ಪಿಲಿಕುಳ ನಿಸರ್ಗಧಾಮ: ಸದ್ಯಕ್ಕೆ ಎಲ್ಲವೂ ಕ್ಷೇಮ !


Team Udayavani, Apr 6, 2017, 3:32 PM IST

06-REPORTER-22.jpg

ಪಿಲಿಕುಳ: ಮಂಗಳೂರು ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ನೀರಿನ ಅಭಾವ ಕಂಡುಬರುತ್ತಿದ್ದರೂ ಪ್ರತಿಷ್ಠಿತ ಪ್ರವಾಸಿತಾಣ ಡಾ| ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ. ಹಾಗಾಗಿ ಇಲ್ಲಿನ ಪ್ರಾಣಿಗಳು ನಿರಾಂತಕವಾಗಿವೆ. ಮೇ ಅಂತ್ಯದವರೆಗೂ ಮಳೆ ಬಾರದೇ ಇದ್ದಲ್ಲಿ ನೀರಿನ ಸಮಸ್ಯೆ ಎದುರಾಗಬಹುದೆಂಬ ಆತಂಕವಿದೆ.

ಸರಾಸರಿ 3.5 ಲಕ್ಷ ಲೀ. ನೀರು.!
ಪ್ರಾಣಿಗಳಿಗೆ ಕುಡಿಯುವ ನೀರು, ಗಾರ್ಡನ್‌ನ ಗಿಡಗಳಿಗೆ ನೀರು ಹಾಗೂ ಪ್ರವಾಸಿಗರಿಗೆ ಕುಡಿಯುವ ನೀರು ಸಹಿತ ದಿನಕ್ಕೆ ಸರಾಸರಿ 3.5 ಲಕ್ಷ ಲೀ. ನೀರು ಬೇಕು. ಪ್ರಾಣಿಗಳು ಹಾಗೂ ಪ್ರವಾಸಿಗರಿಗೆ ಗುರುಪುರ ಫ‌ಲ್ಗುಣಿ ನದಿಯಿಂದ ದಿನಕ್ಕೆ 2 ಲಕ್ಷ ಲೀ. ನೀರನ್ನು ಜಾಕ್‌ವೆಲ್‌ ಮೂಲಕ ಸಂಗ್ರಹಿಸಿ, ಶುದ್ಧೀಕರಿಸಿ ಬಳಿಕ ಕುಡಿಯುವ ಉದ್ದೇಶಕ್ಕೆ ಬಳಸಲಾಗುತ್ತದೆ. ಗಾರ್ಡನ್‌ಗಳಿಗೆ ಪಾಲಿಕೆಯ ವ್ಯಾಪ್ತಿಯ ತ್ಯಾಜ್ಯ ನೀರನ್ನು ಖಾಸಗಿ ಸಂಸ್ಥೆಯ ಮೂಲಕ 1.5 ಲಕ್ಷ ಲೀ. ಶುದ್ಧೀಕರಿಸಿ ಬಳಸಲಾಗುತ್ತದೆ. ಹೀಗಾಗಿ ಪ್ರಸ್ತುತ ನೀರಿನ ಅಭಾವ ಕಂಡುಬಂದಿಲ್ಲ.  

ಕೊಳವೆಬಾವಿಗಳು
ಕುಡಿಯಲು ಹಾಗೂ ಗಿಡಗಳಿಗೆ ಪ್ರತ್ಯೇಕ ಮೂಲಗಳಿಂದ ನೀರನ್ನು ಬಳಸಲಾಗುತ್ತಿದ್ದು, ಎಲ್ಲಿ ಕೊರತೆ ಬಂದರೂ ಇಲ್ಲಿನ 4 ಕೊಳವೆಬಾವಿಗಳಿಂದ ನೀರು ಪೂರೈಸಲಾಗುವುದು. 2 ಲಕ್ಷ ಲೀ. ಹಾಗೂ 1.5 ಲಕ್ಷ ಲೀ. ಸಾಮರ್ಥ್ಯದ 2 ಅಂಡರ್‌ಗ್ರೌಂಡ್‌ ಟ್ಯಾಂಕ್‌ಗಳಿವೆ. ಜತೆಗೆ ಇಲ್ಲಿನ ಕೆರೆಗಳಲ್ಲೂ ಸಾಕಷ್ಟು ನೀರಿದ್ದು, ಅದನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿಲ್ಲ. ನೀರು ಇಂಗಲು ಇದು ಉತ್ತಮವಾದ ಮಾರ್ಗ.

