ಬೀದಿನಾಯಿ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಚಿಕಿತ್ಸೆ

ಪಾಲಿಕೆ ವ್ಯಾಪ್ತಿ 1,500ಕ್ಕೂ ಹೆಚ್ಚಿನ ಶ್ವಾನಗಳಿಗೆ ಚಿಕಿತ್ಸೆ

Team Udayavani, May 16, 2022, 12:14 PM IST

dogs

ಮಹಾನಗರ: ಬೀದಿ ನಾಯಿಗಳ ನಿಯಂತ್ರಣದ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯು ವಾರ್ಡ್‌ ಮಟ್ಟದಲ್ಲಿ ಯೋಜನೆ ರೂಪಿಸಲಾಗಿದ್ದು, ಒಂದು ವರ್ಷದಲ್ಲಿ 1,500ಕ್ಕೂ ಹೆಚ್ಚಿನ ಶ್ವಾನಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ನಡೆಸಲಾಗಿದೆ.

ನಗರದ ಕೆಲವೊಂದು ಕಡೆಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದ್ದು, ಕೆಲವೆಡೆ ಗುಂಪು ಗುಂಪಾಗಿ ದಾಳಿ ಮಾಡುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪಾಲಿಕೆಯು ಶಕ್ತಿನಗರದ ಎನಿಮಲ್‌ ಕೇರ್‌ ಟ್ರಸ್ಟ್‌ಸಹಯೋಗದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. ಬೀದಿನಾಯಿಗಳನ್ನು ಬಲೆಯನ್ನು ಉಪಯೋಗಿಸಿ ಹಿಡಿಯಲಾಗುತ್ತದೆ. ಬಳಿಕ ಶಕ್ತಿನಗರದಲ್ಲಿರುವ ಎನಿಮಲ್‌ ಕೇರ್‌ ಸಂಸ್ಥೆಗೆ ತಲುಪಿಸಲಾಗುತ್ತದೆ. ಒಂದು ವಾರಗಳಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಬಳಿಕ ಯಾವ ಪ್ರದೇಶದಿಂದ ನಾಯಿಗಳನ್ನು ಹಿಡಿದು ತರಲಾಗಿತ್ತೋ, ಅಲ್ಲೇ ಮರಳಿ ಬಿಡಲಾಗುತ್ತದೆ. ಈ ಸಮಯದಲ್ಲಿ ನಾಯಿಗಳಿಗೆ ರೇಬಿಸ್‌ ಚುಚ್ಚುಮದ್ದು ಕೂಡ ನೀಡಲಾಗುತ್ತದೆ. ಅಲ್ಲದೆ ಶಸ್ತ್ರಚಿಕಿತ್ಸೆ ನಡೆಸಿದ ನಾಯಿಯ ಎಡ ಕಿವಿಯಲ್ಲಿ “ವಿ’ ಆಕಾರದಲ್ಲಿ ಮಾರ್ಕ್‌ ಮಾಡಲಾಗುತ್ತದೆ.

ಬೀದಿನಾಯಿಗಳ ಕಾಟ

ಉರ್ವ, ಇನ್ಫೋಸಿಸ್‌, ಕೊಟ್ಟಾರ ಕ್ರಾಸ್‌, ಕೋಡಿಕಲ್‌, ನಂತೂರು, ಮಾರ್ಕೆಟ್‌ ಸಹಿತ ಇನ್ನಿತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದೆ. ಕೆಲವು ಕಡೆಗಳಲ್ಲಿ ರಾತ್ರಿ ಆದಂತೆ ಗುಂಪಾಗಿ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತದೆ. ಅಕಸ್ಮಾತ್‌ ಮನೆಗಳಲ್ಲಿ ಬಾಗಿಲು ತೆರೆದಿಟ್ಟಲ್ಲಿ ಮನೆಯ ಒಳಗಡೆ ಬಂದು ಉಪಟಳ ಕೊಡುತ್ತದೆ. ಈ ಸಮಸ್ಯೆಗಳಿಂದ ರೋಸಿ ಹೋದ ಕೋಡಿಕಲ್‌ ಪರಿಸರದ ಸಾರ್ವಜನಿಕರು ಈ ಹಿಂದೆ ಉರ್ವ ಪೊಲೀಸ್‌ ಠಾಣೆ, ಪಾಲಿಕೆಗೂ ಕೂಡ ಮನವಿ ಸಲ್ಲಿಸಿದ್ದರು.

ಪರವಾನಿಗೆ ಪಡೆದದ್ದು ಬೆರಳೆಣಿಕೆಯಷ್ಟು

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆಯಲ್ಲಿ ನಾಯಿಗಳನ್ನು ಸಾಕಲು ಪರವಾನಗಿ ಪಡೆಯಬೇಕು ಎಂದು ಎಂಬ ನಿರ್ಣಯವನ್ನು ಕೆಲವು ವರ್ಷಗಳ ಹಿಂದೆ ನಡೆದ ಮನಪಾ ಸಭೆಯಲ್ಲಿ ಕೈಗೊಳ್ಳಲಾಗಿತ್ತು. 2016ರಲ್ಲಿಯೇ ಡಾಗ್‌ ವೆಲ್‌ಫೇರ್‌ ಸಮಿತಿ ಹಾಗೂ ಡಾಗ್‌ ಲೈಸನ್ಸ್‌ ಸಮಿತಿಯನ್ನು ಕೂಡ ರಚನೆ ಮಾಡಿತ್ತು. ಆದರೆ ಈ ನಿಯಮ ಪಾಲಿಕೆ ವ್ಯಾಪ್ತಿಯಲ್ಲಿ ಪಾಲನೆಯಾಗುತ್ತಿಲ್ಲ. ಪಾಲಿಕೆ ಅಧಿಕಾರಿಯೊಬ್ಬರು ಹೇಳುವ ಪ್ರಕಾರ ಮನೆಗಳಲ್ಲಿ ನಾಯಿ ಸಾಕಲು ನಗರದ ಬೆರಳೆಣಿಕೆಯಷ್ಟು ಮಂದಿ ಮಾತ್ರ ಪರವಾನಗಿ ಪಡೆದಿದ್ದಾರೆ.

ಬೀದಿ ನಾಯಿಗಳ ನಿಯಂತ್ರಣಕ್ಕೆ ವಿವಿಧ ಕ್ರಮ

ನಗರದಲ್ಲಿ ಬೀದಿ ನಾಯಿಗಳ ನಿಯಂತ್ರಣದ ನಿಟ್ಟಿನಲ್ಲಿ ಪಾಲಿಕೆ ವಿವಿಧ ಕ್ರಮ ಅಳವಡಿಸಿದ್ದು, ಅದರಂತೆ ಎನಿಮಲ್‌ ಕೇರ್‌ ಸಂಸ್ಥೆಯ ಸಹಯೋಗದಲ್ಲಿ ಶ್ವಾನಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ನಡೆಸಲಾಗುತ್ತಿದೆ. ನಗರದಲ್ಲಿ ಬೀದಿ ನಾಯಿಗಳಿಂದ ಆಗುವ ಉಪಟಳದ ಕುರಿತು ಪಾಲಿಕೆಗೂ ದೂರುಗಳು ಬರುತ್ತಿದ್ದು, ಆ ಮಾಹಿತಿಯನ್ನು ಸಂಸ್ಥೆಗೆ ನೀಡಲಾಗುತ್ತದೆ. – ಡಾ| ಮಂಜಯ್ಯ ಶೆಟ್ಟಿ, ಪಾಲಿಕೆ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.