ಪಾಲಿಕೆ ಹೊಸ ಕಸ ವಿಲೇವಾರಿ ನಿಯಮ; ನಗರ ವಾಸಿಗಳಿಗೆ ಹಲವು ಕಿರಿಕಿರಿ!


Team Udayavani, Oct 17, 2020, 2:18 AM IST

ಪಾಲಿಕೆ ಹೊಸ ಕಸ ವಿಲೇವಾರಿ ನಿಯಮ; ನಗರ ವಾಸಿಗಳಿಗೆ ಹಲವು ಕಿರಿಕಿರಿ!

ಸಾಂದರ್ಭಿಕ ಚಿತ್ರ

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಯು 2016ರ “ಪೌರ ಘನತಾಜ್ಯ ವಸ್ತುಗಳ ನಿರ್ವಹಣೆ ನಿಯಮ’ವನ್ನು ನಗರದಲ್ಲಿ ಅ. 15ರಿಂದ ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸುತ್ತಿರುವುದು ಸ್ವಾಗತಾರ್ಹ. ಆದರೆ ಕಸ ವಿಲೇವಾರಿಗೆ ಸಂಬಂಧಿಸಿದ ಈ ನಿಯಮದಲ್ಲಿನ ಕೆಲವೊಂದು ಕ್ರಮವು ನಗರವಾಸಿಗಳಿಗೆ ಅನಾನುಕೂಲತೆ ಸೃಷ್ಟಿಸು ವ ಮೂಲಕ ಗೊಂದಲಕ್ಕೆ ಎಡೆ ಮಾಡಿದೆ.

ನಗರದಲ್ಲಿ ಪರಿಸರಕ್ಕೆ ಮಾರಕವಾಗದಂತೆ ಕಸ ವಿಲೇವಾರಿ ಮಾಡುವುದು ಹತ್ತಾರು ವರ್ಷಗಳಿಂದ ಕಾಡುತ್ತಿರುವ ಬಹುದೊಡ್ಡ ಸಮಸ್ಯೆ. ಇದಕ್ಕೆ ಇನ್ನೂ ಒಂದು ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎನ್ನುವುದು ವಾಸ್ತವ. ಘನ ತ್ಯಾಜ್ಯ ನಿರ್ವಹಣೆ ನಿಯಮಾವಳಿಗಳನ್ನು ನಿಗದಿತ ಕಾಲಮಿತಿಯಲ್ಲಿ ಸಂಪೂರ್ಣ ಅನುಷ್ಠಾನ ಗೊಳಿಸುವಲ್ಲಿ ವಿಫಲವಾಗಿರುವ ಬಗ್ಗೆ ಹೈಕೋರ್ಟ್‌ ಮನಾಪಾಗೆ ಇತ್ತೀಚೆಗೆ ಬಿಸಿ ಮುಟ್ಟಿಸಿತ್ತು. ಇದರ ಪರಿಣಾಮವಾಗಿ, ಅ. 2ರಿಂದ ಎಲ್ಲ ವಾರ್ಡ್‌ಗಳಲ್ಲಿ ತ್ಯಾಜ್ಯವನ್ನು ಹಸಿ ಕಸ, ಒಣ ಕಸ ಪ್ರತ್ಯೇಕಿಸಿ ಸಂಗ್ರಹಿಸುವ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲಾಗಿದೆ. ಅ. 15ರಿಂದ ಇದು ಕಟ್ಟುನಿಟ್ಟಾಗಿ ಜಾರಿ ಯಾಗಿದ್ದು, ಇನ್ನುಮುಂದೆ ವಾರದಲ್ಲಿ ಶುಕ್ರವಾರ ಹೊರತುಪಡಿಸಿ ಉಳಿದೆಲ್ಲ ದಿನ ಹಸಿ ಕಸ, ಶುಕ್ರವಾರ ಒಣ ಕಸ ಮಾತ್ರ ಸಂಗ್ರಹಿಸಲಾಗುತ್ತದೆ.

ಹೊಸ ನಿಯಮದ ಅನುಷ್ಠಾನದ ರೀತಿ ನೋಡಿದರೆ ಅದು ಹೊಸದಾದ ಸಮಸ್ಯೆಗಳ ಸೃಷ್ಟಿಗೂ ದಾರಿಯಾಗುವ ಸಾಧ್ಯತೆಗಳಿವೆ. ಈ ಕಾರಣದಿಂದ ಹೊಸ ಕಸ ವಿಂಗಡನೆಗೆ ಸಾರ್ವಜನಿಕ ವಲಯದಲ್ಲಿಯೂ ಅಸಮಾ ಧಾನ ವ್ಯಕ್ತವಾಗತೊಡಗಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ. ಹೀಗಿರುವಾಗ, ಪಾಲಿಕೆಯು ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಹೊಸ ಕಸ ವಿಂಗಡನೆಯನ್ನು ಕಾರ್ಯ ಗತಗೊಳಿಸಬೇಕು ಎನ್ನುವ ಆಗ್ರಹ ವ್ಯಕ್ತವಾಗುತ್ತಿದೆ.

