ನಿಷೇಧಿತ ಪ್ಲಾಸ್ಟಿಕ್‌ ಮಾರಾಟದ ಮೇಲೆ ಪಾಲಿಕೆ ನಿಗಾ

ನಾಲ್ಕು ತಂಡ ರಚಿಸಿ ಕಾರ್ಯಾಚರಣೆಗೆ ಸಿದ್ಧತೆ

Team Udayavani, May 10, 2022, 10:00 AM IST

plastic

ಮಹಾನಗರ: ನಿಷೇಧಿತ ಪ್ಲಾಸ್ಟಿಕ್‌ ಮಾರಾಟ ಮಾಡುವುದು ಅಪರಾಧ ಎಂದು ರಾಜ್ಯ ಸರಕಾರ ಈಗಗಾಲೇ ಸೂಚನೆ ನೀಡಿದರೂ ನಗರದ ಕೆಲವೊಂದು ಅಂಗಡಿಗಳಲ್ಲಿ ಅವುಗಳನ್ನು ಮಾರಾಟ ಮಾಡಲಾಗು ತ್ತಿದೆ. ಈ ವಿಚಾರವನ್ನು ಪಾಲಿಕೆ ಗಂಭೀರವಾಗಿ ಪರಿಗಣಿಸಿದ್ದು, ನಾಲ್ಕು ತಂಡ ರಚಿಸಿ, ನಗರದೆಲ್ಲೆಡೆ ಕಾರ್ಯಾ ಚರಣೆ ಸಿದ್ಧವಾಗಿದೆ.

ಪಾಲಿಕೆಯ ಆರೋಗ್ಯ ನಿರೀಕ್ಷಕರು, ಪರಿಸರ ಅಭಿಯಂತ, ಮಲೇರಿಯಾ ಮೇಲ್ವಿಚಾರಕರು, ಎಂಪಿಡಬ್ಲ್ಯು ಕಾರ್ಯಕರ್ತರು ಸಹಿತ ಒಂದು ತಂಡದಲ್ಲಿ ಐದು ಮಂದಿ ಅಧಿಕಾರಿಗಳು ಇರಲಿದ್ದಾರೆ. ಮುಖ್ಯವಾಗಿ ವಾರದಲ್ಲಿ ಎರಡು ದಿನಗಳ ಕಾಲ ನಗರದ ವಿವಿಧ ಭಾಗದ ಅಂಗಡಿಗಳಿಗೆ ತೆರಳಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಮಾಲಕರಿಗೆ ಸೂಚನೆ ನೀಡಲಾಗುತ್ತದೆ. ಆದರೂ, ಪುನರಾವರ್ತನೆ ಯಾದರೆ ದುಬಾರಿ ದಂಡದ ಜತೆಗೆ ಪರವಾನಿಗೆ ರದ್ದು ಗೊಳಿಸಲು ನಿರ್ಧಾರವನ್ನೂ ಕೈಗೊಳ್ಳಲಾಗಿದೆ.

500 – 10,000 ರೂ.ವರೆಗೆ ದಂಡ

ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ, ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌, ಪ್ಲಾಸ್ಟಿಕ್‌ ಭಿತ್ತಿಚಿತ್ರ, ಪ್ಲಾಸ್ಟಿಕ್‌ ತೋರಣ, ಫ್ಲೆಕ್ಸ್‌, ಬಾವುಟ, ಪ್ಲಾಸ್ಟಿಕ್‌ ತಟ್ಟೆ, ಪ್ಲಾಸ್ಟಿಕ್‌ ಲೋಟ, ಪ್ಲಾಸ್ಟಿಕ್‌ ಚಮಚ, ಕ್ಲಿಂಗ್‌ ಫಿಲ್ಮ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್‌ ಹಾಳೆ, ಥರ್ಮೋಕೋಲ್‌ ಮತ್ತು ಪ್ಲಾಸ್ಟಿಕ್‌ ಮೈಕ್ರೋ ಬೀಡ್‌ನಿಂದ ತಯಾರಾದ ವಸ್ತುಗಳ ತಯಾರಿಕೆ, ಸರಬರಾಜು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೂ ಹಲವು ಉದ್ದಿಮೆದಾರರು, ವ್ಯಾಪಾರಸ್ಥರು, ರಸ್ತೆ ಬದಿಯ ವ್ಯಾಪಾರಸ್ಥರು ಇವುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಕಠಿನ ಕ್ರಮ ಕೈಗೊಳ್ಳಲು ಪಾಲಿಕೆ ಮುಂದಾಗಿದೆ. ಈ ರೀತಿ, ನಿಯಮ ಉಲ್ಲಂಘಿಸುವ ಉದ್ದಿಮೆದಾರರಿಂದ ಎಲ್ಲ ವಸ್ತುಗಳನ್ನು ವಶಪಡಿಸಿಕೊಂಡು 500 ರೂ.ಯಿಂದ 10,000 ರೂ.ವರೆಗೆ ದಂಡ ವಿಧಿಸಲು ಈ ತಂಡ ಮುಂದಾಗಿದೆ.

