
ಜೂನ್ನಲ್ಲಿಯೇ ಪ್ಲಾಸ್ಟಿಕ್ ಪಾರ್ಕ್ಗೆ ಶಿಲಾನ್ಯಾಸ: ಸಂಸದ ನಳಿನ್
Team Udayavani, Jun 4, 2023, 6:55 AM IST

ಕೈಕಂಬ: ಜೂನ್ನಲ್ಲಿಯೇ ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರ ರಸಗೊಬ್ಬರ ಹಾಗೂ ರಾಸಾ ಯನಿಕ ಖಾತೆ ಸಚಿವ ಭಗವಂತ ಖೂಬಾ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಕೋಸ್ಟ್ಗಾರ್ಡ್ ತರಬೇತಿ ಕೇಂದ್ರಕ್ಕೂ ಶಿಲಾನ್ಯಾಸ ನೆರವೇರಿಸುವ ಉದ್ದೇಶ ಇದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ಶನಿವಾರ ಗಂಜಿಮಠದಲ್ಲಿನ ಪ್ಲಾಸ್ಟಿಕ್ ಪಾರ್ಕ್ನಲ್ಲಿ ನಡೆಯುವ ಕಾಮಗಾರಿಗಳ ಪರಿಶೀಲನೆ ಹಾಗೂ ಅಲ್ಲಿನ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕರೆದ ಸಭೆಯಲ್ಲಿ ಮಾತನಾಡಿದರು.
2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಉದ್ಯಮಿಗಳಿಗೆ ಆದ್ಯತೆ ನೀಡುವ ಯೋಚನೆ, ಕೌಶಲಾಭಿವೃದ್ಧಿ ಮೂಲಕ ಪ್ರತಿಭೆಗಳಿಗೆ ಅವಕಾಶ ಕೊಡಬೇಕು, ಮೇಕಿನ್ ಇಂಡಿಯಾ ಅಧಾರದಲ್ಲಿ ಸ್ವದೇಶಿ ಉದ್ಯಮಿಗಳಿಗೆ ಅದ್ಯತೆ ಕೊಡಬೇಕೆಂಬ ಪರಿಕಲ್ಪನೆಯಡಿಯಲ್ಲಿ ಸರಕಾರ ಯೋಜನೆಗಳನ್ನು ಮಾಡಿತು. ಅಂದಿನ ಕೇಂದ್ರ ಸಚಿವ ಅನಂತ ಕುಮಾರ್ ಮಂಗಳೂರಿಗೆ ಬಂದಾಗ ಮಂಗಳೂರಿಗೆ ಕೊಡುಗೆ ಕೊಡಬೇಕೆಂದು ಅವರಲ್ಲಿ ಬೇಡಿಕೆಯನ್ನಿಟ್ಟಿದ್ದು, ಆಗ ಪ್ಲಾಸ್ಟಿಕ್ ಪಾರ್ಕ್ನ ಘೋಷಣೆ ಮಾಡಿದ್ದರು ಎಂದರು.
ಕೋಸ್ಟ್ಗಾರ್ಡ್ ತರಬೇತಿ ಕೇಂದ್ರ
ಕೋಸ್ಟ್ಗಾರ್ಡ್ ತರಬೇತಿ ಕೇಂದ್ರವನ್ನು ಮಂಗಳೂರಿಗೆ ತರುವ ಪ್ರಯತ್ನವಾಗಿದೆ. ಪೂರಕ ಕಾಮಗಾರಿಗಳು ನಡೆಯುತ್ತಿವೆ. ಕುಳಾçಯಲ್ಲಿ ಮೀನುಗಾರಿಕೆ ಜೆಟ್ಟಿ ನಿರ್ಮಾಣಕ್ಕೆ ನರೇಂದ್ರ ಮೋದಿಯವರ ಸರಕಾರ 250 ಕೋಟಿ ರೂ. ಅನುದಾನ ಕೊಟ್ಟು ಇಂದು ಕಾಮಗಾರಿ ಪ್ರಾರಂಭವಾಗಿದೆ. ಇದರಿಂದಾಗಿ ಮೀನುಗಾರಿಕೆ ಜೆಟ್ಟಿ, ಪ್ಲಾಸ್ಟಿಕ್ ಪಾರ್ಕ್, ಕೋಸ್ಟ್ಗಾರ್ಡ್ 3 ಕಾಮಗಾರಿಗಳು ಶಾಸಕ ಡಾ| ಭರತ್ ಶೆಟ್ಟಿಯವರ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.
60 ಎಕರೆಯಲ್ಲಿ ಪ್ಲಾಸ್ಟಿಕ್ ಪಾರ್ಕ್
ಗಂಜಿಮಠದ 60 ಎಕರೆ ಜಾಗದಲ್ಲಿ ಪ್ಲಾಸ್ಟಿಕ್ ಅಧಾರಿತ ಕೈಗಾರಿಕೆಗಳು ಸ್ಥಾಪನೆಯಾಗಲಿದ್ದು, ಗೋದಾಮುಗಳು, ಪ್ರಯೋಗಳನ್ನೊಳಗೊಂಡಿದೆ. ಕೆಐಎಡಿಬಿ ಅನುಷ್ಠಾನ ಸಂಸ್ಥೆಯಾಗಿದೆ. ಈಗಾಗಲೇ 39 ಉದ್ಯಮಿಗಳು ಮುಂದೆ ಬಂದಿದ್ದಾರೆ. ಒಟ್ಟು 96 ಎಕರೆ ಜಾಗದ ಆವಶ್ಯಕತೆ ಇದೆ ಎಂದು ಕೆಐ ಡಿಬಿಯ ಎಂಜಿನಿಯರ್ ಗಣಪತಿ ಹೇಳಿದರು.
ಕೆನರಾ ಪ್ಲಾಸ್ಟಿಕ್ ಅಸೋಸಿಯೇಶನ್ ಅಧ್ಯಕ್ಷ ಮಹಮ್ಮದ್ ನಝೀರ್, ಶಾಸಕ ಡಾ| ಭರತ್ ಶೆಟ್ಟಿ, ಗಂಜಿಮಠ ಗ್ರಾ.ಪಂ. ಅಧ್ಯಕ್ಷ ನೋಣಯ್ಯ ಕೋಟ್ಯಾನ್, ಭೂಸ್ವಾಧೀನ ಅಧಿಕಾರಿ ಬಿನಾೖಯ್ ಮೊದಲಾದವರಿದ್ದರು. ದ.ಕ. ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಗೋಕುಲ್ದಾಸ್ ನಾಯಕ್ ಪ್ರಸ್ತಾವನೆಗೈದು, ಸ್ವಾಗತಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?