ಇನ್ನು ಮನೆಮುಂದೆ ಪ್ಲಾಸ್ಟಿಕ್‌ ಚೀಲದಲ್ಲಿ ಕಟ್ಟಿ ಕಸ ಇಡುವಂತಿಲ್ಲದ ಕಾರಣ ಕಸದ ವ್ಯಾನ್‌ ಬರುವುದನ್ನೇ ಕಾಯುತ್ತ ಕುಳಿತು ವಿಲೇವಾರಿ ಮಾಡುವುದು ಅನಿವಾರ್ಯ. ಇದು ಮನೆಗಳಲ್ಲಿ ಹೆಚ್ಚಿನ ಜನರಿಲ್ಲದವರು ಹಾಗೂ ದಿನನಿತ್ಯ ಬೆಳಗ್ಗೆ ಕಚೇರಿ-ಇನ್ನಿತರ ಕೆಲಸಗಳಿಗೆ ಹೋಗಬೇ ಕಾದವರಿಗೆ ಸಾಕಷ್ಟು ತೊಂದರೆ ಸೃಷ್ಟಿಸಲಿದೆ. ಇದರಿಂದ ಮನೆಯಲ್ಲಿಯೇ ಉಳಿಯುವ ಕಸವನ್ನು ಪ್ಲಾಸ್ಟಿಕ್‌ನಲ್ಲಿ ಕಟ್ಟಿ ಬೇರೆಡೆ ಎಸೆದು ಹೋಗುವ ಅಪಾಯವಿದೆ.

ಶುಕ್ರವಾರ ಒಣಕಸ ಮಾತ್ರ ನೀಡಬೇಕು. ಹಾಗಾದರೆ, ಆ ದಿನದ ಹಸಿಕಸವನ್ನು ಏನು ಮಾಡಬೇಕು ಎನ್ನುವ ಚಿಂತೆ ಕಾಡುವುದು ಸಹಜ. ಏಕೆಂದರೆ ಹೆಚ್ಚು ಜನರಿರುವ ಮನೆಯಲ್ಲಿ ಪ್ರತಿದಿನವೂ ದೊಡ್ಡ ಪ್ರಮಾಣದಲ್ಲಿ ಹಸಿ ಕಸ ಸೃಷ್ಟಿಯಾಗುವ ಕಾರಣ ಅದನ್ನು 48 ಗಂಟೆ ಮನೆಯಲ್ಲಿಯೇ ಇಟ್ಟರೆ ಗಬ್ಬುವಾಸನೆ ಬಂದು ಇನ್ನಿಲ್ಲದ ಕಿರಿಕಿರಿಗೂ ಕಾರಣವಾಗಬಹುದು.

ಯಾವ ಮನೆ ಅಥವಾ ಸಮುಚ್ಚಯ ದವರಿಗೆ ಕಸ ನೀಡಲು ಸಾಧ್ಯವಿಲ್ಲವೊ ಅಂಥವರು ಅದನ್ನು ಕಾಂಪೋಸ್ಟ್‌ ಮಾಡಿ ಗೊಬ್ಬರ ತಯಾರಿಸುವ ಪರಿಹಾರವನ್ನು ಉಲ್ಲೇಖೀಸಲಾಗಿದೆ. ಆದರೆ ಎಲ್ಲರಿಗೂ ಮನೆಯಲ್ಲೇ ಕಾಂಪೋಸ್ಟ್‌ ವ್ಯವಸ್ಥೆ ಮಾಡಲು ಸಾಧ್ಯವೇ?

ಪಾಲಿಕೆಯು ಈ ಹೊಸ ಮಾದರಿಯ ಕಸ ಸಂಗ್ರಹದ ಸಾಧಕ-ಬಾಧಕಗಳನ್ನು ಗಂಭೀರವಾಗಿ ಪರಿಗಣಿಸಿ ವಾಸ್ತವದಲ್ಲಿ ಪರ್ಯಾಯ ವ್ಯವಸ್ಥೆ ಮಾಡದೆ ಹೋದರೆ ಭವಿಷ್ಯದಲ್ಲಿ ನಗರದ ಸಮಗ್ರ ಸ್ವತ್ಛತೆಗೆ ಮತ್ತಷ್ಟು ಸವಾಲು ಉಂಟಾಗಬಹುದು.

ಮತ್ತೆ ಬೀದಿ ಬದಿ ಕಸ ಸಮಸ್ಯೆ ಆತಂಕ
ಮನೆಗಳಿಂದ ತ್ಯಾಜ್ಯ ಸಂಗ್ರಹ ಆರಂಭವಾದ ಬಳಿಕ ನಗರದಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆಯುವ ಸಮಸ್ಯೆ ಬಹು ತೇಕ ಕಡಿಮೆಯಾಗಿತ್ತು ಇದೀಗ ಪಾಲಿಕೆಯ ಹೊಸ ನಿಯಮದಿಂದಾಗಿ ಉಂಟಾಗಿರುವ ಗೊಂದದಿಂದ ರಸ್ತೆ, ಸಾರ್ವಜನಿಕ ಪ್ರದೇಶಗಳಲ್ಲಿ ಮತ್ತೆ ಕಸ ಬೀಳುವ ಆತಂಕವಿದೆ. ಈ ನಿಟ್ಟಿನಲ್ಲಿ ಪಾಲಿಕೆ ಸೂಕ್ತ ಪರಿಹಾ ರೋಪಾಯಗಳ ಬಗ್ಗೆ ಯೋಚಿಸ ಬೇಕೆಂಬುದು ಜನರ ಆಗ್ರಹ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.