ಕೆಲವೊಂದಕ್ಕೆ ಮಾತ್ರ ವಿನಾಯಿತಿ

ಪ್ಲಾಸ್ಟಿಕ್‌ ವಸ್ತುಗಳ ಬಳಕೆ ಮಾಡಲು ಕೆಲವೊಂದು ವಲಯದಲ್ಲಿ ಮಾತ್ರ ವಿನಾಯಿತಿ ನೀಡಲಾಗಿದೆ. ಎಸ್‌ ಇಝಡ್‌, ರಫ್ತು ಉದ್ದೇಶಿತ ಘಟಕಗಳಲ್ಲಿ ಸ್ಥಾಪಿತವಾದ ಪ್ಲಾಸ್ಟಿಕ್‌ ಉದ್ಯಮದಲ್ಲಿ ರಫ್ತು ಮಾಡುವ ಉದ್ದೇಶಕ್ಕೆಂದು ಪ್ರತ್ಯೇಕವಾಗಿ, ರಫ್ತು ಆರ್ಡರ್‌ ಮೇರೆಗೆ ಉತ್ಪಾದಿಸಲ್ಪಡುವ ಪ್ಲಾಸ್ಟಿಕ್‌ ವಸ್ತುಗಳು, ಸಾಮಗ್ರಿಗಳನ್ನು ಬಳಸುವುದಕ್ಕೆ ಮೊದಲು ಉತ್ಪಾದನ/ಸಂಸ್ಕರಣ ಘಟಕಗಳಲ್ಲಿ ಪ್ಯಾಕ್‌ ಮಾಡಿ ಸೀಲ್‌ ಮಾಡಲು ಬಳಸುವ, ಸಾಮಗ್ರಿಗಳ ಪ್ಯಾಕೇಜಿಂಗ್‌ ಮಾಡುವ ಸಂದರ್ಭ ಅವಿಭಾಜ್ಯವಾಗಿ ಉಪಯೋಗಿಸುವ ಪ್ಲಾಸ್ಟಿಕ್‌ ಬ್ಯಾಗ್‌ ಗಳು, ಸರಕಾರಿ ಇಲಾಖೆಗಳಿಂದ ಅಥವಾ ಇತರ ಸಂಬಂಧಪಟ್ಟ ಸಂಸ್ಥೆಗಳಿಂದ ಸ್ವೀಕೃತವಾದ ಆರ್ಡರ್‌ಗೆ ಎದುರಾಗಿ ಅರಣ್ಯ ಮತ್ತು ತೋಟಗಾರಿಕೆ ನರ್ಸರಿಗಳಲ್ಲಿ ಬಳಸುವ ಪ್ಲಾಸ್ಟಿಕ್‌ ಚೀಲಗಳು, ಹಾಳೆಗಳು, ಹಾಲು ಮತ್ತು ಹಾಲಿನ ಉತ್ಪನ್ನಗಳ (ಹೈನು ಉತ್ಪನ್ನಗಳು) ಪ್ಯಾಕಿಂಗ್‌ಗೆ ಬಳಸುವ ಪ್ಲಾಸ್ಟಿಕ್‌ಗಳಿಗೆ ವಿನಾಯಿತಿ ನೀಡಲಾಗಿದೆ. ಕಾರ್ಯಾಚರಣೆ ಆರಂಭ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಪಾಲಿಕೆಯಿಂದ ನಾಲ್ಕು ತಂಡ ರಚಿಸಲಾಗಿದ್ದು, ನಗರದ ವಿವಿಧ ಪ್ರದೇಶಗಳಲ್ಲಿನ ಅಂಗಡಿಗಳಿಗೆ ತೆರಳಿ ಕಾರ್ಯಾಚರಣೆ ನಡೆಸುತ್ತೇವೆ. ಪ್ರತೀ ದಿನ ಈ ಕಾರ್ಯಾಚರಣೆ ನಡೆಯಲಿದ್ದು, ಮುಖ್ಯವಾಗಿ ವಾರದಲ್ಲಿ ಎರಡು ದಿನಗಳ ಕಾಲ ಕಾರ್ಯಾಚರಣೆ ತೀವ್ರಗೊಳಿಸುತ್ತೇವೆ. – ಶಬರೀನಾಥ್‌, ಪಾಲಿಕೆ ಪರಿಸರ ಅಭಿಯಂತ

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.