ಚೌತಿಯಂದು ತೆನೆ ವಿತರಿಸಲು ನಾಟಿ ಆರಂಭ
ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ
Team Udayavani, Jun 20, 2023, 1:37 PM IST
ಬಜಪೆ: ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪರಿಸರದಲ್ಲಿ ಸೋಮವಾರ ಒಂದೆಡೆ ಉಳುಮೆ, ಇನ್ನೊಂದೆಡೆ ನೇಜಿ ಕೀಳುವ ಹಾಗೂ ನಾಟಿ ಮಾಡುವ ಕಾರ್ಯ ಆರಂಭವಾಗಿದೆ.
ಮಳೆ ಕೊಂಚ ತಡವಾ ದರೂ ಕಾದು ಸ್ವಲ್ಪ ಮಳೆಗೆ ತನ್ನ ಅನಿ ವಾರ್ಯ, ಅಗತ್ಯದ ಕಾಯಕವನ್ನು ಬಿಡುವಂತಿಲ್ಲವಾಗಿದೆ. ಸಮಯಕ್ಕೆ ತಕ್ಕಂತೆ ಹೊಂದಿಕೊಂಡು ಕೃಷಿಗೆ ಪ್ರಾಧಾನ್ಯವನ್ನು ನೀಡಬೇಕಾಗಿದೆ.
ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವತಿಯಿಂದ ಚೌತಿಯಂದು ನಡೆಯುವ ತೆನೆ ಹಬ್ಬಕ್ಕೆ ತೆನೆಯನ್ನು ನೀಡಲು ಈ ಗದ್ದೆ ಉಳುಮೆ ಮತ್ತು ನಾಟಿ. ಪ್ರತಿ ವರ್ಷದಂತೆ ಈ ಬಾರಿಯೂ ದೇವಸ್ಥಾನದ ವತಿಯಿಂದ ಭಕ್ತರಿಗೆ ತೆನೆಯನ್ನು ನೀಡಲು ಈಗಾಗಲೇ ಸಿದ್ಧತೆ ಮಾಡಲಾಗಿದೆ. ಕಳೆದ ಬಾರಿ 2 ಸಾವಿರ ಕ್ಕಿಂತಲೂ ಅಧಿಕ ಭಕ್ತರು ದೇಗುಲದಿಂದ ತೆನೆಯನ್ನು ಮನೆಗೆ ಕೊಂಡೊಯ್ದಿದ್ದರು. ಈ ಬಾರಿಯೂ ಅದಕ್ಕಿಂತಲೂ ಹೆಚ್ಚಿನ ಭಕ್ತರು ತೆನೆಯನ್ನು ಕೊಂಡೊಯ್ಯಲು ಬರುವ ನಿರೀಕ್ಷೆ ಇದೆ.
75 ಸೆಂಟ್ಸ್ ಗದ್ದೆಯಲ್ಲಿ ಭತ್ತದ ಕೃಷಿ
ಈ ಬಾರಿ 75 ಸೆಂಟ್ಸ್ ಗದ್ದೆಯಲ್ಲಿ ಭತ್ತ ಬೇಸಾಯಕ್ಕೆ ತಯಾರು ಮಾಡಲಾಗಿದೆ. ಇದು ವರ್ಷ ಕಳೆದಂತೆ ಜಾಸ್ತಿಯಾಗುತ್ತಿದೆ. ಕಳೆದ ಸಾಲಿನಲ್ಲಿ 60 ಸೆಂಟ್ಸ್ ಜಾಗದಲ್ಲಿ ಬೇಸಾಯ ಮಾಡಲಾಗಿತ್ತು. ಪ್ರಗತಿಪರ ಕೃಷಿಕ ತಾರಾನಾಥ ಶೆಟ್ಟಿ ವರ್ಣಬಾಗಿಲು ಪಡ್ಡೋಡಿ ಅವರ ಮಾರ್ಗದರ್ಶನದಲ್ಲಿ ನಿತಿನ್ ಚಿಕ್ಕಪರಾರಿ ಪೇಜಾವರ, ದಿನೇಶ್ ಶೆಟ್ಟಿ ದೋಟಮನೆ ಚಿಕ್ಕಪರಾರಿ ಅವರ ಸಹಕಾರದೊಂದಿಗೆ ಕೃಷಿ ಚಟುವಟಿಕೆಗಳು ನಡೆಯುತ್ತಿದೆ. ಭಕ್ತರು ತೆನೆಗಾಗಿ ಅಲೆದಾಟ ಮಾಡಬಾರದು, ದೇಗುಲದಿಂದ ಭಕ್ತರಿಗೆ ಸಿಗುವಂತಾಗಬೇಕೆಂಬ ಉದ್ದೇಶವಾಗಿದೆ.
ಈ ಬಾರಿ ಕೊಂಚ ತಡವಾಗಿ ನೇಜಿಗೆ ಬಿತ್ತನೆ ಮಾಡಲಾಗಿತ್ತು. ಚೌತಿ ಹಬ್ಬ ತಡವಾಗಿ ಬರುವುದರಿಂದ ಆ ಸಮಯಕ್ಕೆ ತಕ್ಕಂತೆ ತೆನೆ ಸಿಗುವಂತೆ ಭತ್ತ ಬೀಜ ಬಿತ್ತನೆ ಮಾಡಲಾಗಿತ್ತು. ಪೊರ್ಕೋಡಿ ದೇವಸ್ಥಾನದ ಎದುರಿನಲ್ಲಿರುವ ಪೊರ್ಕೋಡಿ ಪಾದಮನೆ ಪ್ರಶಾಂತ್ ಶೆಟ್ಟಿ ಅವರ ಎರಡು ಗದ್ದೆಯಲ್ಲಿ ಉಳುಮೆ ಮಾಡಲಾಗಿದೆ. ನೇಜಿ ಕೀಳುವ ಹಾಗೂ ನಾಟಿ ಮಾಡುವ ಕಾರ್ಯವೂ ಶುರುವಾಗಿದೆ.
ಭಕ್ತರ ಸಂಖ್ಯೆ ಹೆಚ್ಚಳ
ಚೌತಿಹಬ್ಬದಂದು ತೆನೆಯನ್ನು ದೇವಸ್ಥಾನ ವತಿಯಿಂದ ನೀಡಲು ಪ್ರತಿವರ್ಷ ಭತ್ತ ಬೇಸಾಯ ಮಾಡಲಾಗುತ್ತದೆ. ವರ್ಷದಿಂದ ವರ್ಷಕ್ಕೆ ತೆನೆ ಕೊಂಡೊಯ್ಯಲು ಭಕ್ತರ ಸಂಖ್ಯೆ ಜಾಸ್ತಿಯಾಗುತ್ತಾ ಇದೆ. ಇದನ್ನು ಮನಗಂಡು ಈ ಬಾರಿ ಹೆಚ್ಚು ಜಾಗದಲ್ಲಿ ಭತ್ತದ ಬೇಸಾಯ ಮಾಡಲಾಗುತ್ತಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ| ಜಯರಾಮ್ ಶೆಟ್ಟಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್