ನಿಯಮ ಉಲ್ಲಂಘಿಸಿದ ಬಸ್‌ ಮುಟ್ಟುಗೋಲು, ಚಾಲಕರ ವಿರುದ್ಧ ಕೇಸು: ಸಂದೀಪ್‌ ಪಾಟೀಲ್

ಪೊಲೀಸ್‌ ಫೋನ್‌ -ಇನ್‌

Team Udayavani, Jun 29, 2019, 5:14 AM IST

20

ಮಹಾನಗರ: ಸಂಚಾರ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಮಧ್ಯೆ, ಎಲ್ಲೆಂದರಲ್ಲಿ ಬಸ್‌ಗಳನ್ನು ನಿಲ್ಲಿಸುವ ಚಾಲಕರ ವಿರುದ್ಧ ಕೇಸು ದಾಖಲಿಸಿ ಬಸ್‌ಗಳನ್ನು ಮುಟ್ಟುಗೋಲು ಹಾಕುವಂತೆ ನಗರ ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್ ಅವರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ತಮ್ಮ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸಾರ್ವ ಜನಿಕರ ಕರೆಗಳನ್ನು ಸ್ವೀಕರಿಸಿ ಅವರು ಈ ಸೂಚನೆ ನೀಡಿದರು.

ಬಸ್‌ ಚಾಲಕರಿಗೆ ಈ ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಲಾಗಿದೆ. ಆದರೆ ಅವರ ನಡವಳಿಕೆಯಲ್ಲಿ ಸುಧಾರಣೆಯಿಲ್ಲ. ಬಸ್‌ಗಳನ್ನು ನಡು ರಸ್ತೆಯಲ್ಲಿ ನಿಲ್ಲಿಸುವುದು, ಮಿತಿ ಮೀರಿದ ವೇಗದಲ್ಲಿ ಮತ್ತು ನಿರ್ಲಕ್ಷ ್ಯತನದಿಂದ ಚಲಾಯಿಸುವುದು ಮುಂದು ವರಿದಿದೆ. ಆದ್ದರಿಂದ ನಿರ್ದಾಕ್ಷಿಣ್ಯವಾಗಿ ಕ್ರಮ ಜರಗಿಸುವುದು ಅನಿವಾರ್ಯ ಎಂದು ಕಮಿಷನರ್‌ ವಿವರಿಸಿದರು.

ಸೆಂಟ್ರಲ್ ರೈಲು ನಿಲ್ದಾಣ ರಸ್ತೆಯ ಮುತ್ತ ಪ್ಪ ಗುಡಿ ಜಂಕ್ಷನ್‌ನಲ್ಲಿ ಸಂಚಾರ ವ್ಯವಸ್ಥೆಗೆ ಅನುಕೂಲಕರವಾಗಿದ್ದ ಕಂಬವನ್ನು ತೆರವು ಮಾಡಿರುವುದರಿಂದ ವಾಹನ ಚಾಲಕರಿಗೆ ಸಮಸ್ಯೆಯಾಗಿದೆ ಎಂದು ನಾಗರಿಕರೊಬ್ಬರು ಪೊಲೀಸ್‌ ಆಯುಕ್ತರ ಗಮನಕ್ಕೆ ತಂದರು. ಈ ವಿಷಯವನ್ನು ಪಾಲಿಕೆಯ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ದೇರಳಕಟ್ಟೆಯ ಅಂಬೇಡ್ಕರ್‌ ಪದವಿಗೆ ಬಸ್‌ ಸೌಲಭ್ಯ ಕಲ್ಪಿಸಬೇಕೆಂದು ಸ್ಥಳೀಯ ನಾಗರಿಕರೊಬ್ಬರು ಹೇಳಿದರು. ಈ ಕುರಿತಂತೆ ಕೆ.ಎಸ್‌.ಆರ್‌.ಟಿ.ಸಿ. ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ಕಮಿಷನರ್‌ ತಿಳಿಸಿದರು. ಮೋಟಾರು ವಾಹನ ನಿಯಮ ಉಲ್ಲಂಘನೆಗೆ ಅಧಿಕ ದಂಡ ವಸೂಲಿ ಮಾಡಲಾಗುತ್ತಿದೆ ಎಂಬ ನಾಗರಿಕರೊಬ್ಬರ ದೂರಿಗೆ ಪ್ರತಿಕ್ರಿಯಿಸಿದ ಕಮಿಷನರ್‌, ಸರಕಾರ ನಿಗದಿ ಪಡಿಸಿದ ದಂಡ ಶುಲ್ಕವನ್ನು ಮಾತ್ರ ವಿಧಿಸಲಾಗುತ್ತಿದೆ ಎಂದರು.

