯೊಂದು ಟ್ಯಾಂಕರ್ ಮತ್ತು ಕಾರಿಗೆ ಗುದ್ದಿದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಪಿಕಪ್ ವಾಹನವನ್ನು ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಆದರೆ ಚಾಲಕ ನಿಲ್ಲಿಸಿದೆ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದುಕೂಳೂರಿನಲ್ಲಿ ವಾಹನ ಪಲ್ಟಿಯಾಗಿದೆ. ಚಾಲಕನ್ನು ಜನರು ಹಿಡಿದು ಪೊಲೀಸರಿಗೆ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಸರಣಿ ಅಪಘಾತ ನಡೆಸಿದ ಲಾರಿ: ಉಡುಪಿ- ಮಂಗಳೂರು ಹೆದ್ದಾರಿಯಲ್ಲಿ ಮಂಗಳೂರು ಕಡೆ ಸಾಗುತತಿದ್ದ ಲಾರಿಯೊಂದು ಸ್ಟಿಯರಿಂಗ್ ತುಂಡಾಗಿ ಸರಣಿ ಅಪಘಾತಕ್ಕೆ ಕಾರಣವಾಗಿದೆ.
ಸ್ಟಿಯರಿಂಗ್ ತುಂಡಾದ ಕಾರಣ ಸುರತ್ಕಲ್ ನ ಹೊಸಬೆಟ್ಟು ಮತ್ತು ಬೈಕಂಪಾಡಿಯಲ್ಲಿ ಒಂದು ಕಾರು ಮತ್ತು ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಯಾವುದೇ ಜೀವಹಾನಿಯ ಬಗ್ಗೆ ವರದಿಯಾಗಿಲ್ಲ. ಮಂಗಳೂರು ಉತ್ತರ ಸಂಚಾರಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