ಉಳ್ಳಾಲ: ಶಾಸಕರಿಂದ ಶಾಶ್ವತ ಕಡಲ್ಕೊರೆತ ಕಾಮಗಾರಿ ವೀಕ್ಷಣೆ
Team Udayavani, May 17, 2020, 5:30 AM IST
ಉಳ್ಳಾಲ: ಉಳ್ಳಾಲದಲ್ಲಿ ಕಡಲ್ಕೊರೆತಕ್ಕೆ ಶಾಶ್ವತವಾಗಿ ನಿರ್ಮಾಣ ವಾಗಿರುವ ಪೈಲಟ್ ಯೋಜನೆಗಳು ಕಡಲ್ಕೊರೆತದ ಇತರ ಪ್ರದೇಶಗಳಿಗೆ ಮಾದರಿಯಾಗಲಿವೆ. ಪ್ರಸ್ತುತ ಕಾಮಗಾರಿ ಹಂತದಲ್ಲಿರುವ ಉಳ್ಳಾಲ ಸಮ್ಮರ್ ಸ್ಯಾಂಡ್ ಬಳಿಯಿಂದ ಸೀಗ್ರೌಂಡ್ ವರೆಗೆ 22 ಕೋ.ರೂ. ಅನುದಾನದಲ್ಲಿ ಯೋಜನೆ ಕಾರ್ಯಗತವಾಗುತ್ತಿದ್ದು, ಶೀಘ್ರವೇ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದರು.
ಉಳ್ಳಾಲ ಶಾಶ್ವತ ಕಡಲ್ಕೊರೆತ ಕಾಮಗಾರಿ ವೀಕ್ಷಿಸಿ ಬಂದರು ಇಲಾಖೆಯ ಎಂಜಿನಿಯರ್ಗಳೊಂದಿಗೆ ಮತ್ತು ಗುತ್ತಿಗೆ ದಾರರೊಂದಿಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಈಗಾಗಲೇ ಎಡಿಬಿ ಯೋಜನೆಯಡಿ ಹಳೆ ತಡೆಗೋಡೆ ನಿರ್ವಹಣೆ, ಬಮ್ಸ್ರಚನೆ ಸಹಿತ ಶಾಶ್ವತ ಕಾಮಗಾರಿಗಳು ಕೋಟೆಪುರದಿಂದ ಮೊಗವೀರಪಟ್ಟಣದ ವರೆಗೆ ಯಶಸ್ವಿಯಾಗಿ ನಡೆದಿವೆ. ಲಾಕ್ ಡೌನ್ ನಿಂದಾಗಿ 2 ತಿಂಗಳು ಕಾಮಗಾರಿಗೆ ಹಿನ್ನಡೆಯಾಗಿದ್ದು, ಇದೀಗ ತ್ವರಿತಗತಿಯಲ್ಲಿ ನಿರ್ವಹಿಸಲು ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್ಗಳಿಗೆ ಮತ್ತು ಗುತ್ತಿಗೆ ದಾರರಿಗೆ ಆದೇಶ ನೀಡಲಾಗಿದೆ ಎಂದರು.
ಉಚ್ಚಿಲ ಕಡಲ್ಕೊರೆತ;
ತಾತ್ಕಾಲಿಕ ಕ್ರಮಕ್ಕೆ ಆಗ್ರಹ
ಸೋಮೇಶ್ವರ ಉಚ್ಚಿಲ ಸಮುದ್ರ ತೀರದಲ್ಲಿ ಶಾಶ್ವತ ಕಾಮಗಾರಿ ಆರಂಭಗೊಂಡಿ ದ್ದರೂ ಮಳೆಗಾಲದ ಮೊದಲು ಈ ಬಾರಿಯ ಕಡಲ್ಕೊರೆತ ಎದುರಿಸಲು ಸಿದ್ಧತೆಗೆ ಆಗ್ರ ಹಿಸಿ,ತಾತ್ಕಾಲಿಕ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಬಂದರು ಇಲಾಖೆ, ಮೀನುಗಾರಿಕೆ ಇಲಾಖೆಯ ಎಂಜಿನಿಯರ್ಗಳು, ಆಧಿಕಾರಿ, ಗುತ್ತಿಗೆದಾರರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