ಫುಟ್ಪಾತ್‌ನಲ್ಲಿ ಪಾರ್ಕಿಂಗ್‌

ಕಾವೂರಿನಲ್ಲಿ ಫುಟ್ಪಾತ್‌ನಲ್ಲಿ ವಾಹನ ಪಾರ್ಕಿಂಗ್‌ ಮತ್ತು ಮೀನು ಮಾರಾಟ ನಡೆಯುತ್ತಿದೆ ಎಂಬ ದೂರಿಗೆ ಸ್ಪಂದಿಸಿದ ಕಮಿಷನರ್‌ ಈ ಬಗ್ಗೆ ಕೂಡಲೇ ಕಾರ್ಯಾ ಚರಣೆ ನಡೆಸಲಾಗುವುದು ಎಂದು ತಿಳಿಸಿದರು. ಬಿಜೈ ಕೆಎಸ್‌ಆರ್‌ಟಿಸಿ ಬಳಿ ರಸ್ತೆ ಬದಿ ಜನರು ಮಲಗುತ್ತಿರುವ ಬಗ್ಗೆ ಬೀಟ್ ಪೊಲೀಸರು ಪರಿಶೀಲಿಸಿ ಕ್ರಮ ಜರಗಿಸಲಿದ್ದಾರೆ ಎಂದರು.

ಮಳೆ ನೀರು ರಸ್ತೆಯಲ್ಲಿ

ಕೂಳೂರು ಸೇತುವೆಯ ಮೇಲೆ ನೀರು ಹರಿಯಲು ವ್ಯವಸ್ಥೆ ಮಾಡಿದ್ದ ತೂಬುಗಳನ್ನು ಇತ್ತೀಚೆಗೆ ಡಾಮರು ಹಾಕುವ ವೇಳೆ ಮುಚ್ಚಿರುವುದಿರಿಂದ ಮಳೆ ನೀರು ರಸ್ತೆಯ ಮೇಲೆ ತುಂಬಿ ನಿಂತು ಡಾಮರು ಕಿತ್ತು ಹೋಗಿ ರಸ್ತೆಯು ಮತ್ತೆ ಗುಂಡಿಮಯವಾಗುವ ಭೀತಿ ಇದೆ ಎಂದು ನಾಗರಿಕರೊಬ್ಬರು ತಿಳಿಸಿದರು. ಈ ಕುರಿತು ಎನ್‌ಎಚ್ಎಐ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಲೇಡಿಹಿಲ್ ವೃತ್ತ: ಅಧ್ಯಯನ ನಡೆಸಿ ಕ್ರಮ

ಲೇಡಿಹಿಲ್ ವೃತ್ತದಲ್ಲಿ ಫ್ರೀ ಲೆಫ್ಟ್‌ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ತಿರುವಿನಲ್ಲಿಯೇ ಬಸ್‌ ನಿಲುಗಡೆಗೆ ಅವಕಾಶ ನೀಡಲಾಗಿದೆ. ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ನಾಗರಿಕರು ಕಮಿಷನರ್‌ ಗಮನಕ್ಕೆ ತಂದರು. ಈ ವೃತ್ತದ ಬಗ್ಗೆ ಸೂಕ್ತ ಅಧ್ಯಯನ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದು 118ನೇ ಫೋನ್‌ ಇನ್‌ ಕಾರ್ಯ ಕ್ರಮವಾಗಿದ್ದು, ಒಟ್ಟು 27 ಕರೆಗಳು ಬಂದವು.

ದ.ಕ. ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್‌ ಆಳ್ವ, ಡಿಸಿಪಿಗಳಾದ ಹನುಮಂ ತರಾಯ, ಲಕ್ಷ್ಮೀಗಣೇಶ್‌, ಎಸಿಪಿ ಮಂಜುನಾಥ ಶೆಟ್ಟಿ, ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌, ಸುಕುಮಾರನ್‌, ಸುಧಾ ಕರ್‌, ಪೂವಪ್ಪ ಎಚ್. ಎಂ., ಎಎಸ್‌ಐ ಪಿ. ಯೋಗೇಶ್ವರನ್‌, ಪುರುಷೋತ್ತಮ ಉಪಸ್ಥಿತರಿದ್ದರು.