ಹೊಸ ಟ್ಯಾಂಕ್‌ ನಿರ್ಮಾಣ
ಪ್ರಸ್ತುತ ನೀರಿನ ಅಗತ್ಯ ಈಡೇರಿಸಿಕೊಳ್ಳಲು ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ 1 ಲಕ್ಷ ಲೀ. ಸಾಮರ್ಥ್ಯದ ನೀರಿನ ಟ್ಯಾಂಕ್‌ ನಿರ್ಮಿಸಲಾಗುತ್ತಿದೆ. ಇದಕ್ಕೆ ಗುರುಪುರ ನದಿಯಿಂದ ನೀರು ಪೂರೈಕೆಯಾಗಲಿದ್ದು, ಒಂದಷ್ಟು ಬೇಡಿಕೆಯನ್ನು ಈಡೇರಿಸಲಿದೆ ಎನ್ನುತ್ತಾರೆ ಅಧಿಕಾರಿಗಳು.

ಬೇಸಗೆ ರಜೆ: ಪ್ರವಾಸಿಗರ ಸಂಖ್ಯೆ ಹೆಚ್ಚಳ
ಪ್ರಸ್ತುತ ಬೇಸಗೆ ರಜೆ ಸಮೀಪಿಸುತ್ತಿದ್ದು, ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗತೊಡಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಇರುವ ಎಪ್ರಿಲ್‌-ಮೇ, ನವೆಂಬರ್‌-ಡಿಸೆಂಬರ್‌ ತಿಂಗಳಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚು. ಆದ ಕಾರಣ ನೀರಿನ ಬೇಡಿಕೆಯೂ ಹೆಚ್ಚುತ್ತದೆ. ಸರಾಸರಿ ಲೆಕ್ಕಾಚಾರದ ಪ್ರಕಾರ ಶನಿವಾರ-ರವಿವಾರ ಪ್ರವಾಸಿಗರ ಸಂಖ್ಯೆ 2 ಸಾವಿರ ಇದ್ದರೆ, ಉಳಿದ ದಿನಗಳಲ್ಲಿ 400ರಿಂದ 500 ಮಂದಿ ಭೇಟಿ ನೀಡುತ್ತಾರೆ.

ಸದ್ಯಕ್ಕೆ ನೀರಿನ ಅಭಾವವಿಲ್ಲ
ಸದ್ಯಕ್ಕೆ ನೀರಿನ ಅಭಾವ ಕಂಡುಬಂದಿಲ್ಲ. ವಿವಿಧ ಮೂಲಗಳಿಂದ ನೀರನ್ನು ನಿರ್ವಹಿಸುತ್ತಿದ್ದೇವೆ. ಒಂದು ಹೊಸ ಟ್ಯಾಂಕನ್ನೂ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಬೇಸಗೆ ರಜೆ ಆಗಮಿಸುತ್ತಿದ್ದು, ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ನೀರಿನ ಬೇಡಿಕೆಯೂ ಸಹಜವಾಗಿಯೇ ಹೆಚ್ಚು.
ಪ್ರಸನ್ನ ವಿ., ಕಾರ್ಯನಿರ್ವಾಹಕ ನಿರ್ದೇಶಕರು

ಕಿರಣ್‌ ಸರಪಾಡಿ 

ಟಾಪ್ ನ್ಯೂಸ್

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.