ಪ್ರಮುಖ ದೂರು

•ನಗರದ ಕೆಲವು ಜಂಕ್ಷನ್‌ಗಳಲ್ಲಿ ಟ್ರಾಫಿಕ್‌ ಸಿಗ್ನಲ್ಗಳು ಇಲ್ಲದ ಕಾರಣ ವಾಹನ ಸವಾರರಿಗೆ ಅನನುಕೂಲ ಆಗುತ್ತಿದೆ.

• ಉರ್ವಸ್ಟೋರ್‌,ಬೈಕಂಪಾಡಿಗಳಲ್ಲಿ ಬಸ್‌ ನಿಲ್ಲಿಸಲು ಬಸ್‌ ಬೇ ನಿರ್ಮಿಸಿ.

• ಬಬ್ಬುಕಟ್ಟೆ ಶಾಲೆಯ ಬಳಿ ಹಾಕಿದ್ದ ಹಂಪ್‌ ಕಳಚಿ ಹೋಗಿದ್ದು, ಪುನರ್‌ ನಿರ್ಮಾಣ ಮಾಡ ಬೇಕು.

• ಮುಳಿಹಿತ್ಲುವಿಗೆ ಪರವಾನಿಗೆ ಪಡೆದಿ ರುವ ಸಿಟಿ ಬಸ್‌ಗಳು ಕೆಲವೊಮ್ಮೆ ಟ್ರಿಪ್‌ ಕಟ್ ಮಾಡಿ ಮಂಗಳಾದೇವಿಯಿಂದಲೇ ವಾಪಸಾಗುತ್ತಿವೆ.

• ಕದ್ರಿ ಶಿವಬಾಗ್‌ ಮತ್ತು ಬೆಂದೂರ್‌ವೆಲ್ ಬಳಿ ರಸ್ತೆಯ ಬದಿ ವಾಹನ ನಿಲುಗಡೆ ಮಾಡಿ ಸಂಚಾರಕ್ಕೆ ಅಡ್ಡಿ ಪಡಿಸಲಾಗುತ್ತಿದೆ.

• ಖಾಸಗಿ ವಾಹನಗಳು ಬಾಡಿಗೆಗೆ ಕಾರ್ಯಾಚರಿಸುತ್ತಿವೆ.

• ಕೆಲವು ಬಸ್‌ಗಳ ಫುಟ್ಬೋರ್ಡ್‌ ಎತ್ತರವಾಗಿದ್ದು, ಮಕ್ಕಳಿಗೆ, ವೃದ್ಧರಿಗೆ, ಮಹಿಳೆಯರಿಗೆ ಬಸ್‌ ಹತ್ತಲು ಮತ್ತು ಇಳಿಯಲು ಅನನುಕೂಲ ಆಗುತ್ತಿದೆ.

• ಪರವಾನಿಗೆ ಇಲ್ಲದ ಕೆಲವು ರಿಕ್ಷಾಗಳು ನಗರದಲ್ಲಿ ಓಡಾಡುತ್ತಿವೆ.

• ಶರ್ಬತ್‌ಕಟ್ಟೆ- ಪಾದುವ ಹೈಸ್ಕೂಲ್ ರಸ್ತೆಯಲ್ಲಿ ರಸ್ತೆ ಅಗೆತದ ಕಾಮಗಾರಿ ಮುಗಿದು ತಿಂಗಳು ಕಳೆದರೂ ಗುಂಡಿ ಮುಚ್ಚಿಲ್ಲ.

•ಬಿಯರ್‌ ಮತ್ತು ಇತರ ಬಾಟಲಿಗಳನ್ನು ಕಾಡಿನಲ್ಲಿ ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ.

•ನಿತ್ಯಾಧರ್‌ ನಗರದಲ್ಲಿ ಸಾರ್ವಜನಿಕ ಕೊಳವೆ ಬಾವಿಯ ಪಂಪ್‌ ಹಾಳಾಗಿದ್ದು, ನೀರಿನ ಸಮಸ್ಯೆ ತಲೆದೋರಿದೆ.

•ಕೂಳೂರು ಸರ್ವಿಸ್‌ ರಸ್ತೆಯಲ್ಲಿ ಬೆಳಗ್ಗಿನ ಹೊತ್ತು ಬಸ್‌ಗಳನ್ನು ಬಹಳ ಹೊತ್ತು ನಿಲ್ಲಿಸುವುದರಿಂದ ವಾಹನಗಳ ಸಂಚಾ ರಕ್ಕೆ ಅಡ ಚಣೆ ಉಂಟಾಗಿ ಟ್ರಾಫಿಕ್‌ ಜಾಂ ಆಗುತ್ತಿದೆ.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.